ಮಂಗಳೂರು: ಕೆಎಂಸಿ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಕೇಂದ್ರ ಉದ್ಘಾಟಿಸಿದ ಶಿಲ್ಪಾ ಶೆಟ್ಟಿ
ಪ್ರತಿ ಮಹಿಳೆಯರ ಜೀವನದಲ್ಲಿ ಗರ್ಭಾವಸ್ಥೆ ಒಂದು ಸುಂದರ ಪಯಣ: ಶಿಲ್ಪಾ ಶೆಟ್ಟಿ
Team Udayavani, Sep 26, 2019, 5:59 PM IST
ಮಂಗಳೂರು: ಪ್ರತಿ ಮಹಿಳೆಯರ ಜೀವನದಲ್ಲಿ ಗರ್ಭಾವಸ್ಥೆ ಒಂದು ಸುಂದರ ಪಯಣವಾಗಿರುತ್ತದೆ. ಆದರೆ ಇದೇ ಸಂದರ್ಭದಲ್ಲಿ ಅವರಿಗೆ ತಮ್ಮ ಜೀವನವನ್ನು ಸರಳವಾಗಿಸಬಹುದಾದ ಸಮರ್ಥ ವೈದ್ಯರ ಗಮನ, ಅತ್ಯಾಧುನಿಕ ಮೂಲ ಸೌಕರ್ಯ ಮತ್ತು ನವೀನ ತಂತ್ರಜ್ಞಾನದ ಅಗತ್ಯವೂ ಇರುತ್ತದೆ. ಈ ನಿಟ್ಟಿನಲ್ಲಿ ಇಂದು ಉದ್ಘಾಟನೆಗೊಂಡ ಕೆಎಂಸಿಯ ಈ ನೂತನ ಕೇಂದ್ರವು ಗಮನಾರ್ಹ ಪರಿಣಾಮವನ್ನು ಉಂಟು ಮಾಡಲಿದೆ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕುಂದ್ರಾ ಹೇಳಿದರು.
ಅವರು ಗುರುವಾರದಂದು ನಗರದ ಟಿ.ಎಂ.ಪೈ.ಸಭಾಂಗಣದಲ್ಲಿ ಕೆಎಂಸಿ ಆಸ್ಪತ್ರೆಯ ಪ್ರತ್ಯೇಕ ಮಹಿಳಾ ಮತ್ತು ಮಕ್ಕಳ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಕೆಎಂಸಿಯ ಈ ನೂತನ ಕೇಂದ್ರವು ಜಿಲ್ಲೆಯ ಮಹಿಳೆಯರಿಗೆ ಆರೋಗ್ಯ ಶುಶ್ರೂಷೆ ಸುಲಭವಾಗಿ ಲಭ್ಯವಾಗುವಂತೆ ಮಾಡಲಿದೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ನ ಉಪಕುಲಪತಿ ಡಾ. ಎಚ್.ಎಸ್.ಬಲ್ಲಾಳ್, ವೈದ್ಯಕೀಯ ಸೇವೆಗಳ ಪ್ರಾದೇಶಿಕ ಮುಖ್ಯಸ್ಥರಾದ ಡಾ.ಆನಂದ್ ವೇಣುಗೋಪಾಲ್, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಪ್ರಾದೇಶಿಕ ಮುಖ್ಯ ಕಾರ್ಯಚರಣೆ ಅಧಿಕಾರಿ ಸಗೀರ್ ಸಿದ್ದಿಕಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ