ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆಗೆ ಆಗ್ರಹ


Team Udayavani, Jul 24, 2020, 7:57 AM IST

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆಗೆ ಆಗ್ರಹ

ಮಂಡ್ಯ: ಕೋವಿಡ್ ಸೋಂಕಿತ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಸಿಐಟಿಯು, ಕರ್ನಾಟಕ ಪ್ರಾಂತ ರೈತಸಂಘ, ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್‌-19 ಸಂಕಷ್ಟದಲ್ಲಿ ಜನರ ಜೊತೆ ನಿಂತು ಆರ್ಥಿಕ ಸಂಕಷ್ಟ ಹಾಗೂ ಆರೋಗ್ಯ ರಕ್ಷಣೆಗೆ ಸರ್ಕಾರ ತೊಡಗಿಸಿ ಕೊಳ್ಳಬೇಕು. ಸೋಂಕನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆಗೆ ಕ್ರಮ ವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ.3ರಷ್ಟು ವೆಚ್ಚ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಮಾಸಿಕ 7,500 ರೂ. ನೆರವು ಘೋಷಿಸಬೇಕು ಎಂದು ಒತ್ತಾಯಿಸಿದರು.

ಆಹಾರ, ಆರೋಗ್ಯ ಕಿಟ್‌ ಕಲ್ಪಿಸಿ: ಎಲ್ಲ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರ ಸಾಮಗ್ರಿ, ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ ಕಲ್ಪಿಸಬೇಕು. ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲ ಪಡಿಸಲು ಜಿಡಿಪಿಯ ಶೇ.5ನ್ನು ಸಾರ್ವಜನಿಕ ಆರೋಗ್ಯ ವಲಯಕ್ಕೆ ಮೀಸಲಿಡಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಖಾಸಗೀ ಕರಣವನ್ನು ನಿಲ್ಲಿಸಿ, ಎಲ್ಲರಿಗೂ ಉಚಿತ ಸಾರ್ವತ್ರಿಕ ಆರೋಗ್ಯ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಎಲ್ಲರಿಗೂ ಉದ್ಯೋಗ ನೀಡಿ: ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕುಟುಂಬಕ್ಕೆ ತಲಾ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ 600 ರೂ. ಹೆಚ್ಚಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10 ಸಾವಿರ ರೂ. ನೀಡಬೇಕು. ಎಲ್ಲ ರೀತಿಯ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ವೇತನ ನೀಡುವಂತೆ ಕ್ರಮ ವಹಿಸಬೇಕು. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಯಿಸಿದರು.

ವಿಶೇಷ ಪ್ಯಾಕೇಜ್‌ ನೀಡಿ: ಸರ್ಕಾರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ಬಿಸಿಯೂಟ ನೌಕರರಿಗೆ ಏಪ್ರಿಲ್‌, ಮೇ ,ಜೂನ್‌ ತಿಂಗಳ ವೇತನವನ್ನು ನೀಡಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಬಾಕಿ ಇರುವ 18 ತಿಂಗಳ ವೇತನ ನೀಡಬೇಕು. ಬೀಡಿ ಕಾರ್ಮಿ ಕರು, ಬೀದಿಬದಿ ವ್ಯಾಪಾರಿಗಳು ಮತ್ತು ಮನೆ ಕೆಲಸದ ಕಾರ್ಮಿಕರು, ಇತರೆ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ, ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಂ.ಪುಟ್ಟಮಾಧು, ಎಲ್‌.ಕೃಷ್ಣೇಗೌಡ, ಟಿ.ಯಶವಂತ, ಸಿ.ಕುಮಾರಿ, ಎಂ.ಎಂ. ಶಿವಕುಮಾರ್‌, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.