ವೈರಮುಡಿ ಉತ್ಸವಕ್ಕೆ ಆಭರಣಗಳ ಹಸ್ತಾಂತರ
Team Udayavani, Mar 16, 2023, 3:50 PM IST
ಮೇಲುಕೋಟೆ: ಮೇಲುಕೋಟೆ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವದ ವಿಶೇಷ ಉತ್ಸವಗಳಲ್ಲಿ ಚೆಲುವನಾರಾಯಣ ಸ್ವಾಮಿ ಅಲಂಕಾರಕ್ಕಾಗಿ 56 ಬಗೆಯ ವೈವಿಧ್ಯಮಯ ಪುರಾತನಆಭರಣಗಳನ್ನು ಸ್ಥಾನೀಕರು ಅರ್ಚಕರು,ಪರಿಚಾರಿಗೆ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್ ಹಸ್ತಾಂತರಿಸಿದರು.
ಪಾಂಡವಪುರ ತಾಲೂಕು ಖಜಾನೆಯಲ್ಲಿದ್ದ ತಿರುವಾಭರಣ ಪೆಟ್ಟಿಗೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದು ಪಾರ್ಕಾವಣೆ ಮಾಡಲಾಯಿತು. ಬಂಗಾರ,ಮುತ್ತು ಹಾಗೂ ವಜ್ರಖಚಿತ ಆಭರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಚೆಲುವನಾರಾ ಯಣ ಸ್ವಾಮಿಯ ಅಲಂಕಾರಕ್ಕಾಗಿ ನೀಡಲಾಯಿತು.
ಶಂಖ, ಚಕ್ರ, ಗದಾಂಗಿ ಕಿರೀಟ ಬಂಗಾರದ ಬಟ್ಟಲು ಮುತ್ತುಮುಡಿ, ಮುತ್ತಿನ ಸರಗಳು ಕೋರಂಬ ಹೀಗೆ 56 ವೈವಿಧ್ಯಮಯ ಆಭರಣಗಳನ್ನು ಒಂದೊಂದಾಗಿ ಪರಿಶೀಲಿಸಿ, ದಾಖಲಿಸಿದ ನಂತರ ದೇವಾಲಯದ ಕೈಂಕರ್ಯಪರಿಗೆ ಹಸ್ತಾಂತರ ಮಾಡಲಾಯಿತು.
24ರ ರಾತ್ರಿ ಪ್ರಥಮ ತೆಪ್ಪೋತ್ಸವ: ಈ ಅಮೂಲ್ಯ ಪುರಾತನ ಆಭರಣಗಳು ಯುಗಾದಿ ಹಬ್ಬದಿಂದಲೇ ಚೆಲುವನಾರಾಯಣನನ್ನು ಅಲಂಕರಿಸಲಿವೆ. ಮಾರ್ಚ್ 24ರಂದು ರಾತ್ರಿ ನಡೆಯುವ ಪ್ರಥಮ ತೆಪ್ಪೋತ್ಸವದಂದುಮುತ್ತು ಮುಡಿ ಅಲಂಕಾರದೊಂದಿಗೆ ಈ ಎಲ್ಲಾಆಭರಣಗಳನ್ನು ಧರಿಸಲಾಗುತ್ತದೆ. ಇದರ ಜೊತೆಗೆ ವೈರಮುಡಿಯಂದು ಜಿಲ್ಲಾ ಖಜಾನೆಯಿಂದ ಬರುವ ವೈರಮುಡಿ -ರಾಜಮುಡಿ ಹಾಗೂ 16 ಬಗೆಯ ವಜ್ರಖಚಿತ ಆಭರಣಗಳೂ ಸಹ ಚೆಲುನಾರಾಯಣನನ್ನು ಬ್ರಹ್ಮೋತ್ಸವ ದಲ್ಲಿ ಅಲಂಕರಿಸಲಿದೆ. ವೈರಮುಡಿ ಕಿರೀಟಮಾತ್ರ ಒಂದು ರಾತ್ರಿ ಚೆಲುವನಾರಾಯಣನ್ನು ಅಲಂಕರಿಸಿದರೆ, ಉಳಿದ ಆಭರಣಗಳು ಬ್ರಹ್ಮೋತ್ಸವ ಪೂರ್ತ ಸ್ವಾಮಿಯನ್ನು ಅಲಂಕರಿಸಿರುತ್ತವೆ.
ಉತ್ಸವದಲ್ಲಿ ಸೇವೆ ಮಾಡುವ ಭಾಗ್ಯ: ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಮಾತನಾಡಿ, ಭಾರತದ ಅತ್ಯಂತ ಪುರಾತನ ಹಾಗೂ ಧಾರ್ಮಿಕ ವಿಶೇಷವಾದ ವೈರಮುಡಿ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಸಿದ್ಧತೆಮಾಡಿಕೊಳ್ಳಲಾಗಿದೆ. ಬ್ರಹ್ಮೋತ್ಸವದ ಎಲ್ಲಾ ಉತ್ಸವಗಳನ್ನೂ ವೈಭವಯುತವಾಗಿ ನಡೆಸಲುಶ್ರಮಿಸಲಾಗುತ್ತದೆ. ಉತ್ಸವದಲ್ಲಿ ಸೇವೆ ಮಾಡುವ ಭಾಗ್ಯ ನಮಗೆ ದೊರೆತಿರುವುದೇ ದೊಡ್ಡಭಾಗ್ಯಎಂದೇ ಭಾವಿಸಿ, ಭಕ್ತಸ್ನೇಹಿಯಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ಚೆಲುವನಾರಾಯಣ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಹೇಳಿದರು.
ಸ್ಥಾನೀಕರಾದ ಕರಗಂ ನಾರಾಯಣ ಅಯ್ಯಂಗಾರ್, ಶ್ರೀನಿವಾಸನರಸಿಂಹನ್ಗುರೂಜಿ, ಸಜ್ಜೆಹಟ್ಟಿ ತಿರುನಾರಾಯಣ ಅಯ್ಯಂಗಾರ್, ಸ್ಥಾನೀಕಂ ಸಂಪತ್ತು ಮಾರನ್, ಸ್ಥಾನೀಕಂ ಶ್ರೀರಾಮನ್, ಪರಿಚಾರಕ ಪಾರ್ಥಸಾರಥಿ, ಅರ್ಚಕ ವರದರಾಜ ಭಟ್, ಪರಕಾಲಮಠದ ಪ್ರತಿನಿಧಿ ನರಸಿಂಹರಂಗನ್,ಅಕೌಂಟೆಂಟ್ ಹೇಮಂತಕುಮಾರ್, ಪ್ರಥಮದರ್ಜೆ ಸಹಾಯಕ ಪ್ರಕಾಶ್ ಪಾರ್ಕಾವಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ