ಪ್ಲಾಸ್ಟಿಕ್‌ ನಿಷೇಧ ಜಾರಿಗೆ ಅಧಿಕಾರಿಗಳ ಹಿಂದೇಟು

ಪ್ಲಾಸ್ಟಿಕ್‌ನಿಷೇಧಕ್ಕೆ ಕಠಿಣ ಕಾನೂನು ಜಾರಿಗೊಳಿಸಿ „ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಲ್ಲಿ ಹೆಚ್ಚಿದ ಜಾಗೃತಿ

Team Udayavani, Oct 11, 2019, 6:52 PM IST

11-October-20

ಮಂಡ್ಯ ಮಂಜುನಾಥ್‌
ಮಂಡ್ಯ: ಪರಿಸರಕ್ಕೆ ಹಾನಿಕಾರಕ ಪ್ಲಾಸ್ಟಿಕ್‌ ಬಳಕೆ ನಿಷೇಧ ಜಿಲ್ಲೆಯಲ್ಲಿ ಜಾರಿಯಲ್ಲಿದ್ದರೂ ಪರಿಣಾಮಕಾರಿ ಅನುಷ್ಠಾನ ಮಾತ್ರ ಇಂದಿಗೂ ಸಾಧ್ಯವಾಗಿಲ್ಲ. ದಂಡದ ಎಚ್ಚರಿಕೆ ನಡುವೆಯೂ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಕೈಚೀಲಗಳ ಮಾರಾಟ ನಿರ್ಭೀತಿಯಿಂದ ಸಾಗಿದೆ.

ಜನರ ಮನಸ್ಥಿತಿ ಬದಲಾಗದಿರುವುದೂ ಪ್ಲಾಸ್ಟಿಕ್‌ ನಿಷೇಧಕ್ಕೆ ದೊಡ್ಡ ತೊಡಕಾಗಿ ಪರಿಣಮಿಸಿದೆ. ಮೂರು ತಿಂಗಳಿಗೋ, ಆರು ತಿಂಗಳಿಗೋ ಒಮ್ಮೆ ನಗರಸಭೆ, ಪುರಸಭೆ ಅಧಿಕಾರಿಗಳು ನಾಲ್ಕೈದು ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವ ಪ್ರಕ್ರಿಯೆ ಸಾಮಾನ್ಯವಾಗಿದೆ.

ಅದನ್ನು ಬಿಟ್ಟರೆ ಸಮರೋಪಾದಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕುವುದಕ್ಕೆ ಯಾರೊಬ್ಬರೂ ಮುಂದಾಗುತ್ತಿಲ್ಲ. ಇದರಿಂದ ಚಿಲ್ಲರೆ ಅಂಗಡಿಗಳಿಂದ ಹಿಡಿದು ದೊಡ್ಡ ಅಂಗಡಿಯವರೆಗೂ ಪ್ಲಾಸ್ಟಿಕ್‌ ವಸ್ತುಗಳು ಗ್ರಾಹಕರಿಗೆ ಸುಲಭವಾಗಿ ಕೈಸೇರುತ್ತಿವೆ.

ಇಚ್ಛಾಶಕ್ತಿ ಕೊರತೆ: ಅಲ್ಲದೆ, ಆಯುಧಪೂಜೆ, ವಿಜಯದಶಮಿ ಸಮಯದಲ್ಲಿ ಹಾದಿ-ಬೀದಿಗಳಲ್ಲಿ ಪ್ಲಾಸ್ಟಿಕ್‌ ಕೈಚೀಲಗಳು ಸಾವಿರಾರು ಸಂಖ್ಯೆಯಲ್ಲಿ ಮಾರಾಟವಾದರೂ ಕೇಳುವವರೇ ಇರಲಿಲ್ಲ. ಪ್ಲಾಸ್ಟಿಕ್‌ ಬಳಕೆ ವಿರುದ್ಧದ ಕಾನೂನಾತ್ಮಕ ಕ್ರಮಗಳು ಕಠಿಣವಾಗಿದ್ದರೂ ಅವುಗಳ ಜಾರಿಗೆ ಅಧಿಕಾರಿಗಳು ಬದ್ಧತೆ, ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದು ಪ್ಲಾಸ್ಟಿಕ್‌ ವಿರುದ್ಧದ ಹೋರಾಟ ಕುಗ್ಗುವಂತೆ ಮಾಡಿದೆ.

ಸ್ವಯಂ ಪ್ರೇರಿತ ಘೋಷಣೆ: ಕೆಲವೊಂದು ಹೋಟೆಲ್‌, ಬೇಕರಿ ಅಂಗಡಿ ಮಾಲೀಕರು, ವರ್ತಕರು ಸೇರಿದಂತೆ ಹಲವು ವ್ಯಾಪಾರಿಗಳು ಪ್ಲಾಸ್ಟಿಕ್‌ ಬಳಕೆ ನಿಷೇಧಕ್ಕೆ ಸ್ವಯಂಪ್ರೇರಿತವಾಗಿ ಮುಂದಾಗಿದ್ದಾರೆ. ಹೋಟೆಲ್‌ ಗಳವರು ಈಗಾಗಲೇ ನಾಮಫ‌ಲಕವನ್ನು ಅಳವಡಿಸಿದ್ದು, ಊಟ-ತಿಂಡಿಯನ್ನು ತೆಗೆದುಕೊಂಡು ಹೋಗುವವರು ಟಿಫ‌ನ್‌ ಬಾಕ್ಸ್‌ಗಳನ್ನು ತರುವಂತೆ ಸೂಚನಾ ಫ‌ಲಕವನ್ನು ಹಾಕಿದ್ದಾರೆ. ಬೇಕರಿ ಹಾಗೂ ವರ್ತಕರು ಗ್ರಾಹಕರು ಖರೀದಿಸುವ ತಿಂಡಿ ಹಾಗೂ ಇನ್ನಿತರ ವಸ್ತುಗಳಿಗೆ ಬಟ್ಟೆ
ಬ್ಯಾಗ್‌ಗಳನ್ನು ನೀಡಿ ಅದಕ್ಕೆ ಪ್ರತ್ಯೇಕ ಹಣ ಪಡೆಯುತ್ತಿದ್ದಾರೆ.

ಆದರೆ, ಬೀದಿ ವ್ಯಾಪಾರಿಗಳು, ಸಣ್ಣ-ಪುಟ್ಟ ಅಂಗಡಿಯವರು ಹಾಗೂ ಕೆಲವು ದೊಡ್ಡ ಮಟ್ಟದ ವರ್ತಕರು-ವ್ಯಾಪಾರಿಗಳು ಮಾತ್ರ ಪ್ಲಾಸ್ಟಿಕ್‌ ಕೈಚೀಲಗಳು ಹಾಗೂ ನಿಷೇಧಿತ ವಸ್ತುಗಳ ಮಾರಾಟವನ್ನು ಕೈಬಿಡುತ್ತಿಲ್ಲ. ಅಂತಹ ವ್ಯಾಪಾರಿಗಳು ಹಾಗೂ ಬಳಸುವವರನ್ನು ಹಿಡಿದು ದಂಡ ಶಿಕ್ಷೆಗೆ ಗುರಿಪಡಿಸದಿರುವುದರಿಂದ ಪ್ಲಾಸ್ಟಿಕ್‌ ನಿಷೇಧ ಕಾನೂನಿನ ಬಗ್ಗೆ ಜನರು ನಿರ್ಲಕ್ಷ್ಯ ವಹಿಸಲು ಕಾರಣವಾಗಿದೆ.

ಗ್ರಾಮೀಣ ಭಾಗದಲ್ಲಿ ದಿಟ್ಟ ಹೆಜ್ಜೆ: ಪ್ಲಾಸ್ಟಿಕ್‌ ವಿರುದ್ಧ ಹೋರಾಟ ನಡೆಸುವಲ್ಲಿ ಸ್ಥಳೀಯ ಸಂಸ್ಥೆಗಳು ದಿಟ್ಟ ಹೆಜ್ಜೆ ಇಟ್ಟಿವೆ. ಗ್ರಾಮೀಣ ಪ್ರದೇಶದಲ್ಲೂ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ ಹಳ್ಳಿಗಳಲ್ಲೂ ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಪ್ರಾರಂಭಿಕವಾಗಿ ಮದ್ದೂರು ತಾಲೂಕು ಅಣ್ಣೂರು, ಹೆಮ್ಮನಹಳ್ಳಿ ಹಾಗೂ ಯಡಗನಹಳ್ಳಿ ಗ್ರಾಮ ಪಂಚಾಯಿತಿಗಳು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧಿಸಿ, ಮನೆಮನೆಗೆ ಬಟ್ಟೆ ಬ್ಯಾಗ್‌ಳನ್ನು ವಿತರಿಸುವ ಕಾರ್ಯವನ್ನು ಮಾಡುತ್ತಿವೆ.

ಬಟ್ಟೆ, ಪೇಪರ್‌ ಬ್ಯಾಗ್‌ ಮಾರಾಟ ಮಂಡ್ಯ ತಾಲೂಕಿನ ಕೀಲಾರ ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್‌ ನಿಷೇಧ ಮಾಡಲು ಸಜ್ಜಾಗಿದ್ದು, ಎಲ್ಲ ಗ್ರಾಮಸ್ಥರಿಗೂ ಇದರ ಬಗ್ಗೆ ಅರಿವು ಮೂಡಿಸಿ ಪ್ಲಾಸ್ಟಿಕ್‌ ಮುಕ್ತ ಗ್ರಾಮವನ್ನಾಗಿಸಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಪ್ಲಾಸ್ಟಿಕ್‌ ನಿಷೇಧದ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲ ಅಂಗಡಿಗಳಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೊತೆ ಪಂಚಾಯತ್‌ ಸದಸ್ಯರೇ ಖುದ್ದು ಭೇಟಿ ನೀಡಿ ಮನವರಿಕೆ ಮಾಡುತ್ತಿದ್ದಾರೆ. ಅಲ್ಲಲ್ಲಿ ನೋಟಿಸ್‌ ಅಂಟಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಕೆಲವು ಅಂಗಡಿ ಮಾಲೀಕರು ಪ್ಲಾಸ್ಟಿಕ್‌ ನಿಷೇಧಕ್ಕೆ ಸಹಕಾರ ನೀಡುತ್ತಿದ್ದು, ಈಗಾಗಲೇ ಬಟ್ಟೆ ಹಾಗೂ ಪೇಪರ್‌ ಬ್ಯಾಗ್‌ಗಳನ್ನು ಗ್ರಾಹಕರಿಗೆ ನೀಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಸೇರಿದಂತೆ ಗ್ರಾಮದಲ್ಲಿನ 30ಕ್ಕೂ ಹೆಚ್ಚು ಸಂಘಟನೆಗಳ ಯುವಕರು, ಮುಖಂಡರು ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕೆ ಕೈ ಜೋಡಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳೂ ತಮ್ಮ ಪೋಷಕರಿಗೆ ತಿಳಿವಳಿಕೆ ನೀಡುತ್ತಿದ್ದು, ಶೀಘ್ರವಾಗಿ ಕೀಲಾರ ಪ್ಲಾಸ್ಟಿಕ್‌ ಮುಕ್ತ ಗ್ರಾಮವಾಗಲಿದೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿ ಇದೆ.

ಪ್ಲಾಸ್ಟಿಕ್‌ ವಿರುದ್ಧ ಸಮರ: ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮ ಪಂಚಾಯಿತಿಯೂ ಪ್ಲಾಸ್ಟಿಕ್‌ ವಿರುದ್ಧ ಸಮರ ಸಾರಿದೆ. ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಂದ ಹೊರಬೀಳುವ ಪ್ಲಾಸ್ಟಿಕ್‌ನ್ನು ಸಂಗ್ರಹಿಸಿ ಒಂದೆಡೆ ಶೇಖರಿಸಲಾಗುತ್ತಿದ್ದು, ನಂತರ ಅದನ್ನು ಪುನರ್ಬಳಕೆ ಮಾಡುವ ಕಂಪನಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಪಂಚಾಯಿತಿ ಅಧಿಕಾರಿಗಳು ಪ್ಲಾಸ್ಟಿಕ್‌ ಬಳಸದಂತೆ ಜನರಲ್ಲಿ ಮನವಿ ಮಾಡುತ್ತಿದ್ದು, ಗ್ರಾಮಸ್ತರೂ ಹೆಚ್ಚಿನ ರೀತಿಯ ಸಹಕಾರ ನೀಡುತ್ತಿರುವುದಾಗಿ ತಿಳಿದುಬಂದಿದೆ.

ವಿದ್ಯಾವಂತರಿಂದಲೇ ಹೆಚ್ಚು ಬಳಕೆ: ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ-ಪಟ್ಟಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಹೆಚ್ಚಿದೆ. ವಿದ್ಯಾವಂತ ಸಮೂಹ ಹೆಚ್ಚಿರುವ ಸ್ಥಳಗಳಲ್ಲೇ ನಿಯಂತ್ರಣ ಸಾಧ್ಯವಾಗದಿರುವುದು ದೌರ್ಭಾಗ್ಯದ ಸಂಗತಿ. ಅಲ್ಲದೆ,
ಪ್ಲಾಸ್ಟಿಕ್‌ ಬಳಕೆಯಿಂದ ಆಗುವ ಅಪಾಯದ ಬಗ್ಗೆ ಅರಿವು-ಜಾಗೃತಿ ಮೂಡಿಸಬೇಕಾದ ಬುದ್ಧಿವಂತರೇ ಕೈಯ್ಯಲ್ಲಿ ಪ್ಲಾಸ್ಟಿಕ್‌ ಹಿಡಿದು ಓಡಾಡುತ್ತಿದ್ದಾರೆ. ಇವರಲ್ಲಿ ಜಾಗೃತಿ ಮೂಡುವುದು ಯಾವಾಗ ಎನ್ನುವುದು ಪ್ರಶ್ನೆಯಾಗಿದೆ.

ನಿಯಂತ್ರಣವೇ ಇಲ್ಲ: ಹೊರಗಿನಿಂದ ಪ್ಲಾಸ್ಟಿಕ್‌ ವಸ್ತುಗಳು ನಿತ್ಯವೂ ಜಿಲ್ಲೆಯೊಳಗೆ ಪ್ರವೇಶಿಸುತ್ತಾ ನಗರ-ಪಟ್ಟಣ ಪ್ರದೇಶಗಳ ಅಂಗಡಿಗಳೊಳಗೆ ವಿರಾಜಮಾನವಾಗುತ್ತಿವೆ. ಈ ಪ್ಲಾಸ್ಟಿಕ್‌ ಉತ್ಪಾದಕ ಕಂಪನಿಗಳ ಮೇಲೆ ಯಾವುದೇ ಕ್ರಮ ಜರುಗಿಸುತ್ತಿಲ್ಲ.
ಅಲ್ಲದೆ, ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳು ಜಿಲ್ಲೆಯೊಳಗೆ ಪ್ರವೇಶಿಸದಂತೆ ತಡೆಯುವುದಕ್ಕೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ. ಇದರಿಂದ ಪ್ಲಾಸ್ಟಿಕ್‌ ಕಾನೂನಿನ ಹಿಡಿತದಿಂದ ಜಾರಿಕೊಂಡು ಓಡಾಡುತ್ತಲೇ ಇದೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.