ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ಸಾವು
Team Udayavani, Apr 3, 2021, 7:12 PM IST
ಮದ್ದೂರು: ರಸ್ತೆ ಬದಿ ಅಳವಡಿಸಿದ್ದ ತಡೆ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲ ನಾಯಕನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಜರುಗಿದೆ.
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಅಮಿರ್ಖಾನ್ ಅವರ ಪುತ್ರ ಸಾದಿಕ್ (29) ಹಾಗೂ ನಜೀರ್ಪಾಷಾ ಅವರ ಪುತ್ರ ಶಬೀರ್ (27) ಮೃತಪಟ್ಟ ಯುವಕ ರಾಗಿದ್ದಾರೆ. ಕರ್ತವ್ಯ ನಿಮಿತ್ತ ಮದ್ದೂರು ಪಟ್ಟಣಕ್ಕೆ ಆಗಮಿಸಿ ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ತಾಲೂಕಿನ ಮಲ್ಲ ನಾಯಕನಹಳ್ಳಿ ಹಾಗೂ ಛತ್ರಲಿಂಗನದೊಡ್ಡಿ ಗ್ರಾಮಗಳ ಮಧ್ಯೆ ಇರುವ ರಸ್ತೆಬದಿಯ ತಡೆಗೋಡೆ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಶಬೀರ್ ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯ ಗೊಂಡ ಸಾದಿಕ್ ಅವರನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಮೃತರ ಸಂಬಂಧಿ ಅಲ್ಲಾಬಕ್ಷ ನೀಡಿದ ದೂರಿನ ಮೇರೆಗೆ ಕೆಸ್ತೂರು ಪೊಲೀಸರು ಪ್ರಕ ರಣ ದಾಖಲಿಸಿಕೊಂಡು ತಾಲೂಕು ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ ಬಳಿಕ ವಾರಸು ದಾರರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ