ಜೆಡಿಎಸ್ ವಿಪ್ ಗೂ ನಮಗೂ ಸಂಬಂಧವಿಲ್ಲ: ಚೆಲುವರಾಯಸ್ವಾಮಿ
Team Udayavani, Mar 12, 2018, 6:35 AM IST
ಮಂಡ್ಯ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರು ಜಾರಿಗೊಳಿಸಿರುವ ವಿಪ್ ಗೂ ನಮಗೂ (ಬಂಡಾಯ ಶಾಸಕರು) ಯಾವುದೇ ಸಂಬಂಧವಿಲ್ಲ ಎಂದು ಶಾಸಕ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಜೆಡಿಎಸ್ನಿಂದ ನಮ್ಮನ್ನು ವರಿಷ್ಠರು ಅಮಾನತ್ತಿನಲ್ಲಿಟ್ಟಿದ್ದಾರೆ. ಈಗಾಗಲೇ ನಮ್ಮ ವಿರುದ್ಧ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪ್ರಚಾರವನ್ನೂ ನಡೆಸಿದ್ದಾರೆ. ಹೀಗಿದ್ದೂ ಜೆಡಿಎಸ್ ವರಿಷ್ಠರು ವಿಪ್ ಜಾರಿ ಮಾಡಿರುವುದು ಅರ್ಥವಾಗದ ಸಂಗತಿ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ಸೇರ್ಪಡೆಗೆ ನಾವು ಪೂರ್ಣ ಪ್ರಮಾಣದಲ್ಲಿ ತೀರ್ಮಾನಿಸಿದ್ದೇವೆ. ಕಾಂಗ್ರೆಸ್ ಬಾವುಟ ಹಿಡಿಯುವುದೊಂದೇ ಬಾಕಿ ಇದೆ. ಈಗ ಜೆಡಿಎಸ್ನವರು ನಮ್ಮನ್ನು ಬಯಸುವುದು ಸಮಂಜಸವಲ್ಲ. ಜೆಡಿಎಸ್ನ ದೊಡ್ಡವರು ವಿಪ್ ಜಾರಿ ಮಾಡಿದ್ದಾರೆ. ಅವರ ಬಗ್ಗೆ ನಾವೇನೂ ಹೇಳುವುದಿಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಪರ ಮತ ಚಲಾಯಿಸುವುದು ಖಚಿತ ಎಂದರು.
25ಕ್ಕೆ ಸೇರ್ಪಡೆ: ಜೆಡಿಎಸ್ನ ಏಳು ಮಂದಿ ಬಂಡಾಯ ಶಾಸಕರು ಮಾ.25ರಂದು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತ. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ. ರಾಹುಲ್ಗಾಂಧಿ ರಾಜ್ಯ ಪ್ರವಾಸ ನಡೆಸುವ ಸಮಯದಲ್ಲೇ ಎಲ್ಲರೂ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ