ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಯುವಕ
Team Udayavani, Dec 6, 2021, 2:22 PM IST
ಕೆ.ಆರ್.ಪೇಟೆ : ಧಾರಾಕಾರ ಮಳೆಗೆ ಹಳ್ಳದಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಯುವಕನೊಬ್ಬನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಸಾರಂಗಿ ಮತ್ತು ಶ್ಯಾರಹಳ್ಳಿ ಮಧ್ಯೆ ಇರುವ ಹೇಮಾವತಿ ಮೇಲ್ಗಾಲುವೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ.
ಕೈಗೋನಹಳ್ಳಿಯ ಶಿವಲಿಂಗೇಗೌಡ ಅವರ ಮಗ ಉದಯ್ (30) ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ನತದೃಷ್ಟ.
ಬೈಕ್ ಸಮೇತ ಕೊಚ್ಚಿಹೋದ: ಮೃತ ಉದಯ್ ಮಲ್ಲೇನಹಳ್ಳಿಯ ತನ್ನ ಸಹೋದರಿಯ ಮನೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಜೋರಾಗಿ ಮಳೆ ಬಂದಿದೆ. ಮಳೆ ಸ್ವಲ್ಪ ಕಡಿಮೆಯಾದಾಗ ಊರಿಗೆ ಹೋಗಿ ಬಿಡೋಣ ಎಂದು ಬೈಕ್ನಲ್ಲಿ ಬರುತ್ತಿದ್ದಾಗಸಾರಂಗಿ ಹೇಮಾವತಿ ಮೇಲ್ಗಾಲುವೆಯ ಕೆಳ ಭಾಗಇರುವ ಹಳ್ಳದಲ್ಲಿ ಪ್ರವಾಹದ ಮಾದರಿಯಲ್ಲಿನೀರು ಉಕ್ಕಿ ಹರಿದ ಪರಿಣಾಮ ಉದಯ್ ಬೈಕ್ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ವಿಷಯ ತಿಳಿದ ತಕ್ಷಣ ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ ಬೈಕ್ ಪತ್ತೆಯಾಗಿದೆ. ಆದರೆ ಉದಯ್ ಶವ ಪತ್ತೆಯಾಗಿರುವುದಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಭಾನುವಾರಸಂಜೆಯವರೆಗೂ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ. ಕತ್ತಲಾದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸೋಮವಾರ ಶವ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಯಲಿದೆ.
ಸೇತುವೆ ನಿರ್ಮಿಸಲು ಬೇಡಿಕೆ: ಸದರಿ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಶ್ಯಾರಹಳ್ಳಿ, ಗೊರವಿ, ಹೆತ್ತಗೋನಹಳ್ಳಿಗ್ರಾಮಗಳಿಗೆ ಹೋಗುವಸಾರಿಗೆ ಬಸ್ಗಳು ಇದೇಮಾರ್ಗವಾಗಿ ಓಡಾಡುತ್ತವೆ. ಹಾಗಾಗಿ ಕೂಡಲೇ ಈ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕು ಎಂಬುದುಈ ಮಾರ್ಗದ ಪ್ರಯಾಣಿಕರ ಹತ್ತಾರು ವರ್ಷಗಳ ಒತ್ತಾಯವಾಗಿದೆ.
ಇದೇ ಕೈಗೋನಹಳ್ಳಿ ಗ್ರಾಮದವರಾದ ಸಚಿವ ನಾರಾಯಣಗೌಡ ಅವರು ಕೂಡಲೇ ಇಲ್ಲಿ ಸೇತುವೆನಿರ್ಮಿಸಿಕೊಡಲು ಸೂಕ್ತ ಕ್ರಮ ವಹಿಸಬೇಕು. ಈ ಮೂಲಕ ಮಳೆಗಾಲದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವಾಹನಗಳು ಓಡಾಡಲುಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಸದರಿಮಾರ್ಗದ ಪ್ರಯಾಣಿಕರು ಸಚಿವರನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!