ಕೃಷಿ ಮೇಲೆ ಮಳೆ ಅನಿಶ್ಚಿತತೆಯ ಕಾರ್ಮೋಡ

ಮುಂಗಾರು ಮುನಿಸು: ಕಂಗೆಟ್ಟ ರೈತರ ಬದುಕು • ಮಳೆಯಾಗದಿದ್ದರೆ ಬೆಳೆ ಬೆಳೆಯುವುದು ಕನಸು

Team Udayavani, Jul 18, 2019, 3:21 PM IST

18-July-36

ರೈತರು ಬಿತ್ತನೆಗಾಗಿ ಸಿದ್ಧಪಡಿಸಿರುವ ಭೂಮಿ.

ಮಂಡ್ಯ: ನಾಲ್ಕು ವರ್ಷ ಜಿಲ್ಲೆಯಲ್ಲಿ ತಳವೂರಿದ್ದ ಬರಗಾಲ ಕಳೆದ ವರ್ಷ ವರುಣನ ಕೃಪೆಯಿಂದ ಮಾಯವಾಗಿತ್ತು. ಮತ್ತೆ ಈ ವರ್ಷ ಮಳೆಯ ಅನಿಶ್ಚಿತತೆ ಎಲ್ಲರನ್ನೂ ಕಾಡುತ್ತಿದೆ. ಬರಗಾಲದ ಛಾಯೆ ನಿಧಾನವಾಗಿ ಜಿಲ್ಲೆಯನ್ನು ಆವರಿಸಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಭೀಕರ ಪರಿಸ್ಥಿತಿ ಸೃಷ್ಟಿಯಾಗುವ ಆತಂಕ ಎಲ್ಲರನ್ನೂ ಕಾಡುತ್ತಿದೆ.

ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆಯ ಕೊರತೆಯಿಂದ ಕಬ್ಬು ಬೆಳೆ ಬಹುತೇಕ ಹಾನಿಗೊಳಗಾಗಿದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಹಿನ್ನಡೆಯಾಗಿದೆ. ಬಿತ್ತನೆ ಕಾರ್ಯವೂ ಕುಂಠಿತಗೊಂಡಿದೆ. ಭತ್ತದ ಬಿತ್ತನೆ ಒಂದು ಹೆಕ್ಟೇರ್‌ ಪ್ರದೇಶದಲ್ಲೂ ನಡೆಯದೆ ಶೂನ್ಯ ಆವರಿಸಿದೆ. ಸೂಚನೆ ನೀಡಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ 96 ಅಡಿ ನೀರು ಸಂಗ್ರಹವಾದರಷ್ಟೇ ನಾಲೆಗಳ ಮೂಲಕ ಕೃಷಿಗೆ ನೀರು ಹರಿಸಲು ಸಾಧ್ಯ ಎಂಬುದು ನೀರಾವರಿ ಇಲಾಖೆ ಅಧಿಕಾರಿಗಳ ಮಾತಾಗಿದೆ.

ವಾರದ ಕೊನೆಯಲ್ಲಿ ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಉತ್ತಮ ಮಳೆಯಾಗಿ ಕೃಷ್ಣರಾಜಸಾಗರ ಸೇರಿದಂತೆ ಎಲ್ಲಾ ಜಲಾಶಯಗಳು ತುಂಬಿದಲ್ಲಿ ರೈತರ ಬದುಕು ಹಸನಾಗಲಿದೆ. ಒಂದು ವೇಳೆ ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಲಿದೆ.

ಕೆಆರ್‌ಎಸ್‌ನಲ್ಲಿ 90.90 ಅಡಿ ನೀರು: ಕಳೆದ ವರ್ಷ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿದ ಪರಿಣಾಮ 2018ರ ಜು.17ರ ವೇಳೆಗೆ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ ಭರ್ತಿಯಾಗಿತ್ತು. ಕೇರಳ ಮತ್ತು ಕೊಡಗಿನಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಅಣೆಕಟ್ಟೆಗೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಬರುತ್ತಿದ್ದರಿಂದ ಜಲಾಶಯಗಳೆಲ್ಲವೂ ಮೈದುಂಬಿಕೊಂಡಿದ್ದವು. ಕಾವೇರಿ ಜಲಾನಯನ ಪ್ರದೇಶದಲ್ಲಿ ಕೃಷಿ ಚಟುವಟಿಕೆಯೂ ಬಿರುಸನ್ನು ಪಡೆದುಕೊಂಡಿತ್ತು.

ಈ ವರ್ಷ ನಿರೀಕ್ಷೆಯಂತೆ ಮುಂಗಾರು ಮಳೆಯ ಆಗಮನವಾಗಿಲ್ಲ. ಪ್ರಸ್ತುತ ಕೃಷ್ಣರಾಜಸಾಗರ ಜಲಾಶಯದಲ್ಲಿ 90.90 ಅಡಿ ನೀರಿದ್ದು, 16.4 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 2578 ಕ್ಯುಸೆಕ್‌ ಒಳಹರಿವಿದ್ದು, 738 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಕುಡಿಯುವ ನೀರಿಗೂ ತೊಂದರೆ: ಹಾಲಿ ಕೆಆರ್‌ಎಸ್‌ನಲ್ಲಿ ಸಂಗ್ರಹವಾಗಿರುವ ನೀರನ್ನು ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಜನರ ಕುಡಿಯುವ ನೀರಿಗೆ ಮೀಸಲಿಡಲಾಗಿದೆ. ಈ ನೀರನ್ನು ಕೃಷಿ ಚಟುವಟಿಕೆಗೆ ಕೊಡಲು ಸಾಧ್ಯವೇ ಇಲ್ಲ. ಅಣೆಕಟ್ಟೆಯಲ್ಲಿ 96 ಅಡಿಗಿಂತಲೂ ಹೆಚ್ಚಿನ ನೀರು ಸಂಗ್ರಹವಾದಲ್ಲಿ ಮಾತ್ರ ಮುಂಗಾರು ಬೆಳೆಗೆ ಕಟ್ಟು ನೀರು ಪದ್ಧತಿಯಲ್ಲಿ

ನೀರು ಹರಿಸಲು ಸಾಧ್ಯ ಎಂದು ನೀರಾವರಿ ಸಲಹಾ ಸಮಿತಿ ತೀರ್ಮಾನ ಕೈಗೊಂಡಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಜುಲೈ ಮೊದಲ ವಾರದಿಂದಲೇ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭವಾಗಬೇಕಿತ್ತು. ಮಳೆ ಪ್ರಮಾಣ ಕಡಿಮೆಯಾಗಿರುವುದು ಹಾಗೂ ನಾಲೆಗಳಲ್ಲಿ ನೀರು ಹರಿಸದ ಕಾರಣ ಬಿತ್ತನೆ ಕಾರ್ಯ ಇನ್ನೂ ಆರಂಭವಾಗಿಲ್ಲ. 10 ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸಲು ನಿರ್ಧರಿಸಿರುವುದರಿಂದ ಇರುವ ಬೆಳೆ ರಕ್ಷಣೆ ಮಾಡಿಕೊಳ್ಳಲು ರೈತರಿಗೆ ಸೂಚನೆ ನೀಡಲಾಗಿದೆ.

ಭತ್ತದ ಬಿತ್ತನೆಯಲ್ಲಿ ಶೂನ್ಯ ಸಾಧನೆ: ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆ ಜಿಲ್ಲೆಯಲ್ಲಿ 58350 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡುವ ಗುರಿ ಹೊಂದಿತ್ತು. ಈವರೆಗೂ ಒಂದೇ ಒಂದು ಎಕರೆ ಪ್ರದೇಶದಲ್ಲೂ ಬಿತ್ತನೆಯಾಗಿಲ್ಲ. ಬಿತ್ತನೆ ಬೀಜ, ರಸಗೊಬ್ಬರ ಅಗತ್ಯವಿರುವಷ್ಟು ದಾಸ್ತಾನು ಮಾಡಲಾಗಿದೆ. ಮಳೆ ಬೀಳುವುದನ್ನೇ ಕೃಷಿ ಇಲಾಖೆ ಮತ್ತು ರೈತರು ಎದುರು ನೋಡುತ್ತಿದ್ದಾರೆ.

ಜಿಲ್ಲೆಯ 225 ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡುವ ಗುರಿ ಹೊಂದಿದೆ. 103 ಹೆಕ್ಟೇರ್‌ನಲ್ಲಿ ಬಿತ್ತನೆ ನಡೆದಿದೆ. 61865 ಹೆಕ್ಟೇರ್‌ನಲ್ಲಿ ರಾಗಿ ಬಿತ್ತನೆಯಾಗಬೇಕಿತ್ತಾದರೂ ಮಳೆ ಕೊರತೆಯಿಂದಾಗಿ ಕೇವಲ 100 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡುವ ಮೂಲಕ ಶೇ. 4.5ರಷ್ಟು ಸಾಧನೆ ಮಾಡಲಾಗಿದೆ. ತೊಗರಿ ಬಿತ್ತನೆ 1290 ಹೆಕ್ಟೇರ್‌ನಲ್ಲಿ ಆಗಬೇಕಿತ್ತು. ಆದರೆ, 578 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. 13340 ಹೆಕ್ಟೇರ್‌ನಲ್ಲಿ ಹುರುಳಿ ಬಿತ್ತನೆ ಮಾಡಬೇಕಿದೆ. ಕೇವಲ 360 ಹೆಕ್ಟೇರ್‌ನಲ್ಲಿ ಬಿತ್ತನೆ ನಡೆದಿದೆ. ಉದ್ದು 650 ಹೆಕ್ಟೇರ್‌ ಗುರಿಯಲ್ಲಿ 363 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದ್ದರೆ, ಹೆಸರು 535 ಹೆಕ್ಟೇರ್‌ ಗುರಿಯಲ್ಲಿ 270 ಹೆಕ್ಟೇರ್‌, ಅಲಸಂದೆ 8365 ಹೆಕ್ಟೇರ್‌ ಗುರಿಯ ಪೈಕಿ 7706 ಹೆಕ್ಟೇರ್‌ ಬಿತ್ತನೆ ನಡೆದಿದ್ದರೆ, 3670 ಹೆಕ್ಟೇರ್‌ನಲ್ಲಿ ಗುರಿ ಹೊಂದಿದ್ದ ಅವರೆ 103 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಮಳೆ ಕೊರತೆ ಕಾರಣದಿಂದಾಗಿ ಏಕದಳ ಮತ್ತು ದ್ವಿದಳ ಧಾನ್ಯಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ಮಳೆ ಇಲ್ಲದ ಕಾರಣ ಈ ಬೆಳೆಗಳು ಒಣಗುವ ಹಂತಕ್ಕೆ ಬಂದು ನಿಂತಿವೆ. ಈಗಾಗಲೇ ಬೆಳೆ ನಷ್ಟ ಸಮೀಕ್ಷೆ ನಡೆಸಲಾಗುತ್ತಿದ್ದು, ಯಾವ ಪ್ರಮಾಣದಲ್ಲಿ ಬೆಳೆ ನಷ್ಟ ಆಗಿದೆ ಎಂಬುದನ್ನು ಈಗಲೇ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾದಲ್ಲಿ ಮಾತ್ರ ಕೃಷಿ ಚಟುವಟಿಕೆ ಚುರುಕುಗೊಳ್ಳಲಿದೆ. ಇಲ್ಲದಿದ್ದರೆ ಕೃಷಿ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಳೆರಾಯನನ್ನೇ ಎದುರು ನೋಡುತ್ತಿರುವ ರೈತರು ದಿಕ್ಕು ತೋಚದೆ ಅಸಹಾಯಕರಾಗಿ ಕುಳಿತಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.