ಗ್ರಾಪಂ ಪಿಡಿಒ ವಜಾಕ್ಕೆ ಆಗ್ರಹ

ಗ್ರಾಪಂ ಅಧ್ಯಕ್ಷೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Oct 20, 2020, 3:28 PM IST

MANDYA-TDY-1

ಮಂಡ್ಯ: ಹಲಗೂರು ಗ್ರಾಮ ಪಂಚಾಯ್ತಿ ಪಿಡಿಒ ಎ.ಬಿ.ಶಶಿಧರ್‌ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಗ್ರಾಪಂಸದಸ್ಯರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಲಗೂರು ಗ್ರಾಪಂ ಪಿಡಿಒ ಎ.ಬಿ.ಶಶಿಧರ್‌ಹಾಗೂ ಅಧ್ಯಕ್ಷೆ ಮಂಗಳಮ್ಮ ಸೇರಿ ಪಂಚಾಯ್ತಿಯ ವಿವಿಧ ಯೋಜನೆಯಲ್ಲಿ ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ. ಇದರ ಬಗ್ಗೆ ತಾಪಂ ವತಿಯಿಂದ ತನಿಖೆ ನಡೆಸ ಲಾಗಿದ್ದು, ವರದಿಯಲ್ಲಿ ಸುಮಾರು 30 ಲಕ್ಷ ರೂ. ಹಣ ದುರುಪಯೋಗವಾಗಿರುವುದು ದೃಢಪಟ್ಟಿದೆ. ಆದ್ದರಿಂದ ಪಿಡಿಒ ಎ.ಬಿ.ಶಶಿಧರ್‌ ಪ್ರೊಬೆಷನರಿ ಅವಧಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆಸಿರುವುದರಿಂದ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ನಡೆದಿದೆ ಅವ್ಯವಹಾರ: 2018-19ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 12 ಲಕ್ಷ ರೂ., ಗಾಂಧಿ ಗ್ರಾಮ ಪುರಸ್ಕಾರ ಯೋಜನೆಯಡಿ 5 ಲಕ್ಷ ರೂ., 14ನೇ ಹಣಕಾಸಿನಯೋಜನೆಯಡಿ ಸುಮಾರು 11 ಲಕ್ಷ ರೂ. ಹಾಗೂ ಗ್ರಾಪಂ ನಿಧಿಯಲ್ಲಿ 3 ಲಕ್ಷ ರೂ. ಹಣ ಅವ್ಯವಹಾರ ನಡೆಸಲಾಗಿದೆ ಎಂದು ದೂರಿದರು.

ಕ್ರಮ ಕೈಗೊಂಡಿಲ್ಲ: ಗ್ರಾಮ ಪಂಚಾಯ್ತಿಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ಮೀಸಲಿರಿಸಿಸರಿಯಾಗಿ ಬಳಕೆ ಮಾಡಿಲ್ಲ. ನರೇಗಾ ಯೋಜನೆಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಹಲಗೂರು ಗ್ರಾಮದಲ್ಲಿ ಚರಂಡಿ, ರಸ್ತೆಗಳನ್ನು ಸರಿಯಾಗಿ ಕ್ಲೀನ್‌ ಮಾಡದೆ ದುರ್ವಾಸನೆಯಿಂದಕೂಡಿದೆ. ಗ್ರಾಪಂಕಟ್ಟಡಕ್ಕೆಹಣ ಮೀಸಲಿದ್ದರೂ, ಕಟ್ಟಡ ನಿರ್ಮಾಣದ ಬಗ್ಗೆ ಯಾವುದೇ ರೀತಿಯ ಕ್ರಮವಹಿಸಿಲ್ಲ. ಬೀದಿ ದೀಪ ನಿರ್ವಹಣೆ ಮಾಡಿಲ್ಲ ಎಂದು ಕಿಡಿಕಾರಿದರು.

ಸಾಮಾನ್ಯ ಸಭೆ ನಡೆಸಿಲ್ಲ: ಪಿಡಿಒ ಸಾರ್ವಜನಿಕರ ಜತೆ ಸರಿಯಾಗಿ ನಡೆದುಕೊಳ್ಳುವುದಿಲ್ಲ. ಗ್ರಾಪಂನಲ್ಲಿ ಸ್ಟಾಕ್‌ ಬುಕ್‌ ಮತ್ತು ಪ್ರೊಮ್‌ ಟು ರಿಜಿಸ್ಟ್ರಾರ್‌ ನಿರ್ವಹಣೆ ಮಾಡಿಲ್ಲ. ಗ್ರಾಮಸಭೆ ಮತ್ತು ವಾರ್ಡ್‌ ಸಭೆಯನ್ನು ಸರಿಯಾಗಿ ನಡೆಸಿರುವುದಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಇಬ್ಬರು ಸೇರಿ 8 ತಿಂಗಳ ಕಾಲ ಸಾಮಾನ್ಯ ಸಭೆ ನಡೆಸಿಲ್ಲ. ಇಲಾಖೆ ಅನುಮತಿ ಇಲ್ಲದೆ ಪಿಡಿಒ ಎ.ಬಿ.ಶಶಿಧರ್‌ ಐಷಾರಾಮಿ ಹೊಂಡೈ ಕಾರುಖರೀದಿಸಿದ್ದಾರೆ. ಆದ್ದರಿಂದ ಕೂಡಲೇ ಪಿಡಿಒ ಶಶಿಧರ್‌ ಹಾಗೂ ಅಧ್ಯಕ್ಷೆ ಮಂಗಳಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಹಣ ವಸೂಲಿ ಮಾಡುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಸದಸ್ಯರಾದ ಎಂ.ಶ್ರೀಕಂಠ, ಮಂಜುನಾಥ, ಅಬ್ಟಾಸ್‌, ಬಾಬು, ಅಕ್ರಂ ಉಲ್ಲಾ, ಪಾಪಣ್ಣ, ರಮಾನಂದ, ರವಿಗೌಡ, ಕೆಂಪಣ್ಣಸಾಗ್ಯ, ಹುರುಗಲವಾಡಿ ರಾಮಯ್ಯ, ದೇವರಾಜ್‌, ಶಿವಕುಮಾರ ಹುಲ್ಲೇಗಾಲ, ಜಕಾವುಲ್ಲ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.