ಮಂಗಳೂರಿನಲ್ಲಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರ ಸ್ಥಾಪನೆ: ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್
Team Udayavani, Oct 17, 2019, 6:19 PM IST
ಮಂಗಳೂರು : ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರಗಳ ವಿವಾದ ಪರಿಹಾರಕ್ಕಾಗಿ ಸುಸಜ್ಜಿತವಾದ ಪರ್ಯಾಯ ವ್ಯಾಜ್ಯ ಪರಿಹಾರ (ಎಡಿಆರ್) ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಕೆನರಾ ಛೇಂಬರ್ ಆಫ್ ಕಾಮರ್ಸ್ಆ್ಯಂ ಡ್ ಇಂಡಸ್ಟ್ರಿ (ಕೆಸಿಸಿಐ) ಸರಕಾರಿ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದೆ ಎಂದು ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್ ತಿಳಿಸಿದರು.
ಕೆಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಗುರುವಾರದಂದು ನಗರದಲ್ಲಿ ಪ್ರಥಮ ಪತ್ರಿಕಾಗೋಷ್ಠಿ ನಡೆಸಿದ ಅವರು ತನ್ನ ಅಧಿಕಾರ ಅವಧಿಯಲ್ಲಿ ಕೈಗೊಳ್ಳಲು ಉದ್ದೇಶಿಸಿದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಸರಕಾರದ ಹೊಸ ನೀತಿಯು ವಾಣಿಜ್ಯ ವಿವಾದಗಳಿಗೆ ಸಂಬಂಧಿಸಿ ಪರ್ಯಾಯ ವ್ಯಾಜ್ಯ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲು ಉತ್ತೇಜನ ನೀಡುತ್ತದೆ. ಹಾಗಾಗಿ ಕೆಸಿಸಿಐ ಮಂಗಳೂರಿನಲ್ಲಿ ಎಡಿಆರ್ ಸ್ಥಾಪಿಸಲು ಉದ್ದೇಶಿಸಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕೆಸಿಸಿಐ ಗೌರವ ಕಾರ್ಯದರ್ಶಿ ನಿಸಾರ್ ಫಕೀರ್ ಮಹಮದ್ , ಉಪಾಧ್ಯಕ್ಷ ಶಶಿಧರ್ ಪೈ ಮಾರೂರು, ಕಾರ್ಯದರ್ಶಿ ದಿವಾಕರ್ ಪೈ, ಕೋಶಾಧಿಕಾರಿ ಎಂ. ಗಣೇಶ್ ಕಾಮತ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ