ಸಸಿಕಾಂತ್ ವಿರುದ್ಧ ಭ್ರಷ್ಟಚಾರ ಆರೋಪ
Team Udayavani, Sep 8, 2019, 5:20 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಗೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ಧ ಇದೀಗ ಗಂಭೀರ ಆರೋಪ ಒಂದು ಕೇಳಿಬಂದಿದೆ.
ಸೆಂಥಿಲ್ ಅವರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮರಳುಗಾರಿಕೆ ಪರವಾನಗಿ ನೀಡುವಿಕೆಯಲ್ಲಿ ಮತ್ತು ಇದಕ್ಕಾಗಿ ಜಿಲ್ಲಾಡಳಿತದ ನಿರ್ವಹಣೆಯಲ್ಲಿ ತಯಾರಿಸಲಾಗಿದ್ದ ಮರಳು ಆ್ಯಪ್ ಮೂಲಕ ಭಾರೀ ಭ್ರಷ್ಟಾಚಾರವಾಗಿದೆ ಎಂದು ದಕ್ಷಿಣ ಕನ್ನಡ ಲಾರೀ ಮಾಲಕರ ಸಂಘ ಗಂಭೀರವಾದ ಆರೋಪ ಮಾಡಿದೆ. ಮತ್ತು ಈ ಕುರಿತಾಗಿ ಸಮಗ್ರ ತನಿಖೆಯಾಗಬೇಕೆಂದು ಲಾರಿ ಮಾಲಕರ ಸಂಘದ ಪದಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ.ಲಾರಿ ಮಾಲಕರ ಸಂಘದ ಅಧ್ಯಕ್ಷ ಎನ್. ಜೈರಾಜ್ ಶೆಟ್ಟಿ, ಗೌರವಾಧ್ಯಕ್ಷರಾದ ಪಿ.ಗೋಪಾಲಕೃಷ್ಣ ಭಟ್, ಹಲ್ಯಾರ್ ಇಕ್ಬಾಲ್, ಪ್ರಧಾನ ಕಾರ್ಯದರ್ಶಿ ಸುನೀಲ್ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು