ಆರ್‌ಟಿಒ ಕಚೇರಿಯಲ್ಲಿ ಈಗ ಕೇವಲ 17 ಸಿಬಂದಿ !

ನಿವೃತ್ತರ ಸಂಖ್ಯೆ ಹೆಚ್ಚುತ್ತಿದೆ; ಹೊಸ ನೇಮಕಾತಿ ನಡೆಯುತ್ತಿಲ್ಲ

Team Udayavani, May 19, 2019, 9:56 AM IST

19-May-1

ಮಹಾನಗರ: ಮಂಜೂರಾದ ಹುದ್ದೆಯ ಪ್ರಕಾರ ಈ ಕಚೇರಿಯಲ್ಲಿ 92 ಮಂದಿ ಸಿಬಂದಿ ಇರಬೇಕಿತ್ತು. ಆದರೆ ಪ್ರಸ್ತುತ ಇರುವುದು ಕೇವಲ 17 ಮಂದಿ !

ಇದು ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ದುಸ್ಥಿತಿ. ಇಲ್ಲಿ ಹನ್ನೊಂದು ವರ್ಷಗಳಿಂದ ನಿವೃತ್ತರ ಸಂಖ್ಯೆ ಹೆಚ್ಚಾಗುತ್ತಿದೆಯೇ ವಿನಾ ಹೊಸಬರ ನೇಮಕಾತಿ ನಡೆಯುತ್ತಿಲ್ಲ. ಪರಿಣಾಮ, ಹಾಲಿ ಕೆಲಸದಲ್ಲಿರುವವರ ಹೆಗಲ ಮೇಲೆ ಹೆಚ್ಚುವರಿ ಹೊಣೆಗಾರಿಕೆ ಬೀಳುತ್ತಿದೆ.

ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೊಸ ವಾಹನಗಳ ನೋಂದಣಿ, ಚಾಲನಾ ಪರವಾನಿಗೆ ಪರೀಕ್ಷೆ, ಚಾಲನ ಪರವಾನಿಗೆ ಪತ್ರ ನೀಡುವಿಕೆ, ಲರ್ನ್ ಆಫ್‌ ಲೈಸೆನ್ಸ್‌, ಆಕ್ಸಿಡೆಂಟ್ ವೆಹಿಕಲ್ ಇನ್‌ಸ್ಪೆಕ್ಷನ್‌, ವಾಹನ ಫಿಟ್ನೆಸ್‌ ಟೆಸ್ಟಿಂಗ್‌ ಸಹಿತ ವಿವಿಧ ರೀತಿಯ ಕರ್ತವ್ಯಗಳನ್ನು ಆರ್‌ಟಿಒ ಕಚೇರಿ ಸಿಬಂದಿ ನಿರ್ವಹಿಸಬೇಕು. ಈ ಎಲ್ಲ ಕೆಲಸಗಳನ್ನು ಪೂರೈಸಲು ಮಂಗಳೂರು ಆರ್‌ಟಿಒ ಕಚೇರಿಗೆ 92 ಹುದ್ದೆಗಳು ಮಂಜೂರಾಗಿವೆ. ಆದರೆ, ಈ ಪೈಕಿ ಇನ್‌ಸ್ಪೆಕ್ಟರ್‌ಗಳು, ಕಚೇರಿ ಸಿಬಂದಿ ಸೇರಿ 17 ಹುದ್ದೆ ಮಾತ್ರ ಭರ್ತಿಯಿರುವುದು.

2008ರಿಂದ ನೇಮಕಾತಿಯಾಗಿಲ್ಲ
ವಿಪರ್ಯಾಸವೆಂದರೆ 2008 ರಿಂದೀಚೆಗೆ ಯಾವ ನೇಮಕಾತಿ ಯೂ ನಡೆದಿಲ್ಲ. ಪ್ರತಿ ವರ್ಷ ಕನಿಷ್ಠ ಐವರು ನಿವೃತ್ತರಾಗುತ್ತಿದ್ದಾರೆ. ಆ ಜಾಗಕ್ಕೆ ಹೊಸ ಬರ ನೇಮಕ ನಡೆಯದೇ, ಇರುವ ಸಂಖ್ಯೆಯಲ್ಲಿಯೂ ಕುಸಿತ ಆಗುತ್ತಿದೆ. ಕಳೆದೊಂದು ವರ್ಷದ ಹಿಂದೆ 36 ಮಂದಿ ಸಿಬಂದಿ ಇದ್ದರೆ, 17ಕ್ಕಿಳಿದಿದೆ.

ಅನಿವಾರ್ಯದ ಸ್ಥಿತಿ
ಸಿಬಂದಿ ಕೊರತೆಯಿಂದಾಗಿ ಅವಧಿ ಮೀರಿದರೂ ಕೆಲಸ ಮಾಡಬೇಕಾದ ಅನಿವಾರ್ಯದ ಸ್ಥಿತಿ ಈಗಿರುವ ಸಿಬಂದಿಯದ್ದು. ಬೆಳಗ್ಗೆ 10ರಿಂದ ಸಂಜೆ 5.30ರ ವರೆಗೆ ಕೆಲಸ ನಿರ್ವಹಿಸಬೇಕೆಂಬುದು ಸರಕಾರಿ ನಿಯಮ.

ಆದರೆ, ಇಲ್ಲಿ ರಾತ್ರಿ ಎಂಟಾದರೂ ಕೆಲಸ ಮುಗಿಯುವುದಿಲ್ಲ ಎನ್ನುತ್ತಾರೆ ಕಚೇರಿ ಸಿಬಂದಿ. ಅಲ್ಲದೆ, ಮುಖ್ಯವಾದ ಕೆಲಸಗಳನ್ನೇ ಮಾಡಲು ಸಿಬಂದಿ ಇಲ್ಲದಿರುವುದರಿಂದ ನಿಯಮಗಳ ಪರಿಣಾಮಕಾರಿ ಅನುಷ್ಠಾನವೂ ಸಾಧ್ಯವಾಗದೆ ಅಧಿಕಾರಿಗಳು ಕೈ ಚೆಲ್ಲಿದ್ದಾರೆ.

ವಾಹನಗಳ ಸಂಬಂಧಿಸಿದಂತೆ ಹಲವಾರು ಕೆಲಸಗಳನ್ನು ಇರುವ 17 ಮಂದಿ ಸಿಬಂದಿ ನಿರ್ವಹಿಸಬೇಕಾಗುತ್ತದೆ. ಇದರೊಂದಿಗೆ ಪೊಲ್ಯೂಶನ್‌ ಡ್ರೈವ್‌, ರಸ್ತೆ ಸುರಕ್ಷತಾ ಸಪ್ತಾಹ, ಚುನಾವಣೆ ಸಂಬಂಧಿ ಕೆಲಸಗಳು ಸಹಿತ ಇತರ ಕೆಲಸಗಳನ್ನೂ ಇದೇ ಸಿಬಂದಿ ನಿರ್ವಹಿಸಬೇಕಾಗುತ್ತದೆ. ಇದರಿಂದ ಸಾರ್ವಜನಿಕರು ತಿಂಗಳಗಟ್ಟಲೆ ಕಾಯಬೇಕಾಗಿದೆ ಎನ್ನುತ್ತಾರೆ ವಾಹನ ಚಾಲಕ ಶಿವಪ್ರಸಾದ್‌.

ಶಾಶ್ವತ ಆರ್‌ಟಿಒ ಇಲ್ಲ
ನಗರದ ಪ್ರಾದೇಶಿಕ ಸಾರಿಗೆ ಕಚೇರಿಗೆ ಶಾಶ್ವತ ಸಾರಿಗೆ ಅಧಿಕಾರಿ ನೇಮಕವಾಗದೇ 2019ರ ಆಗಸ್ಟ್‌ಗೆ ನಾಲ್ಕು ವರ್ಷ. 2015ರ ಬಳಿಕ ಶಾಶ್ವತ ನೇಮಕಾತಿಯೇ ನಡೆದಿಲ್ಲ. ಪ್ರಭಾರ ಆರ್‌ಟಿಒ ನಿಯೋಜನೆಗೊಂಡು ಕನಿಷ್ಠ ಸಮಯದಲ್ಲೇ ವರ್ಗಾವಣೆ ನಡೆಯುತ್ತಿದೆ. 2015ರಿಂದ ಇಲ್ಲಿವರೆಗೆ ಹತ್ತು ಬಾರಿ ಪ್ರಭಾರ ಆರ್‌ಟಿಒಗಳ ನಿಯೋಜನೆಯಾಗಿದ್ದು, ಕೆಲವರು ಎರಡೆರಡು ಬಾರಿ ಪ್ರಭಾರ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಜಾನ್‌ ಮಿಸ್ಕಿತ್‌ ಅವರು ಪ್ರಭಾರ ಆರ್‌ಟಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಿಬಂದಿ ಅಗತ್ಯ

ನಗರದ ಆರ್‌ಟಿಒ ಕಚೇರಿಯಲ್ಲಿ ಸಿಬಂದಿ ಕೊರತೆ ಇದೆ. ಈ ಬಗ್ಗೆ ಪ್ರತಿ ಬಾರಿ ಮೀಟಿಂಗ್‌ನಲ್ಲಿಯೂ ಪ್ರಸ್ತಾವಿಸಲಾಗುತ್ತಿದೆ. ನಿಯಮಗಳನ್ನು ಪರಿಣಾಮಕಾರಿಯಾಗಿ ಫಾಲೋ ಅಪ್‌ ಮಾಡಲಾಗುತ್ತಿದೆ. ಆದರೆ, ಸಿಬಂದಿ ನೇಮಕಾತಿ ನಡೆದು ಸಿಬಂದಿ ಸಂಖ್ಯೆ ಹೆಚ್ಚಾದಲ್ಲಿ ಅವುಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ.

ಜಾನ್‌ ಮಿಸ್ಕಿತ್‌,

ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿ
ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.