ಮoಡ್ಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಮಹಿಳಾ ಸಂಘಟಕರು
Team Udayavani, Nov 26, 2020, 9:16 PM IST
ಮoಡ್ಯ: ಮಳವಳ್ಳಿ ಪಟ್ಟಣದಲ್ಲಿ ಸಿಐಟಿಯು ಸಂಘಟನೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಬಹತ್ ಪ್ರತಿಭಟನಾ ರ್ಯಾಲಿ ವೇಳೆ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಿಳಾ ಸಂಘಟಕರು ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದರು.
ಸಿಎಂ ಯಡಿಯೂರಪ್ಪ ಬುಧವಾರ ಮೈಸೂರು ಜಿಲ್ಲೆಯ ಮುಡುಕುತೊರೆ ಭ್ರಮರಾಂಭಿಕ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದರು. ಗುರುವಾರ ಹವಾಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಬಿಟ್ಟು ಬೆಂಗಳೂರಿಗೆ ಮಳವಳ್ಳಿ ಮುಖಾಂತರ ರಸ್ತೆ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದರು.
ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿ ಮುಗಿಸಿ ತೆರಳುತ್ತಿದ್ದರು.
ಈ ವೇಳೆ ಸಿಎಂ ಪಟ್ಟಣ ಮಾರ್ಗವಾಗಿ ಹೋಗುವ ಮಾಹಿತಿ ತಿಳಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ, ಮಂಜುಳಾ, ಸುಶೀಲ, ಮಹದೇವಮ್ಮ ಎಂಬುವರು ಪಟ್ಟಣದ ಅನಂತರಾಮ್ ವತ್ತದಲ್ಲಿ ಪೊಲೀಸ್ ಭದ್ರತೆಯ ನಡುವೆಯೂ ಏಕಾಏಕಿ ಸಿಎಂ ಸಂಚರಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಹೋಗಲು ಯತ್ನಸಿದರು. ಇವರ ದಿಢೀರ್ ನಡೆಯಿಂದ ಪೊಲೀಸರು ವಿಚಲಿತಗೊಂಡು ತಡೆಯಲು ಮುಂದಾದರು. ಅಷ್ಟರಲ್ಲಿ ಸಿಎಂ ಕಾರು ಮುಂದೆ ಸಾಗಿತ್ತು. ಆದರೆ ಹಿಂಬದಿ ಬಂದ ಎಸ್ಕಾರ್ಟ್ ವಾಹನಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿ ಸಿಎಂ ಯಡಿಯೂರಪ್ಪ ಅವರಿಗೆ ಧಿಕ್ಕಾರ ಎಂದು ಕೂಗಿದರು. ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್