ನಿವೇಶನ ನೀಡುವಂತೆ ಒತ್ತಾಯ


Team Udayavani, Oct 3, 2020, 1:47 PM IST

ನಿವೇಶನ ನೀಡುವಂತೆ ಒತ್ತಾಯ

ಮಂಡ್ಯ: ನಿವೇಶನರ ಹಿತರಿಗೆ ಸರ್ಕಾರಿ ಭೂಮಿ ನೀಡಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸತಾಯಿಸುತ್ತಿರುವುದನ್ನು ಖಂಡಿಸಿ, ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಹಾಗೂ ಬೂದನೂರು ಗ್ರಾಪಂ ವ್ಯಾಪ್ತಿ ನಿವೇಶನ ರಹಿತರು ಪ್ರತಿಭಟನಡೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿ ಯಲ್ಲಿ 170 ಕ್ಕೂಹೆಚ್ಚು ಬಡ ನಿವೇಶನ ರಹಿತ ಕುಟುಂಬಸ್ಥರಿಗೆ ಸರ್ಕಾರಿ ಭೂಮಿ ಗುರುತಿಸಿ ನೀಡುವಂತೆ ಒತ್ತಾಯಿಸಿ, 4 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಯಾವುದೇಕ್ರಮಕೈಗೊಂಡಿಲ್ಲ ಎಂದುಕಿಡಿಕಾರಿದರು.

ವಾರದೊಳಗೆ ಬೂದನೂರು ಗ್ರಾಪಂ ವ್ಯಾಪ್ತಿಯಲ್ಲಿ ಗುರುತಿಸಿರುವ ಸರ್ಕಾರಿ ಭೂಮಿಯ ಅಳತೆ, ಹದ್ದುಬಸ್ತ್ ಮಾಡಿಕೊಡಬೇಕು. ಸುಳ್ಳು ವರದಿ ಮಾಡಿ ತಾಲ್ಲೂಕು ಆಡಳಿತದ ದಿಕ್ಕು ತಪ್ಪಿಸುತ್ತಿರುವ ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರ ವಿರುದ್ಧ ಕ್ರಮಕೈಗೊಂಡು ಅಮಾನತು ಮಾಡಬೇಕು. ಗುರುತಿಸಿರುವ ಸರ್ಕಾರಿ ಭೂಮಿ2 ಎಕರೆ ಅಲ್ಲದೆ ಒಟ್ಟು ಇರುವ6.20 ಎಕರೆ ಭೂಮಿಯನ್ನು ನಿವೇಶನರಹಿತರಿಗೆ ಮೀಸಲಿಡ ಬೇಕು. ಬೇಡಿಕೆ ಈಡೇರಿಸದಿದ್ದರೆ ಮುಂಬರುವ ಗ್ರಾಪಂ ಚುನಾವಣೆಯಲ್ಲಿ ನಿವೇಶನರಹಿತರ ಕುಟುಂಬ ಗಳು ಮತದಾನ ಬಹಿಷ್ಕಾರ ಮಾಡುವ ನಿರ್ಣಯ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ,ಕರುನಾಡ ಸೇವಕರು ಸಂಘಟನೆಯ ಗೌರವಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ವಕೀಲ ಜೆ.ರಾಮಯ್ಯ, ಮಾದೇವಿ, ರಾಧಿಕಾ, ವೆಂಕಟೇಶ್‌, ನಾಗ ರತ್ನ, ಮಂಗಳ, ಸರೋಜಮ್ಮ, ಶಾಂತಮ್ಮ, ರಾಜೇ ಶ್ವರಿ, ನಾಗಮ್ಮ, ಕವಿತ, ರೂಪ, ಸುಧಾ, ರಾಧ, ಸವಿತ, ಲಕ್ಷ್ಮಮ್ಮ, ಯಲ್ಲಮ್ಮ, ಕಾಮಾಕ್ಷಿ, ಶಾಂತಿ, ನೀಲಾ, ಲಕ್ಷ್ಮೀ, ಅಂಜಲಿ, ಮಂಜುಳ,ಕಾಳಮ್ಮ, ರಾಣಿಯಮ್ಮ ಹಾಜರಿದ್ದರು.

ಸಮಾನ ವೇತನ , ಸೇವಾಭದ್ರತೆಗಾಗಿ ಮನವಿ :

ಮಂಡ್ಯ: ಸಮಾನಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ನೀಡಿ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ,ಕರ್ನಾಟಕ ರಾಜ್ಯ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ಕಾರ್ಯಕರ್ತರು ನಡೆಸುತ್ತಿರುವ ಮುಷ್ಕರ9ನೇ ದಿನವೂ ಮುಂದುವರಿದಿದ್ದು, ಶುಕ್ರವಾರ ಗಾಂಧಿಜಯಂತಿ ಹಿನ್ನೆಲೆಯಲ್ಲಿ ಗಾಂಧಿಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಾಸಕ ಎಂ.ಶ್ರೀನಿವಾಸ್‌ಗೆಮನವಿ ಸಲ್ಲಿಸಿದರು.

ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ನೀಡಿ ಕಾಯಂಗೊಳಿಸಬೇಕು. ಎಲ್ಲ ಹುದ್ದೆಗಳನ್ನುಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ಏಪ್ರಿಲ್‌1 ದಿನದ ವಿರಾಮವನ್ನು ರದ್ದುಪಡಿಸಿ ಆದೇಶ ನೀಡಬೇಕು. ಎಲ್ಲ ಹುದ್ದೆಗಳಿಗೆ ವೇತನ ಭತ್ಯೆಗಳು ಮತ್ತು ವೇತನ ಶ್ರೇಣಿ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ವೈದ್ಯಕೀಯ ಶಿಕ್ಷಣ ಇಲಾಖೆ ಜಾರಿ ಮಾಡಿರುವ ಏಕರೂಪ ವೇತನದ ಮಾದರಿಯಲ್ಲಿ ಎಲ್ಲ ನೌಕರರಿಗೂ ಜಾರಿ ಮಾಡಲುಕ್ರಮ ವಹಿಸಬೇಕು. ಎಲ್ಲ ನೌಕರರಿಗೂ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿ ಮಾಡಬೇಕು. ಒಳಗುತ್ತಿಗೆಯಲ್ಲಿಕೆಲಸ ಮಾಡುವವರಿಗೆ ಸಿಗುವ ಸೌಲಭ್ಯ ಹೊರಗುತ್ತಿಗೆ ನೌಕರರಿಗೂ ಸಿಗಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾದೇಗೌಡ, ಉಮೇಶ್‌, ಡಿ ಗ್ರೂಪ್‌ ನೌಕರರ ಸಂಘದ ಉಪಾಧ್ಯಕ್ಷೆ ಚಂದ್ರಕಲಾ, ಮಹೇಶ್‌, ತಾಳಶಾಸನ ಮೋಹನ್‌, ಮಹದೇವು, ಶಿವಣ್ಣ,ಕೇಶವ, ದಿವಾಕರ್‌ ಹಾಜರಿದ್ದರು.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.