![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಸ್ ಡಿಪೋದಲ್ಲಿ ಕಾರ್ಮಿಕರ ದಿನ
ಗಣನೀಯ ಸೇವೆ ಸಲ್ಲಿಸಿದ ಚಾಲಕ/ನಿರ್ವಾಹಕರಿಗೆ ಸೇವಾ ಪ್ರಶಸ್ತಿ ಪ್ರದಾನ
Team Udayavani, May 2, 2019, 11:28 AM IST
![mandya-4..](https://www.udayavani.com/wp-content/uploads/2019/05/mandya-4..-620x284.jpg)
ಮಂಡ್ಯದ ಸಾರಿಗೆ ಬಸ್ ಡಿಪೋ ಆವರಣದಲ್ಲಿ ನಡೆದ ವಿಶ್ವ ಕಾರ್ಮಿಕರ ದಿನದಲ್ಲಿ 2017-18ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ ಚಾಲಕ ಕಂ ನಿರ್ವಾಹಕರಿಗೆ ನಗದು ಪುರಸ್ಕಾರ ಹಾಗೂ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಡ್ಯ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಡ್ಯ ಘಟಕದ ವತಿಯಿಂದ ನಗರದ ಬಸ್ ಡಿಪೋ ಆವರಣದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಸರ್ವಧರ್ಮ ಜಯಂತ್ಯುತ್ಸವ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಪ್ರಭಾರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ತ್ಯಾಪಿ, ಕಾರ್ಮಿಕರ ಶ್ರಮದ ಫಲವಾಗಿ ಸಾರಿಗೆ ಸಂಸ್ಥೆ ರಾಜ್ಯದಲ್ಲಿ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಿದೆ. ಕಾರ್ಮಿಕರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಸ್ಥೆ ಆರೋಗ್ಯ ಕಾರ್ಯಕ್ರಮ ರೂಪಿಸಿದ್ದು, 10 ಸಾವಿರ ನೌಕರರು ಹೃದಯ ಸಂಬಂಧಿ ಚಿಕಿತ್ಸೆ ಪಡೆದಿದ್ದಾರೆಂದರು. ಅಲ್ಲದೇ, ಯಾವುದೇ ಸಂಸ್ಥೆ ಸದೃಢವಾಗಿ ಬೆಳೆಯಲು ಕಾರ್ಮಿಕರ ಪಾತ್ರ ಪ್ರಮುಖವಾದುದು ಎಂದರು.
ಸಾರಿಗೆ ಇಲಾಖೆಯಲ್ಲಿ ಶ್ರಮಜೀವಿಗಳು: ಕಾರ್ಮಿಕರು ಕಟ್ಟಡದ ಇಟ್ಟಿಗೆ ಇದ್ದಂತೆ. ಸದೃಢವಾಗಿದ್ದು, ಉತ್ತಮವಾಗಿ ಕೆಲಸ ಮಾಡುತ್ತಾರೆ. ಕಾರ್ಮಿಕರ ಶ್ರಮ ದ ಫಲವಾಗಿ ಸಂಸ್ಥೆ ಹೆಮ್ಮರವಾಗಿ ಬೆಳೆಯುತ್ತಿದೆ. ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಸೈನಿಕರಂತೆ ಕೆಲಸ ಮಾಡುತ್ತಾರೆ. ಈ ರೀತಿ ಶ್ರಮ ಪಡುವ ಕಾರ್ಮಿಕರು ಬೇರೆ ಇಲಾ ಖೆ ಯಲ್ಲಿ ಇಲ್ಲ. ಹೀಗಾಗಿ ಸಾರಿಗೆ ಸಂಸ್ಥೆ ಜನಮೆಚ್ಚುಗೆ ಗಳಿಸಿದೆ ಎಂದರು.
ಇದೇ ವೇಳೆ 2017-18ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ ಚಾಲಕ ಕಂ ನಿರ್ವಾಹಕರಿಗೆ ನಗದು ಪುರಸ್ಕಾರ ಹಾಗೂ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತಿಗೊಂಡ ನೌಕರ ಎನ್.ಲಿಂಗಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪುಟ್ಟೇಗೌಡ, ಘಟಕದ ವ್ಯವಸ್ಥಾಪಕ ಮಹದೇವಪ್ರಸಾದ್, ಕಾರ್ಮಿಕರಾದ ಮಧು, ಸಲೀಂ, ನಾಗರಾಜು, ಸೋಮು, ನಂಜುಂಡ, ಚಂದ್ರಶೇಖರ್, ರಾಮು, ರವಿ ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.