ಮೈತ್ರಿ ಸರ್ಕಾರದಲ್ಲಿ ಏರಿಕೆಯಾದ ನೀರಿನ ಬಿಲ್, ತೊಂದರೆ ಅನುಭವಿಸುತ್ತಿರುವ ಗ್ರಾಹಕರು


Team Udayavani, Oct 20, 2019, 5:45 PM IST

20-October-18

ಮಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂಗಳೂರು ಮಹಾ ನಗರ ಪಾಲಿಕೆ ನೀರಿನ ದರ ಏರಿಕೆ ಮಾಡಿದ್ದು, ಈಗ ಗ್ರಾಹಕರು ಬವಣೆ ಪಡುವಂತಾಗಿದೆ. 2019ರ ಏ.1ರಿಂದ ನೀರಿನ ದರ ಏರಿಕೆಯಾಗಿದ್ದು ಕಳೆದ 6 ತಿಂಗಳಿಂದ ನಗರ ಪಾಲಿಕೆ ಸಮರ್ಪಕವಾಗಿ ನೀರಿನ ಬಿಲ್ ವಿತರಣೆ ಮಾಡಿಲ್ಲ. ಈಗ ಏಕಾಏಕಿ ಏರಿಕೆಯಾದ ಮೊತ್ತ ಸೇರಿಸಿ ಬಿಲ್ ನೀಡುತ್ತಿದ್ದು, ಗ್ರಾಹಕರು ಸಾವಿರಾರು ಬಿಲ್ ಪಾವತಿಸುವ ಸ್ಥಿತಿ ನಿರ್ಮಾಣವಾಗಿದೆ.

ನೀರಿನ ಬಿಲ್ ಏರಿಕೆ ಸಂಬಂಧಿಸಿ 2018ರ ಅ.31ರಂದು ನಡೆದ ಮನಪಾ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಈ ಸಂದರ್ಭ ಗೃಹ ಬಳಕೆಯ ಸಂಪರ್ಕ ದರಗಳನ್ನು ಹೊರತು ಪಡಿಸಿ , ಗೃಹೇತರ ಹಾಗೂ ವಾಣಿಜ್ಯ ಬಳಕೆಯ ಸಂಪರ್ಕ ದರಗಳನ್ನು ಮಾತ್ರ ಪರಿಷ್ಕಕರಿಸಲು ನಿರ್ಣಯಿಸಲಾಗಿತ್ತು. 2019ರ ಮಾರ್ಚ್ ಬಳಿಕ ಪಾಲಿಕೆಯಲ್ಲಿ ಚುನಾಯಿತ ಆಡಳಿತ ಅಂತ್ಯಗೊಂಡು ಆಡಳಿತಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದರು.

2019ರ ಜೂ.21ರಂದು ಆಡಳಿತಾಧಿಕಾರಿ ಅವರು ಗೃಹ ಬಳಕೆಯ ನೀರಿನ ದರವನ್ನೂ ಏರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಗೃಹ ಬಳಕೆಯ ಸಂಪರ್ಕಕ್ಕೆ ಮಾಸಿಕ ಕನಿಷ್ಠ ದರ 65 ರೂ. ನಿಗದಿಯಾಗಿತ್ತು. ಪ್ರತಿ ತಿಂಗಳು 24 ಸಾವಿರ ಲೀಟರ್ ನೀರು ಬಳಸಲು ಅವಕಾಶವಿತ್ತು. ಅದಕ್ಕಿಂತ ಹೆಚ್ಚುವರಿಯಾಗಿ ಉಪಯೋಗಿಸಿದರೆ ಮಾತ್ರ ಹೆಚ್ಚುವರಿ ಬಳಕೆಯ ಬಿಲ್ ನೀಡಲಾಗುತ್ತಿತ್ತು. ಈಗ ಆಡಳಿತಾಧಿಕಾರಿ ಮಾಸಿಕ ಕನಿಷ್ಠ ದರವನ್ನು 56 ರೂ. ಮಾಡಿದ್ದಾರೆ. ಆದರೆ ಪ್ರತಿ ತಿಂಗಳು 8 ಸಾವಿರ ಲೀಟರ್ ನೀರು ಮಾತ್ರ ಉಪಯೋಗಿಸಬಹುದಾಗಿದೆ. ಮಾಸಿಕ 25 ಸಾವಿರ ಲೀಟರ್‌ಗಿಂತ ಅಧಿಕ ನೀರು ಉಪಯೋಗಿಸಿದರೆ ಪ್ರತಿ ಕಿ.ಲೀಗ್ 13 ರೂ. ಅಧಿಕ ಬಿಲ್ ನೀಡಬೇಕಾಗಿದೆ.
ಗೃಹ ಬಳಕೆಯ ನೀರಿನ ದರ ಏರಿಕೆ ಮಾಡಿದ ಬಗ್ಗೆ ನಗರ ಪಾಲಿಕೆ ಗ್ರಾಹಕರಿಗೆ ಸಮರ್ಪಕ ಮಾಹಿತಿ ನೀಡಿಲ್ಲ. ನೀರಿನ ಬಿಲ್ ವಿತರಣೆಯ ಸಿಬ್ಬಂದಿಗಳನ್ನು ಇತರ ಕೆಲಸಗಳಿಗೆ ನಿಯೋಜಿಸಿದ ಕಾರಣ ಏಪ್ರಿಲ್ ತಿಂಗಳಿಂದ ಗ್ರಾಹಕರಿಗೆ ಸರಿಯಾಗಿ ನೀರಿನ ಬಿಲ್ ಕೂಡಾ ವಿತರಣೆ ಮಾಡಿಲ್ಲ.ಈಗ ಹಿಂದಿನ ಪರಿಷ್ಕೃತ ದರ ಸಹಿತ ಹಿಂದಿನ ಎಲ್ಲ ಬಿಲ್‌ಗಳನ್ನು ಸೇರಿಸಿ ಬಿಲ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ತೊಂದರೆಗೆ ಒಳಗಾಗಿದ್ದು ಜನಪ್ರತಿನಿಧಿಗಳ ಬಳಿ ತಮ್ಮ ಗೋಳು ತೋಡಿಕೊಳ್ಳುತ್ತಿದ್ದಾರೆ.

* ಮೈತ್ರಿ ಸರ್ಕಾರದ ಅಡಳಿತದಲ್ಲಿ ಆಡಳಿತಾಧಿಕಾರಿ ಪಾಲಿಕೆಯ ನೀರಿನ ಬಿಲ್ ಏರಿಕೆ ಮಾಡಿದ್ದಾರೆ. ಆಗ ಉಸ್ತುವಾರಿ ಸಚಿವರಾಗಿದ್ದ ಯು.ಟಿ.ಖಾದರ್ ಅವರು ಕೂಡಾ ಈ ಬಗ್ಗೆ ಗಮನ ಹರಿಸಿಲ್ಲ. 4-5 ತಿಂಗಳಿಂದ ಬಿಲ್ ವಿತರಣೆ ಮಾಡದೆ ಈಗ ಏಕಾಏಕಿ ಪರಿಷ್ಕೃತ ದರ ಸೇರಿಸಿ ಬಿಲ್ ನೀಡುತ್ತಿರುವ ಕಾರಣ ಗ್ರಾಹಕರಿಗೆ ತೊಂದರೆಯಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾಧಿಕಾರಿ ಕೈಗೊಂಡ ನಿರ್ಣಯಕ್ಕೆ ಈಗ ತೊಂದರೆ ಅನುಭವಿಸುವಂತಾಗಿದೆ. ಗ್ರಾಹಕರಿಗೆ ಈಗ ನೀಡುತ್ತಿರುವ ಬಿಲ್ ಸರಿಯಾಗಿದೆಯಾ ಎನ್ನುವ ಬಗ್ಗೆ ಅಧಿಕಾರಿಗಳು ಸರಿಯಾಗಿ ಪರಿಶೀಲನೆ ನಡೆಸಬೇಕು. ಬಿಲ್ ಪಾವತಿಗೆ ಕಾಲಾವಕಾಶ ಒದಗಿಸುವುದು ಸೇರಿದಂತೆ ಗ್ರಾಹಕರಿಗೆ ಯಾವುದೇ ತೊಂದರೆ ನೀಡದಂತೆ ಮನಪಾ ಆಡಳಿತಕ್ಕೆ ಸೂಚಿಸಲಾಗಿದೆ.
ವೇದವ್ಯಾಸ ಕಾಮತ್,
ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.