ಪಚ್ಚನಾಡಿ,ಮಂದಾರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
Team Udayavani, Sep 11, 2019, 7:46 PM IST
ಮಂಗಳೂರು: ಇತ್ತೀಚಿಗೆ ತ್ಯಾಜ್ಯ ನೆಲಭರ್ತಿ ಪ್ರದೇಶದಲ್ಲಿ ಕುಸಿತ ಉಂಟಾದ ಪಚ್ಚನಾಡಿ ಮತ್ತು ಮಂದಾರ ಪ್ರದೇಶಗಳಿಗೆ ಬುಧವಾರ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭೇಟಿ ನೀಡಿದರು.
ಮೊದಲು ಪಚ್ಚನಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಳಿಕ ಮಂದಾರಕ್ಕೆ ಭೇಟಿ ನೀಡಿದರು. ನಂತರ ಮಂದಾರ ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ನೀಡಿರುವ ಕುಲಶೇಖರ ಹೌಸಿಂಗ್ ಬೋಡ್೯ಗೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು.
ಸಂತ್ರಸ್ತರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಇಲ್ಲಿನ ಸಮಸ್ಯೆ ಬಗ್ಗೆ ಎರಡು ರೀತಿಯ ಯೋಜನೆ ಮಾಡಬೇಕು. ಪಚ್ಚನಾಡಿಯಲ್ಲಿ ಹಾಲಿ ಇರುವ ತ್ಯಾಜ್ಯ ಗಳನ್ನು ವಿಲೇವಾರಿ ಮಾಡುವ ಬಗ್ಗೆ ವಿಸ್ತ್ರತ ಯೋಜನೆ ರೂಪಿಸಬೇಕು. ಮಂದಾರ ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಅಗತ್ಯ ಪರಿಹಾರ ಒದಗಿಸುವ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಬಳಿಕ ಈ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಜಂಟಿ ಆಯುಕ್ತೆ ಗಾಯತ್ರಿ ನಾಯಕ್, ಪರಿಸರ ಅಭಿಯಂತರ ಮಧು ಉಪಸ್ಥಿತರಿದ್ದರು.
ತಜ್ಞರ ಸಮಿತಿ ರಚನೆ: ಈ ಮಧ್ಯೆ, ಭೂಪಾತವಾಗಿರುವ ಪಚ್ಚನಾಡಿ ನೆಲಭರ್ತಿ ಸ್ಥಳವನ್ನು ಅಧ್ಯಯನ ಮಾಡಲು ರಾಜ್ಯ ಸರಕಾರ ನಾಲ್ವರು ತಜ್ಞರ ಸಮಿತಿ ರಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ