ಪ್ರವಾಸಿ ತಾಣ ತೊಣ್ಣೂರು ಕೆರೆಯಲ್ಲಿ ಮುಳುಗಿ ಯುವಕ ಸಾವು
Team Udayavani, Jan 31, 2021, 8:06 PM IST
ಮಂಡ್ಯ: ಪಾಂಡವಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತೊಣ್ಣೂರು ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ 4ರ ಸಮಯದಲ್ಲಿ ನಡೆದಿದೆ.
ಮೈಸೂರಿನ ನಿವಾಸಿ ಮಹಮದ್ ಜಾಕೀರ್ ಹುಸೇನ್ ಪುತ್ರ ಮಹಮದ್ ಸನ್ಜೀಮ್(19) ಮೃತ ಯುವಕ. ಈತ ತನ್ನ ನಾಲ್ಕು ಜನ ಸ್ನೇಹಿತರೊಂದಿಗೆ ಪ್ರವಾಸಿ ತಾಣ ಕೆರೆತೊಣ್ಣೂರು ಗ್ರಾಮದ ಕೆರೆಗೆ ಬಂದಿದ್ದಾನೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್