ಕುಮಾರಸ್ವಾಮಿಗೆ ಗಂಗೆ ಕೊಟ್ಟ ಭಗೀರಥ ಪ್ರಶಸ್ತಿ
2 ಲಕ್ಷ ಮತ ಅಂತರದಿಂದ ನಿಖೀಲ್ಗೆ ಗೆಲವು: ಗ್ರಾಮಸ್ಥರ ಭವಿಷ್ಯ
Team Udayavani, May 20, 2019, 1:52 PM IST
ಮಹದೇವಪುರ ಗ್ರಾಮಸ್ಥರು ಪಟ್ಟಣದಲ್ಲಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಶ್ರೀರಂಗಪಟ್ಟಣ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಹದೇವಪುರ ಗ್ರಾಮಕ್ಕೆ 28 ಕೋಟಿ ರೂ. ಕುಡಿಯುವ ನೀರಿನ ಕಾಮಗಾರಿಗೆ ಬಜೆಟ್ನಲ್ಲಿ ಮೀಸಲಿಟ್ಟಿದ್ದರಿಂದ ಅವರಿಗೆ ಗಂಗೆ ಕೊಟ್ಟ ಭಗೀರಥ ಎಂಬ ಪ್ರಶಸ್ತಿ ನೀಡಲು ನಿರ್ಧರಿಸಿದ್ದೇವೆ ಎಂದು ತಾಲೂಕಿನ ಮಹದೇವಪುರ ಗ್ರಾಮಸ್ಥದ ಮುಖಂಡ ಕೆಂಪೇಗೌಡ ಹೇಳಿದರು.
ಪಟ್ಟಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆ ಬಳಿಕ ಮಹದೇವಪುರದಲ್ಲಿ ಗ್ರಾಮ ವಾಸ್ತವ್ಯ ಮಾಡುವುದಾಗಿ ಹೇಳಿದ್ದಾರೆ. ಆ ಸಂದರ್ಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜೆಡಿಎಸ್ ಸರ್ಕಾರದಲ್ಲಿ ಮಹದೇವಪುರ ಗ್ರಾಮದ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣವಾಗಿದೆ. ರಸ್ತೆಗಳು ಅಭಿವೃದ್ಧಿ ಕಂಡಿವೆ ಎಂದರು.
ಈ ಬಾರಿ ಬಜೆಟ್ನಲ್ಲಿ ಮಹದೇವಪುರ ಬಹುಗ್ರಾಮ ಕುಡಿಯುವ ಯೋಜನೆಗೆ 28 ಕೋಟಿ ರೂ. ಮಂಜೂರು ಮಾಡಿದ್ದು ಚುನಾವಣೆ ನೀತಿ ಸಂಹಿತೆಯ ನಂತರ ಅವರು ಕಾಮಗಾರಿಗೆ ಚಾಲನೆ ನೀಡುವರು. ಮಹದೇವಪುರಕ್ಕೆ ಗ್ರಾಮ ವಾಸ್ತವ್ಯಕ್ಕೆ ಮುಖ್ಯ ಮಂತ್ರಿ ಕುಮಾರಸ್ವಾಮಿ ಆಗಮಿಸಲು ತಿಳಿಸಿದ್ದು ಬಂದ ದಿನದಂದು ಅವರಿಗೆ ಗಂಗೆ ಕೊಟ್ಟ ಭಗೀರಥ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಿಖೀಲ್ ಕುಮಾರಸ್ವಾಮಿ ಗೆಲುವು ನಿಶ್ಚಿತ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅವರಿಗೆ 30 ಸಾವಿರಕ್ಕೂ ಹೆಚ್ಚು ಮತಗಳು ಲಭಿಸಲಿದ್ದು, ಎಚ್.ಡಿ. ಕುಮಾರಸ್ವಾಮಿ ಅವರು ಅತ್ಯಂತ ಕಡಿಮೆ ಅವಧಿಯಲ್ಲಿ ಜಿಲ್ಲೆಗೆ 8,500 ಕೋಟಿ ಯಷ್ಟು ದಾಖಲೆ ಪ್ರಮಾಣದ ಅನುದಾನ ನೀಡಿದ್ದು, ಜನರು ಜೆಡಿಎಸ್ ಸರ್ಕಾರದಲ್ಲಿ ನೀಡಿರುವ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿದ್ದು, ಲೋಕಸಭಾ ಜೆಡಿಎಸ್ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿಯತ್ತ ಮತ ಹಾಕಿದ್ದಾರೆ ಆದ್ದರಿಂದ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಅವರು ಗೆಲುವು ಸಾದಿಸಲಿದ್ದಾರೆ ಎಂದು ಹೇಳಿದರು. ರಾಮಲಿಂಗೇಗೌಡ, ಸುರೇಶ್, ಶಿವು, ಎಂ.ಸಿ.ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ