ಮದ್ದೂರು, ಮಳವಳ್ಳಿ ಕೆರೆಗಳಿಗೆ ನೀರು


Team Udayavani, Mar 18, 2021, 9:40 AM IST

ಮದ್ದೂರು, ಮಳವಳ್ಳಿ ಕೆರೆಗಳಿಗೆ ನೀರು

ಭಾರತೀನಗರ: ತಿಟ್ಟಮಾರನಹಳ್ಳಿ ಏತನೀರಾವರಿ ಯೋಜನೆ ಪಂಪ್‌ಹೌಸ್‌ ಹಾಗೂ ರೈಸಿಂಗ್‌ ಮೆನ್‌ ಕಾಮಗಾರಿ ಯನ್ನು ಶಾಸಕ ಡಿ.ಸಿ.ತಮ್ಮಣ್ಣ ವೀಕ್ಷಣೆ ಮಾಡಿದರು.

ಈ ವೇಳೆ ಶಾಸಕ ಡಿ.ಸಿ.ತಮ್ಮಣ್ಣ ಮಾತನಾಡಿ, ಈಏತನೀರಾವರಿ ಕಾಮಗಾರಿ ಮದ್ದೂರು ಹಾಗೂಮಳವಳ್ಳಿ ಎರಡು ಕ್ಷೇತ್ರದ ಬಾಧಿತ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಒದಗಿಸುವ ಕಾಮಗಾರಿಯಾಗಿದೆ.ಮದ್ದೂರು ಕ್ಷೇತ್ರದ 4 ಕೆರೆ, ಮಳವಳ್ಳಿ ಕ್ಷೇತ್ರದ 12ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರಿಂದ ಈಭಾಗದ ನೂರಾರು ಎಕರೆ ಪ್ರದೇಶದ ಬೆಳೆಗಳಿಗೆಅನುಕೂಲವಾಗಲಿದೆ ಎಂದರು.

44 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಸೂಳೆಕೆರೆ ಕೋಡಿಯಿಂದ ಹಾಗೂ ವಿಸಿ ನಾಲಾ ಜಾಲದ ಅಚ್ಚುಗಟ್ಟು ಪ್ರದೇಶಗಳಿಂದ ಬರುವಹೆಚ್ಚುವರಿ ನೀರನ್ನು ಸಂಗ್ರಹಿಸಿ ಮಾಡಿ ತಿಟ್ಟಮಾರನಹಳ್ಳಿ ಏತ ನೀರಾವರಿ ಯೋಜನೆಯಿಂದ ಹೆಬ್ಟಾಳ ಚೆನ್ನಯ್ಯನಾಲೆಯ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರೊದಗಿಸುವ ಯೋಜನೆಯಾಗಿದೆ ಎಂದರು.

ಬೊಪ್ಪಸಮುದ್ರದ ರೈತ ರಾಜಣ್ಣ ಮಾತನಾಡಿ, ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪದೆ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕಾಮಗಾರಿ ಪೂರ್ಣಗೊಂಡ ನಂತರ ಎರಡು ಬೆಳೆಗಳನ್ನು ಯಾವುದೇ ತೊಂದರೆ ಇಲ್ಲದೆ ಬೆಳೆಯಬಹುದು. ಈ ಏತ ನೀರಾವರಿ ಯೋಜನೆಯಿಂದ ನಮಗೆ ಸಂತಸ ತಂದಿದೆ ಎಂದರು.

ಗ್ರಾಪಂ ಸದಸ್ಯ ಉಮೇಶ್‌ ಮಾತನಾಡಿ, ವಿ.ಸಿ.ನಾಲೆಯಿಂದ ಹಾಗೂ ಹೆಬ್ಟಾಳ ಚೆನ್ನಯ್ಯನಾಲೆಯಿಂದ ನೀರು ಬಾರದೆ ಈ ಭಾಗದಲ್ಲಿ 2ನೇ ಬೆಳೆಬೆಳೆಯಲು ಸಾಧ್ಯವಾಗುತ್ತಿಲ್ಲ. ಬೊಪ್ಪಸಮುದ್ರದಿಂದಚಂದೂಪುರದವ ರೆಗೂ ರೈತರ ಬೆಳೆಗಳು ನೀರಿಲ್ಲದೆಒಣಗುತ್ತಿವೆ. ಶಾಸಕ ಡಿ.ಸಿ.ತಮ್ಮಣ್ಣ ಹೆಬ್ಟಾಳ ಚೆನ್ನಯ್ಯನಾಲೆಗೆ ತಡೆಗೋಡೆ ನಿರ್ಮಿಸಿ ಏತ ನೀರಾವರಿಮೂಲಕ ಈ ಭಾಗದ ಜಮೀನುಗಳಿಗೆ ನೀರೊದಗಿಸಲು ಮುಂದಾಗಿದ್ದಾರೆ ಎಂದರು.

ಅಧಿಕಾರಿಗಳಿಗೆ ಸೂಚನೆ: ವಿಸಿ ನಾಲೆ ಅಚ್ಚುಗಟ್ಟು ಪ್ರದೇಶಕ್ಕೆ ಏತನೀರಾವರಿ ಮೂಲಕ ನೀರನ್ನು ಸರಬರಾಜು ಮಾಡುವುದರ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಕಾಮಗಾರಿಯನ್ನು 4 ತಿಂಗಳಲ್ಲಿಮುಗಿಸಬೇಕೆಂದು ತಾಕೀತು ಮಾಡಿ ರೈತರಿಗೆ ಯಾವುದೇರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.

ನೀರಾವರಿ ಇಲಾಖೆಯ ಅಧಿಕಾರಿ ಎಇಇ ನಾಗರಾಜು, ಚಂದ್ರೇಗೌಡ, ಅವಿನಾಶ್‌, ಶೀಲ, ಶಿವಕುಮಾರ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ತಿಟ್ಟಮಾರನಹಳ್ಳಿ ಸುರೇಶ್‌, ವೆಂಕಟೇಶ, ಶ್ರೀನಿವಾಸ, ಮೆಣಸಗೆರೆ ಪಟೇಲ್‌ ಉಮೇಶ್‌ ಇದ್ದರು.

30ಕ್ಕೆ  ರೈತರೊಂದಿಗೆ ಮಾತುಕತೆ :

ಈ ಏತನೀರಾವರಿ ಕಾಮಗಾರಿ ಮಾಡಲು ಕೆಲವು ರೈತರ ಜಮೀನನ್ನು ಭೂಸ್ವಾಧೀನ ಇಲಾಖೆವಶಪಡಿಸಿಕೊಂಡಿದೆ. ಇದರಿಂದ ರೈತರುಆತಂಕಗೊಂಡು ಇನ್ನೂ ಪರಿಹಾರ ಸಿಕ್ಕಿಲ್ಲ,ಪರಿಹಾರ ಕೊಡಿಸಿಕೊಡಬೇಕೆಂದು ನನಗೆಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಮಾ.30ರಂದು ರೈತರೊಂದಿಗೆ ಮಾತುಕತೆ ನಡೆಸಿಬೆಲೆ ನಿಗದಿ ಪಡಿಸಲು ಮುಂದಾಗಿದ್ದಾರೆ. ಆಸಂದರ್ಭದಲ್ಲಿ ರೈತರಿಗೆ ಉತ್ತಮ ಪರಿಹಾರ ಕೊಡಿಸಲು ಒತ್ತಾಯಿಸುವುದಾಗಿ ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

ಸರ್‌ ಎಂ.ವಿಶ್ವೇಶ್ವರಯ್ಯ ರೈತರ ಜಮೀನುಗಳಿಗೆ ನೀರೊದಗಿಸಲುಒಂದನೆಯದು ಕನ್ನಂಬಾಡಿ ಕಟ್ಟೆ, ಎಡನೆಯದುಯತ್ತಂಬಾಡಿ ಕಟ್ಟೆಯನ್ನು ಕಟ್ಟಲು ಕನಸುಕಂಡಿದ್ದರು. ಆದರೆ, ಯತ್ತಂಬಾರಿ ಅಣೆಕಟ್ಟೆಯನ್ನು ಕಟ್ಟಲು ಸಾಧ್ಯ ವಾಗಿರಲಿಲ್ಲ. ವಿಶ್ವೇಶ್ವರಯ್ಯನವರ ಕನಸನ್ನು ಶಾಸಕ ಸಿ.ಡಿ.ತಮ್ಮಣ್ಣಅವರು ಈ ಭಾಗದ ಕೂಳಗೆರೆ ಮತ್ತುತಿಟ್ಟ ಮಾರನಹಳ್ಳಿ ಏತ ನೀರಾವರಿ ಕಾಮಗಾರಿ ಮಾಡಿ ರೈತರಿಗೆ ಅನುಕೂಲ ಕಲ್ಪಿಸಿದ್ದಾರೆ. ಉಮೇಶ್‌ ಪಟೇಲ್‌, ರೈತ ಮೆಣಸಗೆರೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.