ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ
Team Udayavani, Mar 4, 2021, 9:41 PM IST
ಮದ್ದೂರು: ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಯ ರಗನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಯರಗನಹಳ್ಳಿ ಗ್ರಾಮದ ಕಿರಣ್ಕುಮಾರ್ ಪತ್ನಿಮೇಘನಾ(27) ನೇಣಿಗೆ ಶರಣಾದ ಗೃಹಿಣಿ. ಮೃತಳಿಗೆ ಒಂದು ವರ್ಷದ ಗಂಡುವಿದೆ. ಕಳೆದ ಎರಡುವರ್ಷಗಳ ಹಿಂದೆ ಸಾದೊಳಲು ಗ್ರಾಮದಮಂಗಳ, ಬಲ್ಲೇಗೌಡ ದಂಪತಿ ಪುತ್ರಿಯನ್ನು ಯರಗನಹಳ್ಳಿ ಗ್ರಾಮದ ಮರಿಸ್ವಾಮಿ ಪುತ್ರಕಿರಣ್ಕುಮಾರ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿ ಸಣ್ಣಪುಟ್ಟ ವಿಚಾರಗಳಿಗೆಲ್ಲ ಜಗಳತೆಗೆದು ಪ್ರತಿನಿತ್ಯ ಮನೆಯಲ್ಲಿ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡುವ ಜತೆಗೆ ಕುಟುಂಬಸ್ಥರು ಮೇಘನಾ ಮೇಲೆ ಹಲ್ಲೆ ಮಾಡಿದ್ದರು. ಬುಧವಾರ ಪತಿಪತ್ನಿ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮನನೊಂದ ಮೇಘನಾ ಮನೆಕೊಠಡಿಯೊಂದರಲ್ಲಿ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಕಿರಣ್ಕುಮಾರ್ ಸೇರಿದಂತೆ ಈತನ ಪೋಷಕರನ್ನು ಕೆಸ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಪ್ರಸಾದ್ ಹಾಗೂ ವೃತ್ತನಿರೀಕ್ಷಕ ಕೆ.ಆರ್. ಪ್ರಸಾದ್ ಭೇಟಿ ನೀಡಿಅಗತ್ಯ ಕ್ರಮವಹಿಸಿದ್ದಾರೆ. ಈ ಸಂಬಂಧಮೃತಳ ತಂದೆ ಬಲ್ಲೇಗೌಡ ನೀಡಿದ ದೂರಿನಮೇರೆಗೆ ಕೆಸ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ