ಜಿಪಂ ಬಜೆಟ್: ಶಿಕ್ಷಣ ಇಲಾಖೆಗೆ ಸಿಂಹಪಾಲು

ಜಿಪಂ: 908.02 ಕೋಟಿ ರೂ. ಬಜೆಟ್‌ಗೆ ಅನುಮೋದನೆ • ಕಳೆದ ವರ್ಷಕ್ಕಿಂತ 130.74 ಕೋಟಿ ರೂ. ಹೆಚ್ಚುವರಿ ನೀಡಿಕೆ

Team Udayavani, Jun 20, 2019, 2:22 PM IST

mandya-tdy-1..

ಬಜೆಟ್ ಪೆಟ್ಟಿಗೆಯನ್ನು ಪ್ರದರ್ಶಿಸುತ್ತಿರುವ ಅಧ್ಯಕ್ಷೆ ನಾಗರತ್ನಸ್ವಾಮಿ.

ಮಂಡ್ಯ: 2019-20ನೇ ಸಾಲಿಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ 908.02 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಜಿಪಂ ಕಾರ್ಯಕ್ರಮಗಳಿಗೆ 293.02 ಕೋಟಿ ರೂ., ತಾಪಂಗೆ 613.86 ಕೋಟಿ ರೂ. ಹಾಗೂ ಗ್ರಾಮ ಪಂಚಾಯಿತಿಗೆ 1.14 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ನಾಗರತ್ನಸ್ವಾಮಿ ಹೇಳಿದರು.

ಬುಧವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ಆಯವ್ಯಯ ಮಂಡಿಸಿ ಮಾತನಾಡಿ, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 130.74 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗಿದ್ದು, ಹಿಂದಿನ ಸಾಲಿಗೆ ಹೋಲಿಸಿದರೆ ಶೇ.16.82ರಷ್ಟು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. 2018-19ನೇ ಸಾಲಿನಲ್ಲಿ 777.28 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿತ್ತು ಎಂದು ಭಾಷಣದಲ್ಲಿ ತಿಳಿಸಿದರು.

ಶಿಕ್ಷಣ ಇಲಾಖೆ ಸಿಂಹಪಾಲು: ಬಜೆಟ್‌ನಲ್ಲಿ ಮೀಸಲಿಟಿrರುವ ಅನುದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಿಂಹಪಾಲು ಪಡೆದುಕೊಂಡಿದೆ. ಶಿಕ್ಷಣ ಇಲಾಖೆ ಕಾರ್ಯಕ್ರಮಗಳಿಗೆ 522.68 ಕೋಟಿ ರೂ. ಹಣ ನೀಡಿದ್ದು, ಕಳೆದ ಸಾಲಿನಲ್ಲಿ 436.92 ಕೋಟಿ ರೂ. ಹಣ ಹಂಚಿಕೆ ಮಾಡಿತ್ತು. ಬಿಸಿಯೂಟ ಕಾರ್ಯಕ್ರಮಕ್ಕೆ 43.18 ಕೋಟಿ ರೂ. ನಿಗದಿಪಡಿಸಿದ್ದು, ಈ ಸಾಲಿನಲ್ಲಿ 12 ಸಾವಿರ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲು ನಿರ್ಧರಿಸಲಾಗಿದೆ. ಶಾಲಾ ಕಟ್ಟಡಗಳ ದುರಸ್ತಿಗೆ 45 ಲಕ್ಷ ರೂ. ಅನುದಾನ, 52 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಪೀಠೊಪಕರಣ ಖರೀದಿ ಹಾಗೂ ಶಿಕ್ಷಕರ ವೇತನಾನುದಾನಕ್ಕೆ 25 ಲಕ್ಷ ರೂ. ನೀಡಿದೆ ಎಂದು ವಿವರಿಸಿದರು.

ಆರೋಗ್ಯ ಇಲಾಖೆಗೆ 66.66 ಕೋಟಿ: ಆರೋಗ್ಯ ಇಲಾಖೆಗೆ 66.66 ಕೋಟಿ ರೂ. ಹಣ ನೀಡಿದೆ. ಇದರಲ್ಲಿ ಇಲಾಖಾ ಕಟ್ಟಡಗಳ ದುರಸ್ತಿಗೆ 52 ಲಕ್ಷ ರೂ. ಸಲಕರಣೆ ಖರೀದಿ ಹಾಗೂ ರಿಪೇರಿಗೆ 21 ಲಕ್ಷ ರೂ. ಹಾಗೂ ತಾಪಂ ಲೆಕ್ಕ ಶೀರ್ಷಿಕೆಯಡಿ ಸಾಮಗ್ರಿಗಳ ಖರೀದಿಗೆ 21 ಲಕ್ಷ ರೂ. ಹಣ ಒದಗಿಸಲಾಗಿದೆ. ಆಯುಷ್‌ ಇಲಾಖೆಗೆ 34.98 ಕೋಟಿ ರೂ. ಅನುದಾನ ನಿಗದಿಯಾಗಿದ್ದು, ಇದರಲ್ಲಿ ಸಲಕರಣೆ ಖರೀದಿ, ರಿಪೇರಿ, ಪ್ರಯಾಣ ಭತ್ಯೆ, ಸಾದಿಲ್ವಾರು ವೆಚ್ಚಕ್ಕೆ 35.52 ಲಕ್ಷ ರೂ. ಅಧಿಕಾರಿ ಮತ್ತು ಸಿಬ್ಬಂದಿ ವೇತನಕ್ಕೆ 4.41 ಕೋಟಿ ರೂ., ಔಷಧ ಖರೀದಿಗೆ 22.05 ಲಕ್ಷ ರೂ. ನೀಡಿದೆ ಎಂದರು.

ಕೃಷಿ ಇಲಾಖೆಗೆ 7.95 ಕೋಟಿ ರೂ.: ಕೃಷಿ ಇಲಾಖೆಗೆ ಈ ಸಾಲಿನಲ್ಲಿ 7.95 ಕೋಟಿ ರೂ. ಅನುದಾನ ಒದಗಿಸಿದೆ. ರೈತ ಸಂಪರ್ಕ ಕೇಂದ್ರಗಳ ನಿರ್ವಹಣೆ, ಪ್ರಾತ್ಯಕ್ಷಿಕೆ, ತರಬೇತಿಗೆ 28 ಲಕ್ಷ ರೂ., ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ರೈತರಿಗೆ ವಿತರಿÓ‌ಲು 33 ಲಕ್ಷ ರೂ., ಕೃಷಿ ಕಚೇರಿ ಕಟ್ಟಡಗಳ ದುರಸ್ತಿಗೆ 12 ಲಕ್ಷ ರೂ., ಸಹಾಯಧನದಲ್ಲಿ ಸಾವಯವ ಗೊಬ್ಬರ ವಿತರಿಸಲು 7 ಲಕ್ಷ ರೂ., ರೋಗ, ಕೀಟಗ‌ಳ ಹಾವಳಿ ನಿಯಂತ್ರಣಕ್ಕೆ ಔಷಧ, ಸಸ್ಯ ಸಂರಕ್ಷಣಾ ಉಪಕರಣಗಳಿಗೆ 9 ಲಕ್ಷ ರೂ. ನೀಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 2018-20ನೇ ಸಾಲಿನಲ್ಲಿ 1.01 ಕೋಟಿ ರೂ. ಅನುದಾನ ನಿಗದಿಪಡಿಸಿದ್ದು, ಈ ಸಾಲಿನಲ್ಲಿ 84.59 ಲಕ್ಷ ರೂ. ಮಾತ್ರ ನೀಡಿದೆ.

ರಸ್ತೆಗಳ ನಿರ್ವಹಣೆಗೆ ಅನುದಾನ: ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ ಗ್ರಾಮೀಣ ಸಂಪರ್ಕ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ 7.75 ಕೋಟಿ ರೂ. ನೀಡಿದೆ. ಜಿಲ್ಲೆಯಲ್ಲಿ 8573 ಕಿ.ಮೀ. ಉದ್ದ ರಸ್ತೆ ಇದ್ದು, ಇದರಲ್ಲಿ 1746 ಕಿ.ಮೀ. ಡಾಂಬರು, 1591 ಕಿ.ಮೀ. ಜಲ್ಲಿ ರಸ್ತೆ ಉಳಿದ 5234 ಕಿ.ಮೀ. ಗ್ರಾವೆಲ್ ರಸ್ತೆ ಇದೆ. ಈ ರಸ್ತೆಗಳ ನಿರ್ವಹಣೆಗೆ ಅನುದಾನವನ್ನು ಬಳಕೆ ಮಾಡಿಕೊಳ್ಳಬಹುದು.

ಕೆರೆಗಳ ನಿರ್ವಹಣೆಗೆ 1.24 ಕೋಟಿ ರೂ.: ಸಣ್ಣ ನೀರಾವರಿ ಕೆರೆಗಳ ನಿರ್ವಹಣೆ ಮಾಡಲು ಸರ್ಕಾರದಿಂದ 1.24 ಕೋಟಿ ರೂ. ಅನುದಾನ ಒದಗಿಸಿದೆ. 2018-19ನೇ ಸಾಲಿನಲ್ಲಿ ಸಣ್ಣ ನೀರಾವರಿ ಸಮೀಕ್ಷಾ ಕಾರ್ಯ, ಹೊಸ ಸರಬರಾಜು ಯೋಜನೆಯಡಿ 5.72 ಲಕ್ಷ ರೂ. ಹಾಗೂ 4.58 ಲಕ್ಷ ರೂ. ಅನುದಾನ ಒದಗಿಸಿದ್ದು, ಈ ಅನುದಾನದಲ್ಲಿ ಸಣ್ಣಕೆರೆಗಳ ಸರಹದ್ದನ್ನು ಗುರುತಿಸುವ ಕಾರ್ಯವನ್ನು ತೆಗೆದುಕೊಳ್ಳಲಾಗಿದ್ದು, ಈ ಅನುದಾನ ಖರ್ಚಾಗದೆ ಹಾಗೇ ಉಳಿದಿತ್ತು..ಈ ಸಾಲಿನಲ್ಲಿ 6.12 ಲಕ್ಷ ರೂ 4.90 ಲಕ್ಷ ರೂ. ಅನುದಾನ ನೀಡಿದ್ದು, ಕೆರೆಗಳ ಸರಹದ್ದು ಗುರುತಿಸುವ ಕಾರ್ಯ ಕೈಗೊಳ್ಳಲಾಗುವುದು.

ಹೊಸ ಗೇಟ್‌ಗಳಿಗೆ ಅವಕಾಶ: 2018-19ನೇ ಸಾಲಿನಲ್ಲಿ ಸಣ್ಣ ಕೆರೆಗಳು, ಹೊಸ ಸರಬರಾಜಿಗೆ 10.30 ಲಕ್ಷ ರೂ. ಅನುದಾನ ನೀಡಿದ್ದು,ಅದು ಖರ್ಚಾಗಿರುವುದಿಲ್ಲ. ಈ ಸಾಲಿನಲ್ಲಿ 11.02 ಲಕ್ಷ ರೂ. ಅನುದಾನ ನಿಗದಿಪಡಿಸಿದ್ದು, ಇದರಲ್ಲಿ ಕೆಲವು ಕೆರೆಗಳಲ್ಲಿ ಸ್ಲೂಯೀಸ್‌ ಗೇಟ್ ಇಲ್ಲದೆ ನೀರು ಪೋಲಾಗುವ ಸಾಧ್ಯತೆಗಳಿದ್ದರೆ ಹೊಸ ಗೇಟ್‌ಗಳನ್ನು ಅಳವಡಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಈ ಸಾಲಿನಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗಳ ಕ್ರಿಯಾಯೋಜನೆ ರೂಪಿಸಲು 246.05 ಕೋಟಿ ರೂ.ಗಳ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ 190.30 ಕೋಟಿ ರೂ. ಹಣನಿಗದಿಪಡಿಸಲಾಗಿದೆ.

ಡಿ.ದೇವರಾಜ ಅರಸು ಹುಟ್ಟುಹಬ್ಬ ಆಚರಣೆಗೆ 1 ಲಕ್ಷ ರೂ.: ಸಮಾಜ ಕಲ್ಯಾಣ ಇಲಾಖೆಯಲ್ಲಿ ಜಿಪಂ ಕಾರ್ಯಕ್ರಮಗಳ ಅನುಷ್ಠಾನಕ್ಕೆ 18.88 ಕೋಟಿ ರೂ., ತಾಪಂ ಕಾರ್ಯಕ್ರಮಗಳಿಗೆ 18.98 ಕೋಟಿ ರೂ. ಸೇರಿ 37.87 ಕೋಟಿ ರೂ. ಹಣ ನೀಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 43.13 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವೇತನ ಬಾಬ್ತು 8.01 ಕೋಟಿ ರೂ. ಕಟ್ಟಡ ಬಾಡಿಗೆ 17.64 ಕೋಟಿ ರೂ., ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡಗಳ ದುರಸ್ತಿಗೆ 53.19 ಲಕ್ಷ ರೂ., ಇತರೆ ಹಿಂದುಳಿದ ವರ್ಗಗಳಿಗೆ ರಿಯಾಯಿತಿಗೆ 15.93 ಕೋಟಿ ರೂ., ಡಿ.ದೇವರಾಜ ಅರಸು ಹುಟ್ಟು ಹಬ್ಬ ಆಚರಣೆಗೆ 1 ಲಕ್ಷ ರೂ. ನೀಡಿದೆ.

ಬಜೆಟ್ ಸಭೆಯಲ್ಲಿ ಉಪಾಧ್ಯಕ್ಷೆ ಪಿ.ಕೆ.ಗಾಯತ್ರಿ, ಜಿಪಂ ಸಿಇಒ ಕೆ.ಯಾಲಕ್ಕೀಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ರಾದ ರವಿ, ಡಿ.ಕೆ.ಶಿವಪ್ರಕಾಶ್‌, ಮುಖ್ಯ ಯೋಜನಾಧಿಕಾರಿ ಧನುಷ್‌ ಇದ್ದರು.

 

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.