![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಬಾಲಕಿ ಇದ್ದ ವಾರ್ಡ್ ಕಂಟೈನ್ಮೆಂಟ್ ಝೋನ್
Team Udayavani, May 23, 2020, 4:35 AM IST
![balaki](https://www.udayavani.com/wp-content/uploads/2020/05/balaki-620x256.jpg)
ಪಾಂಡವಪುರ: ತಾಲೂಕಿನ ಚಿನಕುರಳಿಯಲ್ಲಿ ರಾಣೆಬೆನ್ನೂರು ಮೂಲದ ಬಾಲಕಿಗೆ ಕೋವಿಡ್ 19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಕೆ ತಂದೆ-ತಾಯಿಯೊಂದಿಗೆ ವಾಸವಿದ್ದ ವಾರ್ಡ್ನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿರುವು ದಾಗಿ ಶಾಸಕ ಪುಟ್ಟರಾಜು ಹೇಳಿದರು. ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಶಾಸಕರು, ಬಾಲಕಿಯ ತಂದೆ ಕಳೆದ ಐದಾರು ವರ್ಷಗಳಿಂದ ಕಟ್ಟಡ ನಿರ್ಮಾಣದಲ್ಲಿ ತೊಡಗಿಕೊಂಡಿದ್ದು, ಇಲ್ಲಿಯೇ ವಾಸವಾಗಿದ್ದರು.
ಅವರು ಮೂಲತಃ ರಾಣಿಬೆನ್ನೂರಿನವರಾಗಿದ್ದು, ಕಳೆದ ಎರಡು ತಿಂಗಳ ಹಿಂದೆ ಈತ ಕುಟುಂಬ ಸಮೇತ ಯುಗಾದಿ ಹಬ್ಬಕ್ಕೆಂದು ರಾಣಿಬೆನ್ನೂರಿಗೆ ತೆರಳಿದ್ದರು. ಲಾಕ್ಡೌನ್ ಆದ ಬಳಿಕ ಎಲ್ಲರು 2 ತಿಂಗಳು ತಮ್ಮೂರಿನಲ್ಲಿಯೇ ವಾಸವಿದ್ದರು. ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ಡೌನ್ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಸ್ವಂತ ಕಾರಿನಲ್ಲಿಯೇ ಹೆಂಡತಿ, ಮಕ್ಕಳ ಸಮೇತ ಚಿನಕುರಳಿಗೆ ವಾಪಸಾಗಿದ್ದರು ಎಂದರು.
ವಿಷಯ ತಿಳಿದು ತಕ್ಷಣವೇ ಎಲ್ಲರನ್ನು ಅವರ ಸಂಬಂಧಿಕರ ಮನೆಯಲ್ಲಿ ಅಧಿಕಾರಿಗಳು ಹೋಂ ಕ್ವಾರೆಂಟೈನ್ ಮಾಡಿದ್ದರು. ಬಳಿಕ 4 ಮಂದಿಯನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಿದ್ದು, ಹೆಣ್ಣುಮಗುವಿಗೆ ಕೋವಿಡ್ 19 ದೃಢಪಟ್ಟಿದೆ. ಮಗುವಿನ ಪ್ರಾಥಮಿಕ ಸಂಪರ್ಕದಲ್ಲಿದ್ದ ತಂದೆ, ತಾಯಿ ಮತ್ತೂಂದು ಮಗುವಿಗೆ ನೆಗಟಿವ್ ಬಂದಿದೆ. ಹಾಗಾಗಿ ಈ ಮಗುವಿಗೆ ಕೋವಿಡ್ 19 ಹೇಗೆ ಬಂತು ಎನ್ನುವುದರ ಬಗ್ಗೆ ನಮಗೂ ಅನುಮಾನವಿದ್ದು, ಮತ್ತೂಮ್ಮೆ ಮಗುವನ್ನು ಪರೀಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿದ್ದೇನೆ ಎಂದರು.
ಮುಂಬೈನಿಂದ ಬರುತ್ತಿರುವವರಿಂದಲೂ ಕೋವಿಡ್ 19 ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರು ಮಂಜಾಗ್ರತೆ ವಹಿಸುವುದು ಅಗತ್ಯ. ಕೋವಿಡ್ 19 ಕಡಿಮೆಯಾಗುವವರೆಗೂ ಸರ್ಕಾರ ಲಾಕ್ಡೌನ್ ಮುಂದುವರಿಸಿದ್ದರೆ ಇಷ್ಟು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಹೇಳಿದರು. ತಹಶೀಲ್ದಾರ್ ಪ್ರಮೋದ್ ಎಲ್ .ಪಾಟೀಲ್, ಉಪವಿಭಾಗಾಧಿಕಾರಿ ಶೈಲಜಾ, ಡಿವೈಎಸ್ಪಿ ಅರುಣ್ ನಾಗೇಗೌಡ, ತಾಪಂ ಇಒ ಮಹೇಶ್, ಸಿಪಿಐ ರವೀಂದ್ರ, ಟಿಎಚ್ಒ ಡಾ. ಅರವಿಂದ್ ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.