ನೀರಿನ ಕೊರತೆ ನಿವಾರಣೆಗೆ ಹನಿ ನೀರಾವರಿ ಬಳಸಿ

ಶೇ.50ರಿಂದ 80ರಷ್ಟು ನೀರು ಉಳಿತಾಯ: ಜೋಷಿ • ಹನಿ ನೀರಾವರಿಯಲ್ಲಿ ಕ್ಯಾರೆಟ್, ಮೂಲಂಗಿ ಬೆಳೆಯ ಪ್ರಾತ್ಯಕ್ಷಿಕೆ

Team Udayavani, May 12, 2019, 12:24 PM IST

mandya-tdy-4..

ಮಳವಳ್ಳಿ: ಕಾಲುವೆಗಳ ಮೂಲಕ ಬರುವ ನೀರನ್ನು ಭೂಮಿಗೆ ಹಾಯಿಸಿ ಕೃಷಿ ಮಾಡುವ ವಿಧಾನದ ಬದಲು ಹನಿ ನೀರಾವರಿಯನ್ನು ಆಳವಡಿಸಿ ಕೊಂಡರೇ ಹೆಚ್ಚು ಇಳುವರಿಯ ಜೊತೆಗೆ ನೀರಿನ ಕೊರತೆಯೂ ಕಡಿಮೆ ಮಾಡಿ ಮತ್ತಷ್ಟು ರೈತರಿಗೆ ಅನುಕೂಲವಾಗಲಿದೆ ಎಂದು ಬೇಸಾಯ ತಜ್ಞ ಪಿ.ವಿ.ಜೋಷಿ ತಿಳಿಸಿದರು.

ತಾಲೂಕಿನ ಉಢಪೆಬೂವಳ್ಳಿ(ಕಣಿಕಹಳ್ಳಿ)ಯಲ್ಲಿ ಪೂರಿಗಾಲಿ ಸಂಪೂರ್ಣ ಸ್ವಯಂ ಚಾಲಿತ ಹನಿ ಹಾಗೂ ತುಂತುರು ನೀರಾವರಿ ಯೋಜನೆಯಲ್ಲಿ ಬೆಳೆದಿರುವ ಕ್ಯಾರೆಟ್ ಹಾಗೂ ಮೂಲಂಗಿ ವಿಶೇಷ ಹೈಬ್ರಿಡ್‌ ತಳಿಯ ಮಾದರಿ ಪ್ರಾತ್ಯಕ್ಷತೆಯಲ್ಲಿ ರೈತರಿಗೆ ಮಾಹಿತಿ ನೀಡುತ್ತಾ ಮಾತನಾಡಿ, ಈ ಬೆಳೆಗಳಿಗೆ ಸೂಕ್ತ ಕೃಷಿ ಪದ್ದತಿ ಅನುಸಾರವಾಗಿ ಮಣಿನ ಪರೀಕ್ಷೆ ನೀರಿನ ಪರೀಕ್ಷೆ, ಸೂಕ್ತ ರಸಾವರಿ ಗೊಬ್ಬರಗಳ ಬಳಕೆ. ಎತ್ತರದ ಮಡಿ ಕಟ್ಟುವಿಕೆ, ಹಾಗೂ ತುಂತುರು ನೀರಾವರಿ ಬಳಕೆಯಿಂದ ಉತ್ತಮವಾದ ಬೆಳೆಯನ್ನು ಬೆಳೆಯಬಹುದಾಗಿದೆ ಎಂದರು.

ಪ್ರಾತ್ಯಕ್ಷತೆಗೆ ಪೂರಿಗಾಲಿ ಹನಿ ನೀರಾವರಿ ಯೋಜನೆಯಡಿಯಲ್ಲಿರವ ಎಲ್ಲಾ 50 ಗ್ರಾಮಗಳ ರೈತ ಪಲಾನುಭವಿಗಳಿಗೆ ಭೇಟಿಯಾಗುವಂತೆ ವ್ಯವಸ್ಥೆ ಮಾಡಿ ಪ್ರಾತ್ಯಕ್ಷತೆ ಬಗ್ಗೆ ವಿವರಣೆ ನೀಡಲಾಗಿದೆ. ಹತ್ತು ದಿನಗಳ ಕಾಲ ರೈತರಿಗೆ ಸಮಗ್ರ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿಯವರೆಗೂ ಸುಮಾರು 500ಕ್ಕೂ ಹೆಚ್ಚು ರೈತರನ್ನು ಕರೆತಂದು ಹನಿ ನೀರಾವರಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹನಿ ನೀರಾವರಿ ಯೋಜನೆಯಿಂದ ನೀರಿನ ಸದ್ಬಳಕೆ ಹಾಗೂ ಬೆಳೆ ಉತ್ಪಾದನೆಯಲ್ಲಿ ಹೆಚ್ಚಳ ಕಾಣಬಹುದು. ಈ ಪದ್ಧತಿಯಿಂದ ಬೆಳೆಗಳಿಗೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ನೀಡಬಹುದು. ಶೇ.50ರಿಂದ 80ರಷ್ಟು ನೀರಿನ ಉಳಿತಾಯವಾಗಲಿದೆ ಎಂದರು.

ಸಾಂಪ್ರದಾಯಿಕ ವಿಧಾನದಲ್ಲಿ ನೀರನ್ನು ಸಮಾನ್ಯವಾಗಿ ಮಣ್ಣಿನ ಕಾಲುವೆಯಲ್ಲಿ ಹಾಯಿಸುವುದರಿಂದ ಶೇ.30ರಿಂದ 40 ರಷ್ಟು ನೀರು ಪೋಲಾಗುತ್ತದೆ, ಜೊತೆಗೆ ಜಮೀನಿನ ಗುಣಮಟ್ಟವೂ ಕಡಿಮೆಯಾಗುತ್ತದೆ. ಆದರೆ, ಸೂಕ್ಷ್ಮ ನೀರಾವರಿ ಪದ್ದತಿಯಿಂದ ನೀರನ್ನು ಕೊಳವೆ ಮೂಲಕ ನೇರವಾಗಿ ಗಿಡಗಳ ಬುಡಕ್ಕೆ ಸಾಗಿಸಿ ಬೇರಿನ ವಲಯದ ಭಾಗ ನೆನೆಯುವಂತೆ ಮಾಡಿ ಗಿಡದ ಬೆಳವಣಿಗೆಗೆ ಅಗತ್ಯ ಇರುವಷ್ಟು ನೀರನ್ನು ಕೊಡುವುದರಿಂದ ಕಳೆಯೂ ಕಡಿಮೆಯಾಗಿ ಬೆಳೆ ಚನ್ನಾಗಿ ಬೆಳೆಯುತ್ತದೆ ಎಂದರು.

ಹನಿ ನೀರಾವರಿಯಿಂದ ಕೂಲಿಯ ಖರ್ಚು ಮಾಡಿಮೆಯಾಗುತ್ತದೆ, ಹೆಚ್ಚು ಲಾಭದ ಬೆಳೆಯನ್ನು ಬೆಳೆಯಬಹುದಾಗಿದೆ, ಪೂರಿಗಾಲಿ ಹನಿ ನೀರಾವರಿ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಂಡರೇ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರ ನಡೆದು ರೈತರು ಹೆಚ್ಚು ಅನುಕೂಲವನ್ನು ಪಡೆದುಕೊಳ್ಳಬಹುದಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಜೈನ್‌ ಇರಿಗೇಷನ್‌ ಸಿಬ್ಬಂದಿ ಹಾಗೂ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.