ಮೀಸಲು ಕಾಯಿದೆ ತಿದ್ದುಪಡಿಗೆ ಆಗಹ್ರ
Team Udayavani, Feb 24, 2020, 4:55 PM IST
ಮಳವಳ್ಳಿ: ಹಕ್ಕುಗಳನ್ನು ಕಿತ್ತುಕೊಳ್ಳುತ್ತಿರುವ ಸಂದರ್ಭದಲ್ಲಿ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದರು, ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ತಂದು ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.
ಪಟ್ಟಣದ ಅಂಚೆ ಕಚೇರಿ ಎದುರು ಭಾರತೀಯ ಭೌದ್ಧ ಮಹಾಸಭಾ, ಅಂಬೇಡ್ಕರ್ ವಿಚಾರ ವೇದಿಕೆ ಸೇರಿ ವಿವಿಧ ಸಂಘಟನೆಗಳು ಮೀಸಲಾತಿ ಮೂಲಭೂತ ಹಕ್ಕಲ್ಲ, ಬಡ್ತಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂಬ ಸುಪ್ರಿಂಕೋರ್ಟ್ ತೀರ್ಪು ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮೀಸಲಾತಿ ವಿರೋಧಿ ತೀರ್ಪುಗಳು ನಿಲ್ಲಬೇಕಾದರೆ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಕಾಯ್ದೆಗಳನ್ನು ಸಂವಿಧಾನದ 9ನೇ ಪರಿಚ್ಚೇದಕ್ಕೆ ಸೇರಿಸಿ ನ್ಯಾಯಾಲಯಗಳ ವ್ಯಾಪ್ತಿಯಿಂದ ಹೊರ ತರಬೇಕು. ಈ ಬಗ್ಗೆಎಲ್ಲಾ ಹಿಂದುಳಿದ ವರ್ಗಗಳ ಜನಪ್ರತಿನಿಧಿಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿದರು.
ಮೀಸಲಾತಿ ಮೂಲಭೂತ ಹಕ್ಕಲ್ಲ, ಬಡ್ತಿ ಮೀಸಲಾತಿ ನೀಡುವುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂಬ ಸುಪ್ರಿಂ ಕೋರ್ಟ್ ಆದೇಶದ ತೀರ್ಪುನ್ನು ಮನಸ್ಮತಿ ಆಧಾರದ ಮೇಲೆ ನೀಡಲಾಗಿದೆ. ಹೈಕೋರ್ಟ್ ಮತ್ತು ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲಾತಿ ಇಲ್ಲದಿರುವ ಕಾರಣ ಶೇ.90 ಮಂದಿ ಬ್ರಾಹ್ಮಣ ಸಮುದಾಯವೇ ಇದೆ. ಹೀಗಾಗಿ ಸಂವಿಧಾನ ಒಪ್ಪಿಕೊಳ್ಳುವುದಕ್ಕಿಂತ ಅವರು ಮನಸ್ಮತಿಯನ್ನು ಒಪ್ಪಿಕೊಂಡಿರುವ ಪರಿಣಾಮ ಮೀಸಲಾತಿ ವಿರೋಧಿ ತೀರ್ಪುಗಳು ಪದೇ ಪದೇ ಬರುತ್ತಿವೆ. ಹೀಗಾಗಿ ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ವರ್ಗಗಳಿಗೂ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ತಾಪಂ ಉಪಾಧ್ಯಕ್ಷ ಸಿ.ಮಾಧು, ಪುರಸಭೆ ಸದಸ್ಯ ಸಿದ್ದರಾಜು, ಜೆಡಿಎಸ್ ಮುಖಂಡ ಸುಹಾಸ್ ಮಹದೇವಯ್ಯ, ಜಯರಾಜು, ಮಹೇಶ್, ಭರತ್ರಾಜ್, ಕೆಂಪಯ್ಯ, ನಟರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ