ಹೇಮೆ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಿ

ರೈತ ಮುಖಂಡ ರಾಜೇಗೌಡ, ಮರುವನಹಳ್ಳಿ ಶಂಕರ್‌ ನೇತೃತ್ವದಲ್ಲಿ ಮನವಿ •ಮೇಲಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿ ತೀರ್ಮಾನ

Team Udayavani, Jul 23, 2019, 1:52 PM IST

mandya-tdy-2

ಕೆ.ಆರ್‌.ಪೇಟೆ: ಹೇಮಾವತಿ ಜಲಾಶಯದಿಂದ ಕೆ.ಆರ್‌.ನಗರ ಮತ್ತು ಹೊಳೆನರಸೀಪುರ ತಾಲೂಕಿನ ನಾಲೆಗಳಿಗೆ ನೀರು ಹರಿಸುತ್ತಿರುವ ಮಾದರಿಯಲ್ಲಿ ತಾಲೂಕಿನ ತಾಲೂಕಿನ ನದಿ, ನಾಲೆಗಳಿಗೆ ನೀರು ಹರಿಸದಿದ್ದರೆ ನೀರಾವರಿ ಇಲಾಖೆ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮ್ಮಿಕೊಳ್ಳಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್‌ ಎಚ್ಚರಿಕೆ ನೀಡಿದರು.

ಪಟ್ಟಣದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಇಇ ಬಾಲಕೃಷ್ಣ ಅವರಿಗೆ ರೈತ ಮುಖಂಡ ರಾಜೇಗೌಡರ ನೇತೃತ್ವದಲ್ಲಿ ರೈತರು ಮನವಿ ಸಲ್ಲಿಸಿ ಮಾತನಾಡಿದರು.

ನೀರು ಹರಿಸಿ ಬೆಳೆ ರಕ್ಷಿಸಿ: ತಾಲೂಕಿನಲ್ಲಿರುವ ಹೇಮಾವತಿ ಅಚ್ಚುಕಟ್ಟು ನಾಲೆಗಳಾದ ಹೇಮಗಿರಿ, ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು ಹಾಗೂ ಅಕ್ಕಿಹೆಬ್ಟಾಳು ನಾಲಾ ವ್ಯಾಪ್ತಿಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ತೆಂಗು, ಬಾಳೆ, ಅಡಿಕೆ ಮುಂತಾದ ಬೆಳೆಗಳು ಬೆಳೆದು ನಿಂತಿದೆ. ಜೂನ್‌ ತಿಂಗಳ ಅಂತ್ಯಕ್ಕೆ ಬಂದರೂ ನೀರಾವರಿ ಇಲಾಖೆ ಈ ನಾಲೆಗಳ ಮುಖಾಂತರ ನೀರು ಹರಿಸಿ ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಕ್ರಮ ವಹಿಸಿಲ್ಲ.

ಮಲತಾಯಿ ಧೋರಣೆ: ಕೆಆರ್‌ಎಸ್‌ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳ ಸಂರಕ್ಷಣೆಗೆ ನೀರು ಹರಿಸುವ ನೀರಾವರಿ ಇಲಾಖೆ, ಹೇಮಾವತಿ ಅಚ್ಚುಕಟ್ಟು ಪ್ರದೇಶದ ಬೆಳೆ ರಕ್ಷಣೆಗೆ ಮುಂದಾಗದೆ ಮಲತಾಯಿ ಧೋರಣೆ ಪ್ರದರ್ಶಿಸಿದೆ. ಹೇಮಾವತಿ ಅಚ್ಚುಕಟ್ಟು ಪ್ರದೇಶದ ರೈತರು ರೈತರಲ್ಲವೆ? ಇವರಿಂದ ನೀರಿನ ತೆರಿಗೆ ಮತ್ತು ಕಂದಾಯ ವಸೂಲಾತಿ ಮಾಡುತ್ತಿಲ್ಲವೆ? ಎಂದು ಪ್ರಶ್ನಿಸಿ, ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳು ಮಳೆಗಾಲದಲ್ಲಿ ಹರಿಯುವ ನದಿ ನೀರನ್ನು ಅವಲಂಭಿಸಿವೆ. ನೀರಾವರಿ ಇಲಾಖೆ ರೈತರ ನೀರನ್ನು ಹಕ್ಕನ್ನು ಕಸಿದುಕೊಂಡಿದೆ.

1 ಸಾವಿರ ಕ್ಯೂಸೆಕ್‌ ಹರಿಸಿ ಸಾಕು: ನದಿ ನೀರನ್ನು ಅಚ್ಚುಕಟ್ಟು ಪ್ರದೇಶದಲ್ಲಿ ತಡೆ ಹಿಡಿರುವುದರಿಂದ ಅಣೆಕಟ್ಟು ಪ್ರದೇಶದ ಕೆಳಭಾಗದಲ್ಲಿ ನದಿ ಬತ್ತಿ ಹೋಗಿದ್ದು, ಕುಡಿಯುವ ನೀರಿಗೂ ಜನಜಾನುವಾರು ಪರದಾಡುತ್ತಿವೆ. ನದಿಯಲ್ಲಿನ ಜಲಚರಗಳು ನೀರಿಲ್ಲದೆ ಸಾಯುತ್ತಿವೆ. ಹೇಮಾವತಿ ನದಿಗೆ ಕೂಡಲೇ 1 ಸಾವಿರ ಕ್ಯೂಸೆಕ್‌ ನೀರು ಹರಿಸಿ ರೈತರ ಬೆಳೆ ರಕ್ಷಣೆಗೆ ಮುಂದಾಗಬೇಕು. ಮುಖ್ಯ ನಾಲೆಯಲ್ಲೂ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕೆಂದು ಒತ್ತಾಸಿದ ಅವರು ನೀರು ಹರಿಸದಿದ್ದರೆ ರೈತಸಂಘ ನೀರು ಬಿಡುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ತಾಲೂಕು ರೈತಸಂಘದ ಮಾಜಿ ಅಧ್ಯಕ್ಷ ನಾಗೇಗೌಡ, ರೈತಮುಖಂಡರಾದ ಮಡುನಕೋಡಿ ಪ್ರಕಾಶ್‌, ಮಾಕವಳ್ಳಿ ರವಿ, ಹೊನ್ನೇಗೌಡ, ಚೌಡೇನಹಳ್ಳಿ ಕೃಷ್ಣೇಗೌಡ, ಕರೋಟಿ ತಮ್ಮಯ್ಯ, ಕಾರಿಗನಹಳ್ಳಿ ಪುಟ್ಟೇಗೌಡ ಮತ್ತಿತರರು ಹಾಜರಿದ್ದರು.

ಒಣಗಿದ ಬೆಳೆಗಳಿಗೆ ಪರಿಹಾರ ಕೊಡಿ

ಮಂಡ್ಯ: 39ನೇ ವರ್ಷದ ರೈತರ ಹುತಾತ್ಮರ ದಿನಾಚರಣೆ ಅಂಗವಾಗಿ ಒಣಗಿದ ಬೆಳೆಗೆ ವೈಜ್ಞಾನಿಕ ಪರಿಹಾರ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ(ಮೂಲ ಸಂಘಟನೆ)ದ ಕಾರ್ಯಕರ್ತರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿ ನಡೆಸಿದ ಕಾರ್ಯಕರ್ತರು ಬಳಿಕ ಅಲ್ಲಿಯೇ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸಿದರು. ಪರಿಣಾಮ, ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಿ: ಸತತ ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಬಾರಿಯೂ ಸರಿಯಾದ ಸಮಯಕ್ಕೆ ನೀರು ಬಿಡದ ಕಾರಣ ಬೆಳೆದು ನಿಂತ ಬೆಳೆ ಒಣಗಿ ಹೋಗಿದೆ. ಆದ್ದರಿಂದ, ಕೂಡಲೇ ಬೆಳೆಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು. ಸಕ್ಕರೆ ಕಾರ್ಖಾನೆಗಳು ಕೊಡಬೇಕಾಗಿರುವ ಬಾಕಿ ಹಣವನ್ನು ಶೀಘ್ರದಲ್ಲಿ ಪಾವತಿಸಲು ಕ್ರಮ ವಹಿಸಬೇಕು. ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಕೂಡಲೇ ಪ್ರಾರಂಭಿಸಬೇಕು. ಪ್ರಮುಖವಾಗಿ ಡಾ.ಸ್ವಾಮಿನಾಥನ್‌ ವರದಿಯ ಶಿಫಾರಸ್ಸನ್ನು ಅನುಷ್ಠಾನಕ್ಕೆ ತಂದು ಕಬ್ಬು, ರೇಷ್ಮೆ, ಬಾಳೆ ಮುಂತಾದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆ ನಿಲ್ಲಿಸಿ: ರೈತ ವಿರೋಧಿಯಾಗಿರುವ ಭೂ ಸ್ವಾಧೀನ ತಿದ್ದುಪಡಿ ಕಾಯ್ದೆ ಕೈಬಿಡಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕ್ರಮ ವಹಿಸಬೇಕು. ಮದ್ದೂರು ತಾಲೂಕಿನ ಆತಗೂರು ಹೋಬಳಿ ಯಲ್ಲಿ ಜಮೀನಿನ ರೀ ಸರ್ವೆಯಲ್ಲಿ ಆಗಿರುವ ಗೊಂದಲ ನಿವಾರಣೆಗೆ ಭೂ ದಾಖಲೆ ತಜ್ಞರ ಸಮಿತಿ ರಚಿಸಬೇಕು. ಜಿಲ್ಲೆಯಲ್ಲಿ ಎಲ್ಲ ಕೆರೆಕಟ್ಟೆಗಳ ಹೂಳು ತೆಗೆಸಬೇಕು. ಹಾಲಿನ ದರ ಕುಸಿದಿದ್ದು, ಲೀಟರ್‌ಗೆ 30 ರೂ. ಬೆಲೆ ನಿಗದಿ ಮಾಡಬೇಕು. ರೇಷ್ಮೆಗೂಡಿನ ಬೆಲೆಯೂ ಕುಸಿತವಾಗಿದ್ದು, ಪ್ರೋತ್ಸಾಹ ಧನವನ್ನು ಕೆಜಿಗೆ 50 ರೂ. ಹೆಚ್ಚಿಸಬೇಕು. ಹಾಗೂ ಡಾ.ಬಸವರಾಜು ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ, ಇಂಡುವಾಳು ಚಂದ್ರಶೇಖರ್‌, ಹೆಮ್ಮಿಗೆ ಚಂದ್ರ ಶೇಖರ್‌, ಇಂಡುವಾಳು ಬಸವರಾಜು, ಸಿ.ಸ್ವಾಮಿಗೌಡ, ಕೆ.ನಾಗೇಂದ್ರ, ಕೆ.ರಾಮಲಿಂಗೇಗೌಡ, ಸೊ.ಶಿ.ಪ್ರಕಾಶ್‌ ಸೊಳ್ಳೇಪುರ, ಕೆ.ಜಿ.ಉಮೇಶ್‌, ಜೆ.ದಿನೇಶ್‌, ಶೇಖರ್‌, ಶ್ರೀಕಂಠಯ್ಯ, ವೈ.ಕೆ.ರಾಮೇಗೌಡ, ಸಿ.ರಮೇಶ್‌ ಇತರರಿದ್ದರು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.