ಗ್ರಾಮ ಅಭಿವೃದ್ಧಿಗೆ ನರೇಗಾ ಬಳಸಿಕೊಳ್ಳಿ
Team Udayavani, Nov 6, 2019, 3:32 PM IST
ಕೆ.ಆರ್.ಪೇಟೆ: ಗ್ರಾಮೀಣ ಅಭಿವೃದ್ಧಿಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋ ಜನೆ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಅಘಲಯ ಗ್ರಾಪಂ ಅಧ್ಯಕ್ಷ ಧನಂಜಯ ಮನವಿ ಮಾಡಿದರು.
ತಾಲೂಕಿನ ಅಘಲಯ ಗ್ರಾಮಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ಪ್ರತಿ ಯೊಂದು ಹಳ್ಳಿಯಲ್ಲಿಯೂ ನರೇಗಾ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆಯಡಿ ಗ್ರಾಮಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುತ್ತಿದೆ ಎಂದು ಹೇಳಿದರು.
ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಗ್ರಾಮ ಸಭೆ ಏರ್ಪಡಿಸಲಾಗಿದೆ. ಗ್ರಾಮಸ್ಥರು ನಿಮ್ಮ ಗ್ರಾಮ, ನಿಮ್ಮ ರಸ್ತೆ, ಜಮೀನು ಮತ್ತಿತರ ಕಡೆಗಳಲ್ಲಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಮಾಹಿತಿ ನೀಡಿದರೆ ಕೂಡಲೇ ಕೆಲಸ ಆರಂಭಿಸಲಾಗುತ್ತದೆ. ಇದರೆ ಜೊತೆಗೆ ತಾವೇ ಜಾಬ್ಕಾರ್ಡ್ ಮಾಡಿಸಿಕೊಂಡು ನಿಮ್ಮ ಜಮೀನಿನಲ್ಲಿ ಇಂಗುಗುಂಡಿ, ರಸ್ತೆ ಅಭಿವೃದ್ಧಿ ಸೇರಿದಂತೆ ಇತರೆ ಕೆಲಸಗಳನ್ನು ಮಾಡಿಕೊಳ್ಳಬಹುದು. ಪ್ರತಿಯೊಬ್ಬರೂ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಿರುವ ಕಾರ್ಯಕ್ರಮ ಮಾಹಿತಿ ನೀಡಿದರು. ಗ್ರಾಪಂ ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯರಾದ ಭಾರತಿ, ಶಾಂತರಾಜು, ರುದ್ರೇಶ್, ಚಂದ್ರುಸಿಂಗ್, ಸೌಮ್ಯ, ಮಹೇಶ್, ಮಂಜುನಾಥ್, ಗೀತಾ, ಗ್ರಾಪಂ ನೋಡೆಲ್ ಅಧಿಕಾರಿ ಶ್ರೀಧರ್, ಸಹಾಯಕ ಕೃಷಿ ಇಲಾಖೆ ರೇಣುಕಾರಾಧ್ಯ, ವಿವಿಧ ಮಹಿಳಾ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆರು, ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ