ಮಹಿಳೆಯರ ರಕ್ಷಣೆಗಾಗಿ ‘ಅಬ್ಬಕ್ಕ ಪಡೆ’ ರೆಡಿ

50 ಮಂದಿ ಮಹಿಳಾ ಪೊಲೀಸರ ತಂಡ

Team Udayavani, May 1, 2019, 10:57 AM IST

1-MAY-5

50 ಮಂದಿ ಮಹಿಳಾ ಪೊಲೀಸರನ್ನೊಳಗೊಂಡ 'ರಾಣಿ ಅಬ್ಬಕ್ಕ ಪಡೆ' ನಗರದಲ್ಲಿ ಕಾರ್ಯಾರಂಭಿಸಿದೆ.

ಮಹಾನಗರ: ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿ ಯಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಮೀಸಲಾದ 50 ಮಂದಿ ಮಹಿಳಾ ಪೊಲೀಸರನ್ನೊಳಗೊಂಡ ‘ರಾಣಿ ಅಬ್ಬಕ್ಕ ಪಡೆ’ ಮಂಗಳವಾರದಿಂದ ನಗರದಲ್ಲಿ ಕಾರ್ಯಾರಂಭಿಸಿದೆ.

ಸಿಟಿಸೆಂಟರ್‌ ಮಾಲ್ನ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನೂತನ ‘ಅಬ್ಬಕ್ಕ ಪಡೆ’ಯ ಉದ್ಘಾಟನೆ ನೆರವೇರಿತು. ಪೊಲೀಸ್‌ ಆಯುಕ್ತ ಡಾ| ಸಂದೀಪ್‌ ಪಾಟೀಲ್ ಅವರು ಚಾಲನೆ ನೀಡಿದರು.

ಡಿಜಿ, ಐಜಿಪಿ ಅವರ ಸೂಚನೆ ಮೇರೆಗೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ವಿಶೇಷ ಮಹಿಳಾ ಪಡೆ ರಚಿಸಲಾಗಿದೆ. ನಗರದ ಮಹಿಳಾ ಪಡೆಗೆ 16ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ಧ ದಿಟ್ಟ ಹೋರಾಟ ಮಾಡಿದ ‘ರಾಣಿ ಅಬ್ಬಕ’್ಕ ಹೆಸರನ್ನಿಡಲಾಗಿದೆ. ಈ ಪಡೆಯನ್ನು ಒಬ್ಬರು ಎಸ್‌ಐ ದರ್ಜೆ ಮಹಿಳಾ ಅಧಿಕಾರಿ ನಿರ್ವಹಣೆ ಮಾಡಲಿದ್ದಾರೆ. ನಗರದಲ್ಲಿರುವ ಜನನಿ ಬಿಡ ಪ್ರದೇಶಗಳಾದ ಮಾಲ್ಗಳು, ಕಾಲೇಜು, ಪಾರ್ಕ್‌, ಬೀಚ್, ರೈಲುನಿಲ್ದಾಣ, ಸೆಂಟ್ರಲ್ಮಾರ್ಕೆಟ್ ಸಹಿತ ಕೆಲವು ಪ್ರದೇಶಗಳಿಗೆ ಈ ಸಿಬಂದಿಯನ್ನು ನಿಯೋಜಿಸಲಾಗುವುದು ಎಂದರು.

ಮಂಗಳೂರು ಕಮಿಷನರೇಟ್ ವ್ಯಾಪ್ತಿ ಯಲ್ಲಿ ಇಂತಹ 50 ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಂದೊಂದು ಪಾಯಿಂಟ್‌ಗಳಲ್ಲಿ 3ರಿಂದ 5 ಮಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕಿರುಕುಳ, ಚುಡಾಯಿ ಸುವಿಕೆ, ಪಿಕ್‌ ಪಾಕೆಟ್, ಸರಗಳ್ಳತನ ಮತ್ತಿತರ ಅಪರಾಧ ಕೃತ್ಯಗಳನ್ನು ಮಟ್ಟ ಹಾಕುವ ಕಾರ್ಯದಲ್ಲಿ ಈ ಪಡೆ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯ ವರ್ತನೆ, ಚುಡಾವಣೆ, ಮಹಿಳಾ ದೌರ್ಜನ್ಯ, ನೈತಿಕ ಪೊಲೀಸ್‌ಗಿರಿ ಸಹಿತ ಹಲವು ಪ್ರಕರಣಗಳನ್ನು ಹತ್ತಿಕ್ಕಲು ಈ ಪಡೆ ಕಾರ್ಯನಿರ್ವಹಿಸಲಿದೆ. ಯಾವುದೇ ಅಪರಾಧ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಆ ಪ್ರಕರಣ ದಾಖಲಾಗಲಿದೆ ಎಂದರು.

ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪಪೊಲೀಸ್‌ ಆಯುಕ್ತ ಹನುಮಂತರಾಯ, ನಗರ ಸಂಚಾರ ಮತ್ತು ಅಪರಾಧ ವಿಭಾಗ ಉಪಪೊಲೀಸ್‌ ಆಯುಕ್ತ ಲಕ್ಷ್ಮೀಗಣೇಶ್‌ ಮೊದಲಾದವರು ಉಪಸ್ಥಿತರಿದ್ದರು.

5 ಮಹಿಳಾ ಪೊಲೀಸರ 10 ತಂಡ
50 ಮಂದಿ ಮಹಿಳಾ ಪೊಲೀಸರ ನ್ನೊಳಗೊಂಡ ‘ರಾಣಿ ಅಬ್ಬಕ್ಕ ಪಡೆ’ಗೆ ಇನ್ಸ್‌ ಪೆಕ್ಟರ್‌ ಶ್ರೀಕಲಾ ಅವರು ಮುಖ್ಯಸ್ಥರು. ತಲಾ 5 ಮಂದಿ ಯ (ಓರ್ವ ಹೆಡ್‌ಕಾನ್‌ಸ್ಟೇಬಲ್ ಮತ್ತು ನಾಲ್ವರು ಕಾನ್‌ಸ್ಟೇಬಲ್) 10 ತಂಡ ಗಳ ನ್ನಾಗಿ ವಿಂಗಡಿಸಲಾಗಿದೆ. ಪ್ರತೀ ತಂಡವು ಆಯ್ದ ಮಾಲ್ಗಳು,ಬಸ್‌ ನಿಲ್ದಾಣಗಳು, ಬೀಚ್, ಕಾಲೇಜುಗಳಿಗೆ ಹಾಗೂ ಹೆಚ್ಚು ಜನ ಸಂದಣಿಇರುವ ಪ್ರದೇಶದಲ್ಲಿ ಗಸ್ತು ಕಾರ್ಯಾಚರಣೆ ನಡೆಸಲಿದ್ದಾರೆ. ಈ ಪಡೆಗೆ ಕಪ್ಪು ಟೀ ಶರ್ಟ್‌ ಮತ್ತು ಡೋಂಗ್ರಿ ಬಣ್ಣದ ಪ್ಯಾಂಟ್ ಇರುವ ಸಮವಸ್ತ್ರ ಒದಗಿಸಲಾಗಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.