ಪಾಂಡವಪುರ ತಾಲೂಕಲ್ಲಿ ಅಂತರ್ಜಲ ಕುಸಿತ ! ಕೆಲ ಗ್ರಾಮಗಳಲ್ಲಿ ನೀರಿಗೆ ಹಾಹಾಕಾರ

ಖಾಸಗಿ ಕೊಳವೆ ಬಾವಿ, ಟ್ಯಾಂಕರ್‌ ಮೂಲಕ ನೀರು ಸರಬರಾಜು

Team Udayavani, Apr 9, 2021, 8:42 PM IST

fdsdfs

ಪಾಂಡವಪುರ: ತಾಲೂಕಿನಲ್ಲಿ ಅಂತರ್ಜಲ ಕುಸಿತದಿಂದ ಕೆಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ನೀರಿನ ವ್ಯವಸ್ಥೆ ಸುಧಾರಣೆಯಲ್ಲಿದೆ: ಕೆಆರ್‌ಎಸ್‌ ಜಲಾಶಯದಿಂದ ಪಾಂಡವಪುರ ತಾಲೂಕಿನ ಕೆಲ ಹಳ್ಳಿಗಳ ಮಾರ್ಗದಲ್ಲಿ ವಿಶ್ವೇಶ್ವರಯ್ಯ ನಾಲೆ ಮೂಲಕ ಕಾವೇರಿ ನೀರು ಹರಿಯುತ್ತಿದೆ. ವಿಶ್ವೇಶ್ವರಯ್ಯ ನಾಲೆ ಮಾರ್ಗದ ಗ್ರಾಮಗಳಿಗೆ ನೀರಿನ ವ್ಯವಸ್ಥೆ ಸುಧಾರಣೆಯಲ್ಲಿದೆ. ಫಲವತ್ತಾದ ಭೂಮಿಯಾಗಿ ಪರಿವರ್ತನೆಗೊಂಡಿದೆ. ಆದರೆ, ವಿಶ್ವೇಶ್ವರಯ್ಯ ನಾಲೆ ಇಲ್ಲದ ತಾಲೂಕಿನ ಅನೇಕ ಗ್ರಾಪಂ ವ್ಯಾಪ್ತಿಗೆ ಸೇರಿದ ಹಳ್ಳಿಗಳಲ್ಲಿ ನೀರಿ ಗಾಗಿ ಬವಣೆ ಹೆಚ್ಚಾಗಿ ನೀರಿಗಾಗಿ ಹಾಹಾಕಾರ ಉಂಟಾ ಗುತ್ತಿದೆ. ಕುಡಿಯುವ ನೀರು ಸೇರಿದಂತೆ ದಿನ ಬಳ ಕೆಯ ನೀರಿಗಾಗಿ ಪರದಾಡುವಂಥ ಸ್ಥಿತಿ ನಿರ್ಮಾಣಗೊಂಡಿದೆ.

ತಾಲೂಕಿನ ಮೇಲುಕೋಟೆ ಹೋಬ ಳಿಯ ಬಳಘಟ್ಟ ಗ್ರಾಮ ಪಂಚಾಯ್ತಿಗೆ ಸೇರಿದ ಚಲ್ಲರಹಳ್ಳಿ ಕೊಪ್ಪಲು, ಬಿ.ಕೊಡಗಹಳ್ಳಿ, ಕನಗೋನ ಹಳ್ಳಿ, ಎಂ.ಆರ್‌.ಕೊಪ್ಪಲು, ತಾಳೆಕೆರೆ, ಸಂಗಾಪುರ ಗ್ರಾಮಗಳಲ್ಲಿ ಇಂದಿಗೂ ನೀರಿಗಾಗಿ ದಿನನಿತ್ಯ ಪರದಾಡುತ್ತಿದ್ದಾರೆ. ಟ್ಯಾಂಕರ್‌ ಮೂಲಕ ಸರಬರಾಜು: ಕೆಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಲದಲ್ಲಿರುವ ಖಾಸಗಿ ಕೊಳವೆ ಬಾವಿಯನ್ನು ಪ್ರತಿ ತಿಂಗಳಿಗೆ 16 ರಿಂದ 19 ಸಾವಿರ ರೂ. ಬಾಡಿಗೆ ಪಡೆದುಕೊಂಡು ಸಮೀಪದ ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಜಿಪಿಎಸ್‌ ಅಳವಡಿಸಿರುವ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಉರಿಯುವ ಬಿಸಿಲು ಹೆಚ್ಚಾಗಿರುವುದರಿಂದ ಕೊಳವೆಬಾವಿ ನೀರಿದ್ದರೂ ಅನೇಕ ಗ್ರಾಮಗಳಲ್ಲಿ ಇಲ್ಲಿಯವರೆಗೆ ನೀರಿನ ಬವಣೆ ಮಾತ್ರ ನೀಗಿಲ್ಲ. ಅನೇಕ ಗ್ರಾಮಗಳಲ್ಲಿ ಕೃಷಿಗಾಗಿ ಕೊಳವೆಬಾವಿ ಕೊರೆಸಿದರೆ 500 ಅಡಿಯಿಂದ ಸಾವಿರ ಅಡಿಯಷ್ಟು ಆಳದಲ್ಲೂ ನೀರು ಸಿಗುತ್ತಿಲ್ಲ. ಕೊಳವೆ ಬಾವಿ ವಿಫಲವಾಗಿ ಆರ್ಥಿಕ ನಷ್ಟಕ್ಕೊಳಗಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿವೆ.

ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಸಂಪೂರ್ಣ ಕುಸಿದು ಹೋಗಿದೆ. ಅನೇಕ ಕೊಳವೆ ಬಾವಿಯಲ್ಲಿ ನೀರಿಲ್ಲದೆ ಮುಚ್ಚಲಾಗಿದೆ. ಅಂತರ್ಜಲ ಪಾತಾಳ ಸೇರಿದ ಹಿನ್ನೆಲೆಯಲ್ಲಿ ಕೆಲವು ಕೊಳವೆ ಬಾವಿಗಳಲ್ಲಿ ಕೆಲ ತಿಂಗಳಲ್ಲೇ ನೀರು ಬತ್ತಿ ಹೋಗಿದೆ. ಅಂತರ್ಜಲ ಕುಸಿತ: ತಾಲೂಕಿನ ಅನೇಕ ಹಳ್ಳಿಗಳಲ್ಲಿ ಕೃಷಿ ಕೊಳವೆ ಬಾವಿಯಲ್ಲಿರುವ ಅಲ್ಪ ಸ್ವಲ್ಪ ನೀರನ್ನು ರೈತರು ಜನರಿಗೆ ಪೂರೈಕೆ ಮಾಡುತ್ತಿದ್ದಾರೆ. ಆದರೆ ವಿದ್ಯುತ್‌ ಅಭಾವದಿಂದ ನೀರಿಗಾಗಿ ಜನರು ಪರದಾಡುವುದು ತಪ್ಪುತ್ತಿಲ್ಲ. ಸಾಕಷ್ಟು ಪಂಪ್‌ಸೆಟ್‌ ಕೊಳವೆಬಾವಿಗಳೂ ಸಹ ಒಣಗಿ ಹೋಗಿವೆ.

ಜಲ ಇರುವ ಕಡೆಗಳಲ್ಲೂ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಹೀಗಾಗಿ ಸಮಸ್ಯೆ ಜಟಿಲವಾಗಿ ಹಳ್ಳಿಯ ಬದುಕಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಮಳೆಯ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಅನೇಕ ಗ್ರಾಪಂ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿದೆ. ನೀರಾವರಿ ಜಲಾನಯನ ಪ್ರದೇಶ ದಲ್ಲಿ ಮಾತ್ರ ಕೃಷಿ ಚಟುವಟಿಕೆ ಉತ್ತಮವಾಗಿದೆ. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದಿಂದ ತಾಲೂಕಿನಾದ್ಯಂತ ಹಗಲು 4 ಗಂಟೆ ಹಾಗೂ ರಾತ್ರಿ 3 ಗಂಟೆ ಕಾಲ ವಿದ್ಯುತ್‌ ಸೌಲಭ್ಯ ಕಲ್ಪಿಸಲಾಗುತ್ತಿದೆ. ವಿದ್ಯುತ್‌ ತೊಂದರೆಯಿಂದ ನೀರಿನ ಪೂರೈಕೆಯಲ್ಲೂ ವ್ಯತ್ಯಾಸದಿಂದ ತೊಂದರೆ ಉಂಟಾಗುತ್ತಿದೆ.

ಕುಮಾರಸ್ವಾಮಿ, ಪಾಂಡವಪುರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.