ಜಿಲ್ಲಾ ಮಟ್ಟದ ಯುವಜನ ಮೇಳಕ್ಕೆ ತೆರೆ


Team Udayavani, Jan 27, 2019, 10:23 AM IST

yuvajana.jpg

ನಾಗಮಂಗಲ: ಯುವಜನ ಮೇಳದಲ್ಲಿ ನಾಡಿನ ಸಂಸ್ಕೃತಿಯ ಅನಾವರಣ, ವೈವಿಧ್ಯಮಯ ಜಾನಪದ ಹಾಡುಗಳ ಕುಣಿತ, ನೃತ್ಯ, ಸೋಬಾನೆ ಪದಗಳ ಗಾಯನದೊಂದಿಗೆ ಜಿಲ್ಲಾ ಮಟ್ಟದ ಯುವಜನ ಮೇಳಕ್ಕೆ ಅಂತಿಮ ತೆರೆ ಬಿದ್ದಿತು.

ತಾಲೂಕಿನ ಕದಬಹಳ್ಳಿಯ ಶ್ರೀ ಕಾವೇಟಿ ರಂಗನಾಥ ಸ್ವಾಮಿ ದೇವಸ್ಥಾನದ ಅವರಣದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಯುವಜನ ಮೇಳ ಜಿಲ್ಲೆಯ ಯುವಕ, ಯುವತಿಯರನ್ನು ಆಕರ್ಷಿಸಿತಲ್ಲದೆ, ಸುಮಾರು 380ಕ್ಕೂ ಹೆಚ್ಚು ಕಲಾವಿದರು ಯುವಜನ ಮೇಳದಲ್ಲಿ ಭಾಗವಹಿಸಿ ಕಲಾ ಪ್ರದರ್ಶನ ನೀಡಿದರು.

ಜಿಲ್ಲೆಯ 7 ತಾಲೂಕಿನ ನಾನಾ ಗ್ರಾಮಗಳಿಂದ ಬಂದಿದ್ದ ಗ್ರಾಮೀಣ ಪ್ರತಿಭೆಗಳು ತಮ್ಮ ಕಲಾ ತಂಡಗಳೊಂದಿಗೆ ಆಗಮಿಸಿ, ಕಲಾ ಪ್ರದರ್ಶನವನ್ನು ನೀಡಿದವು, ಅಲ್ಲದೇ ಕಲಾ ಉಡುಗೆಯಿಂದಲೂ ಜನರನ್ನು ಆಕರ್ಷಿಸಿದರು, ಅಲ್ಲದೇ ಈ ಕಾರ್ಯಕ್ರಮದಲ್ಲಿ ಕದಬಹಳ್ಳಿಯ ಕಿತ್ತೂರುರಾಣಿ ಚನ್ನಮ್ಮ, ದೇವಲಾಪುರ, ಪಿ.ನೇರಲಕೆರೆ ಶಾಲಾ ಮಕ್ಕಳು ಕೂಡ ಭಾಗವಹಿಸಿ, ಗ್ರಾಮೀಣ ಭಾಗದ ಕಲೆಯನ್ನು ಪ್ರದರ್ಶಿಸಿದ್ದು ಬಹಳ ವಿಶೇಷವಾಗಿತ್ತು.

17 ಪ್ರಾಕಾರಗಳು: 15 ರಿಂದ 35 ವಯಸ್ಸಿನ ಯುವಕ, ಯುವತಿಯರು ಮೇಳದಲ್ಲಿ ಭಾಗವಹಿಸಿದ್ದರು. ಭಾವಗೀತೆ, ಲಾವಣಿ, ರಂಗಗೀತೆ, ಏಕಪಾತ್ರಭಿನಯ, ಗೀಗೀಪದ, ಕೋಲಾಟ, ಜನಪದನೃತ್ಯ, ಭಜನೆ, ಜನಪದ ಸಮೂಹ ಗೀತೆ, ಜೋಳ, ರಾಗಿ ಬೀಸುವ ಪದ, ಸೋಭಾನೆ ಪದ, ವೀರಗಾಸೆ, ವೀರಭದ್ರ ಕುಣಿತ, ಡೋಳ್ಳುಕುಣಿತ, ಸಣ್ಣಾಟ, ಯಕ್ಷಗಾನ, ಚರ್ಮವಾದ್ಯ ಮೇಳೆ ದೊಡ್ಡಾಟ( ಮೂಡಲ ಪಾಯ) ಹೀಗೆ 17 ಪ್ರಕಾರಗಳಲ್ಲಿ ಜಾನಪದ ಸಾಹಿತ್ಯ ಮೂಡಿಬಂದವು. ಮೇಳದಲ್ಲಿ ತೀರ್ಪುಗಾರರು ಸ್ಪರ್ಧಿಗಳನ್ನು ಆಯ್ಕೆ ಮಾಡಲು ಶ್ರಮಿಸಿದರು.

ಸಮಾರೋಪ: ಕ್ಷೇತ್ರ ಶಿಕ್ಷಣಾಕಾರಿ ಜಿ.ಎನ್‌. ನಾಗೇಶ್‌ ಮಾತನಾಡಿ, ನಗರೀಕರಣದಿಂದಾಗಿ ನಮ್ಮ ಪೂರ್ವಜರ ಕಲೆಗಳಾದ ಜಾನಪದ ಕಲೆಗಳು ಇಂದು ನಶಿಸುತ್ತಿವೆ, ಇವುಗಳನ್ನು ಉಳಿಸಿ, ಬೆಳೆಸುವ ಕೆಲಸವನ್ನು ನಾವೆಲ್ಲಾ ಸೇರಿ ಮಾಡಬೇಕು ಎಂದು ಹೇಳಿದರು.

ಸಾಹಿತಿ ಕ.ರಾ.ಕೃಷ್ಣಸ್ವಾಮಿ ವಹಿಸಿ, ಮಾತನಾಡಿ ನಮ್ಮ ಜನಪದ ಕಲೆ ಮನುಷ್ಯನಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಹೇಳುತ್ತದೆ, ಇಂತಹ ಕಲೆಯನ್ನು ಉಳಿಸಲು ಸರಕಾರ ಸೇರಿದಂತೆ ಜನಸಾಮಾನ್ಯರೆಲ್ಲಾ ಒಗ್ಗೂಡಬೇಕು ಎಂದು ಹೇಳಿದರು.

ಜಿಪಂ ಸದಸ್ಯ ಡಿ.ಕೆ.ಶಿವಪ್ರಕಾಶ್‌, ಸಾಹಿತಿ ಕ.ರಾ.ಕೃಷ್ಣಸ್ವಾಮಿ ಪತ್ನಿ ಲಲಿತಮ್ಮ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ನಾಗತೀಹಳ್ಳಿ ರಮೇಶ್‌, ಜನಪದ ಪರಿಷತ್‌ ಅಧ್ಯಕ್ಷ ಮಜೇಶ್‌ ಕುಮಾರ್‌, ಪ್ರೌಠಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್‌.ರಮೇಶ್‌, ಯುವ ಪರಿಷತ್‌ ಪ್ರಧಾನ ಕಾರ್ಯದರ್ಶಿ ಜಿ.ಬೊಮ್ಮನಹಳ್ಳಿ ವಿಜಯ್‌ ಕುಮಾರ್‌, ಸೌಂದರ್ಯ, ಶಿಕ್ಷಕರಾದ ಎನ್‌.ಸಿ.ಶಿವಕುಮಾರ್‌, ಲಿಂಗರಾಜು ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.