ವಾರಾಂತ್ಯದ ಕರ್ಫ್ಯೂ: ಮಂಡ್ಯದಲ್ಲಿ ಸ್ವಇಚ್ಛೆಯಿಂದ ಅಂಗಡಿ ಮುಚ್ಚಿದ ವ್ಯಾಪಾರಿಗಳು
Team Udayavani, Apr 24, 2021, 11:54 AM IST
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಾರಂತ್ಯದ ಕರ್ಫ್ಯೂ ಜಾರಿ ಮಾಡಿರುವ ಸರ್ಕಾರದ ಕ್ರಮದ ಕಾರಣದಿಂದ ಸಕ್ಕರೆ ನಾಡಿನಲ್ಲಿ ಸಂಪೂರ್ಣ ಸ್ತಬ್ಧಗೊಂಡಿದೆ.
ಕರ್ಫ್ಯೂ ಪಾಲಿಸಲು ನಗರದ ಜನತೆ ಬೆಂಬಲ ನೀಡುತ್ತಿದ್ದಾರೆ. ಇಡೀ ಜಿಲ್ಲೆಯಲ್ಲಿ ಜನಜೀವನ ಸ್ತಬ್ಧಗೊಂಡಿದೆ. ಸಾರ್ವಜನಿಕರು ಮನೆಯಿಂದ ಹೊರಬಾರದೇ ಮನೆಗಳಲ್ಲೇ ಲಾಕ್ ಆಗಿದ್ದಾರೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದೆ.
ಇದನ್ನೂ ಓದಿ:ಕೋವಿಡ್ ರಣಕೇಕೆ : ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಜಪಾನ್ ಸರ್ಕಾರ
ಅಂಗಡಿ ಮಾಲೀಕರು ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನಗರದ ಪೇಟೆಬೀದಿ, ವಿವಿ ರಸ್ತೆ, ನೂರಡಿ ರಸ್ತೆ, ವಿನೋಬಾ ರಸ್ತೆ, ಬೆಂಗಳೂರು-ಮೈಸೂರು ಹೆದ್ದಾರಿಗಳು ಸ್ತಬ್ಧಗೊಂಡಿದೆ.
ಅಗತ್ಯ ವಸ್ತುಗಳ ಸೇವೆಗೆ ಬೆಳಿಗ್ಗೆ 6 ರಿಂದ 10ರವರೆಗೆ ಅವಕಾಶ ನೀಡಲಾಗಿತ್ತು. ನಂತರ ಎಲ್ಲರನ್ನು ಮನೆಗೆ ಕಳುಹಿಸಲು ಪೊಲೀಸರು ಕಾರ್ಯಾಚರಣೆ ಮೂಲಕ ಬಂದ್ ಮಾಡಿಸಿದರು.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ. ರಸ್ತೆಗಳು ಖಾಲಿ ಖಾಲಿಯಾಗಿದ್ದು, ಜನಸಂಚಾರ ವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿವೆ.
ಆಸ್ಪತ್ರೆ, ಮೆಡಿಕಲ್, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪೊಲೀಸರು ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದು, ಸುಖಾಸುಮ್ಮನೆ ಓಡಾಡುವ ಜನರು, ವಾಹನಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ