ನರ್ಸರಿ ಶಾಲೆಗಳಾಗಿ ಪರಿವರ್ತಿಸಿ
Team Udayavani, Jul 6, 2019, 4:26 PM IST
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆ ಯರು ,ಸಹಾಯಕಿಯರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮದ್ದೂರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಅಂಗನವಾಡಿ ಕಾರ್ಯಕರ್ತೆ ಯರು ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿ ಕೈಗೊಂಡು ಶಿರಸ್ತೇದಾರ್ ಪ್ರಭಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಅಂಗನವಾಡಿ ಕೇಂದ್ರಗಳನ್ನು ಇಂಗ್ಲಿಷ್ ಕಾನ್ವೆಂಟ್ ಹಾಗೂ ನರ್ಸರಿ ಶಾಲೆಗಳಾಗಿ ಪರಿವರ್ತಿಸಬೇಕೆಂದು ಒತ್ತಾಯಿಸಿದರು.
2 ವರ್ಷ 6 ತಿಂಗಳ ಮಕ್ಕಳನ್ನು ಅಂಗನವಾಡಿ ನರ್ಸರಿ ಶಾಲೆಗೆ ಸೇರಿಸಿಕೊಳ್ಳಲು ಆದೇಶ ಹೊರಡಿಸಬೇಕು. ಮಕ್ಕಳಿಗೆ ಬೇಕಾಗಿರುವ ಪಠ್ಯ ಪುಸ್ತಕ, ಆಟಿಕೆ ಸಾಮಗ್ರಿ ಹಾಗೂ ಶೂ ಸಾಕ್ಸ್ ವಿತರಿಸಲು ಮುಂದಾಗಬೇಕು. ಸರ್ಕಾರಕ್ಕೆ ಸಂಪನ್ಮೂಲ ಉಳಿಯಬೇಕಾದಲ್ಲಿ ಎಲ್ಕೆಜಿ ಮತ್ತು ಯುಕೆಜಿ ನರ್ಸರಿ ಸ್ಕೂಲ್ಗಳನ್ನು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿಸ್ತರಿಸುವ ಜತೆಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೋವಾ ಸರ್ಕಾರ ರೀತಿ ಸೇವಾವಧಿ ಆಧಾರದ ಮೇಲೆ ವೇತನ ನೀಡುವಂತೆ ಆಗ್ರಹಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ, ತನುಜಾ, ಆನಂದಮ್ಮ, ಶೈಲಜಾ, ಶಿವಲಿಂಗಮ್ಮ, ಮಂಜುಳಾ, ಮೀನಾಕ್ಷಿ, ಕುಮುದಾ, ಸುಶೀಲಮ್ಮ, ಶೋಭಾ, ನಾಗಮ್ಮ, ಸುಮಿತ್ರ, ವರಲಕ್ಷ್ಮೀ, ಪದ್ಮಾಕ್ಷಿ, ನಾಗರತ್ನ, ಶಾರದಾ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ