ಯುವಜನೋತ್ಸವಕ್ಕೆ ಖಾಲಿ ಕುರ್ಚಿಗಳೇ ಪ್ರೇಕ್ಷಕರು!

ಕ್ರೀಡಾ ಇಲಾಖೆಯಿಂದ ಕಾಟಾಚಾರದ ಕಾರ್ಯಕ್ರಮ „ ಕಲಾವಿದರಿಗೆ, ಜಿಲ್ಲಾ ಯುವ ಸಂಘಗಳಿಗೆ ಆಹ್ವಾನವಿಲ್ಲ

Team Udayavani, Sep 28, 2019, 4:05 PM IST

28-Sepctember-22

ಮಂಡ್ಯ: ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯಸರ್ಕಾರ ಯುವಜನೋತ್ಸವ ಕಾರ್ಯಕ್ರಮವನ್ನು ರೂಪಿಸಿದ್ದರೂ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಬೇಜವಾಬ್ದಾರಿಯಿಂದ ಅದೊಂದು ಕಾಟಾಚಾರದ ಕಾರ್ಯಕ್ರಮವಾಗಿ ಪರಿವರ್ತನೆಯಾಗಿದೆ.

ಜಿಲ್ಲಾ ಪಂಚಾಯಿತಿಯಿಂದ ಯುವಜನೋತ್ಸವಕ್ಕೆ ಪ್ರತಿ ವರ್ಷ ಲಕ್ಷಾಂತರ ರೂ. ಅನುದಾನ ನೀಡಲಾಗುತ್ತಿದ್ದರೂ ವ್ಯವಸ್ಥಿತ ಪ್ರಚಾರ, ಕಲಾವಿದರನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸುವಲ್ಲಿ ಇಲಾಖೆ ಅಧಿಕಾರಿಗಳು ನಿರಾಸಕ್ತಿ ವಹಿಸಿದ್ದಾರೆ. ಇದರಿಂದ ಯುವಜನೋತ್ಸವ ಕಳೆಗುಂದಿದೆ. ಯುವ ಪ್ರತಿಭೆಗಳಿಗೆ ಉತ್ತೇಜನವೂ ದೊರಕುತ್ತಿಲ್ಲ. ಪರಿಣಾಮ ಯುವಜನೋತ್ಸವಕ್ಕೆ ನೀಡುತ್ತಿರುವ ಅನುದಾನ ವ್ಯರ್ಥವಾಗುವುದರ ಜೊತೆಗೆ
ಯುವ ಪ್ರತಿಭೆಗಳಲ್ಲಿ ನಿರಾಸಕ್ತಿ ಮೂಡುವಂತಾಗಿದೆ.

ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಕಲಾಮಂದಿರದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಯುವಜನೋತ್ಸವ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಲಾಮಂದಿರದ ಮೊದಲ ಸಾಲಿನಲ್ಲಿ ಕೂರುವಷ್ಟು ಜನರೂ ಬಂದಿರಲಿಲ್ಲ. ಕಲಾವಿದರು, ಯುವಕ-ಯುವತಿ ಸಂಘಟನೆಯವರಾರೂ ಕಂಡು ಬರಲೇ ಇಲ್ಲ. ಇಡೀ ಕಲಾಮಂದಿರ ಪ್ರೇಕ್ಷಕರಿಲ್ಲದೆ ಬಿಕೋ ಎನ್ನುತ್ತಿತ್ತು. ಖಾಲಿ ಕುರ್ಚಿಗಳೇ ಯುವ ಜನೋತ್ಸವಕ್ಕೆ ಪ್ರೇಕ್ಷಕರಾಗಿರುವಂತೆ ಕಂಡುಬಂದವು. ಯುವ ಪ್ರತಿಭೆಗಳಲ್ಲಿ ನಿರಾಸೆ: ಪ್ರೇಕ್ಷಕರ ಕೊರತೆಯಿಂದ ಯುವಜನೋತ್ಸವಕ್ಕೆ ಆಗಮಿಸಿದ್ದ ಯುವ ಪ್ರತಿಭೆಗಳಲ್ಲಿ ಉತ್ಸಾಹವೇ ಇರಲಿಲ್ಲ.

ಜನರೆದುರು ಅದ್ಭುತ ಪ್ರದರ್ಶನ ನೀಡಿ ಶಿಳ್ಳೆ, ಚಪ್ಪಾಳೆ ಗಿಟ್ಟಿಸುವ ಅವರ ಕನಸು ಆಯೋಜಕರ ನಿರಾಸಕ್ತಿಯಿಂದ ಕಮರಿಹೋಗಿತ್ತು. ತೀರ್ಪುಗಾರರಿಂದ ಅಂಕಗಳನ್ನು ಪಡೆಯುವುದಕ್ಕಷ್ಟೇ ಸೀಮಿತವಾಗಿ ಯುವ ಪ್ರತಿಭೆಗಳು ಪ್ರದರ್ಶನ ನೀಡುತ್ತಿದ್ದರು.

ಕಲಾವಿದರಿಗೆ ಆಹ್ವಾನವಿಲ್ಲ: ಮಂಡ್ಯ ಜಿಲ್ಲೆ ಕಲಾವಿದರ ತವರೂರು. ಸರಿ ಸುಮಾರು ಎರಡು ಸಾವಿರ ಮಂದಿ ಕಲಾವಿದರು ಜಿಲ್ಲೆಯಲ್ಲಿದ್ದಾರೆ. ಆದರೂ, ಯುವಜನೋತ್ಸವಕ್ಕೆ ಆಗಮಿಸುವಂತೆ ಯಾವುದೇ ಕಲಾವಿದರಿಗೂ ಆಹ್ವಾನ ನೀಡಿಲ್ಲ.

ಶಾಲಾ-ಕಾಲೇಜು, ಯುವಕ-ಯುವತಿ ಸಂಘಗಳಿಗೂ ಕರಪತ್ರಗಳನ್ನು ಮುದ್ರಿಸಿ ಕಳುಹಿಸಿಲ್ಲ. ಕಲಾವಿದರಿಲ್ಲದೆ ಯುವಜನೋತ್ಸವವನ್ನು ತರಾತುರಿಯಲ್ಲಿ ಸಂಘಟಿಸಲಾಗಿದೆ. ಇದೊಂದು ದುಡ್ಡು ಮಾಡುವ ಕಾರ್ಯಕ್ರಮವಾಗಿದೆಯೇ ವಿನಃ ಕಲೆಯನ್ನು ಬೆಳೆಸುವ ಕಾರ್ಯಕ್ರಮವಾಗಿಲ್ಲ ಎನ್ನುವುದು ಹಲವು ಕಲಾವಿದರ ಆರೋಪವಾಗಿದೆ. ಅಲ್ಲದೆ, ಜನವರಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈಗ ನಡೆಯುತ್ತಿರುವ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ನವೆಂಬರ್‌ ತಿಂಗಳಲ್ಲಿ ಆಯೋಜಿಸಬೇಕಿತ್ತು.

ಯುವಜನ ಸೇವಾ ಕ್ರೀಡಾ ಇಲಾಖೆ ಅಧಿಕಾರಿ ಡಾ.ಬಿ.ವಿ.ನಂದೀಶ್‌ ಬೇರೆಡೆಗೆ ವರ್ಗಾವಣೆಯಾಗುವ ಸಾಧ್ಯತೆಗಳಿರುವುದನ್ನು ಮನಗಂಡು ಕಾರ್ಯಕ್ರಮ ನಡೆಸಿ ಮುಗಿಸುತ್ತಿದ್ದಾರೆ. ಒಂದೂವರೆ ತಿಂಗಳು ಮುಂಚಿತವಾಗಿಯೇ ಯುವಜನೋತ್ಸವ ಆಯೋಜಿಸಿ ಅವ್ಯವಸ್ಥೆಗೆ ಕಾರಣರಾಗಿದ್ದಾರೆ ಎಂದು ದೂರಿದ್ದಾರೆ.

ಇದು ಕೇವಲ ಈ ವರ್ಷದ ಯುವಜನೋತ್ಸವದ ಕತೆಯಲ್ಲ. ಪ್ರತಿ ವರ್ಷವೂ ಇದೇ ಮಾದರಿಯಲ್ಲೇ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಆದರೂ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಮಾತ್ರ ಈ ವಿಷಯದಲ್ಲಿ ಎಚ್ಚೆತ್ತುಕೊಂಡಿಲ್ಲ. 2.50 ಲಕ್ಷ ರೂ. ಅನುದಾನದಲ್ಲಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ಅವಕಾಶವಿದೆ. ಆದರೂ, ಇಲಾಖಾ ಅಧಿಕಾರಿ ಡಾ.ನಂದೀಶ್‌ಗೆ ಇಚ್ಛಾಶಕ್ತಿ, ಬದ್ಧತೆ ಪ್ರದರ್ಶಿಸದಿರುವುದು ಈ ಎಲ್ಲಾ ಅವ್ಯವಸ್ಥೆಗಳ ಮೂಲವಾಗಿದೆ .

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.