ಲೇಡಿಹಿಲ್ ವೃತ್ತ ಕೆಡವಿ ಮರು ನಿರ್ಮಾಣ

ಸುಗಮ ಸಂಚಾರಕ್ಕಾಗಿ ನಗರ ವೃತ್ತಗಳ ವಿನ್ಯಾಸ ಮಾರ್ಪಾಡು

Team Udayavani, Aug 2, 2019, 10:42 AM IST

2-Agust-9

ಲೇಡಿಹಿಲ್ ವೃತ್ತವನ್ನು ತೆರವುಗೊಳಿಸಿರುವುದು

ವಿಶೇಷ ವರದಿ
ಮಹಾನಗರ:
ನಗರದಲ್ಲಿ ದಿನದಿಂದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಸ್ತುತ ಪ್ರಮುಖ ಪ್ರದೇಶಗಳಲ್ಲಿ ವೃತ್ತಗಳು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗು ತ್ತಿರುವುದರಿಂದ ಅವುಗಳನ್ನು ತೆರವುಗೊಳಿ ಸಬೇಕು ಎಂದು ಮಹಾನಗರ ಪಾಲಿಕೆಗೆ ಈಗಾಗಲೇ ಒತ್ತಡ ಬಂದಿದೆ. ಹಾಗಾಗಿ ಇದೀಗ ಲೇಡಿಹಿಲ್ ಸಮೀಪದ ವೃತ್ತವನ್ನು ಈಗಿರುವ ಜಾಗದಿಂದ 2-3 ಅಡಿ ಮುಂದಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ.

ಲೇಡಿಹಿಲ್ ಶಾಲೆಯ ಪಕ್ಕದಲ್ಲಿರುವ ವೃತ್ತದಿಂದ ಮಣ್ಣಗುಡ್ಡೆ, ಉರ್ವ ಮಾರುಕಟ್ಟೆ, ಚಿಲಿಂಬಿ, ಲಾಲ್ಬಾಗ್‌ಗೆ ರಸ್ತೆ ಸಂಪರ್ಕ ಕಲ್ಪಿಸುತ್ತದೆ.

ಇದೇ ಕಾರಣಕ್ಕೆ ಈ ವೃತ್ತದಿಂದಾಗಿ ದಿನಂಪ್ರತಿ ಸಾವಿರಾರು ವಾಹನಗಳು ಅತ್ತಿಂದಿತ್ತ ಸಂಚರಿಸುತ್ತದೆ. ಹೀಗಿರುವಾಗ ಇಲ್ಲಿರುವ ವೃತ್ತದಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂದು ಈಗಾಗಲೇ ಸಾರ್ವಜನಿಕರಿಂದ ಆಕ್ಷೇಪ ಕೇಳಿಬಂದಿತ್ತು. ಕೊನೆಗೂ ಪಾಲಿಕೆ ಈ ವೃತ್ತವನ್ನು ಮರುನಿರ್ಮಾಣ ಮಾಡಲು ತೀರ್ಮಾನಿಸಿದೆ.

ಲೇಡಿಹಿಲ್ ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ ಏಕಮುಖ ಸಂಚಾರ ಮಾರ್ಗವಿದ್ದಾಗ ಈ ವೃತ್ತ ನಿರ್ಮಾಣ ಮಾಡಲಾಗಿತ್ತು. ಆದರೆ ಇದೀಗ ಫುಟ್ಪಾತ್‌ ಕಾಮಗಾರಿ ಸೇರಿದಂತೆ ರಸ್ತೆಯು ದ್ವಿಪಥವಾಗಿದೆ. ಆದರೂ ವೃತ್ತವನ್ನು ಮಾತ್ರ ಸ್ಥಳಾಂತರಿಸಲಿಲ್ಲ. ಸಾರ್ವಜನಿಕರ ಆಕ್ಷೇಪದಿಂದಾಗಿ ಇದೀಗ ಪಾಲಿಕೆಯು ಫುಟ್ಪಾತ್‌ ಅಳತೆ ತೆಗೆದು, ಈಗಿದ್ದ ವೃತ್ತದ ಸುಮಾರು 2-3 ಅಡಿ ಮುಂದೆ ಅಂದರೆ, ರಸ್ತೆಯ ಮಧ್ಯಭಾಗದಲ್ಲಿ ವೃತ್ತ ನಿರ್ಮಾಣ ಮಾಡಲು ಹೊರಟಿದೆ. ಇನ್ನು ಕೆಲವು ದಿನಗಳಲ್ಲಿ ಹೊಸ ವೃತ್ತದ ಮಾಕಿಂರ್ಗ್‌ ಮಾಡಲಿದ್ದು, ಬಳಿಕ ಪ್ರಾಯೋಗಿಕವಾಗಿ ವಾಹನ ಸಂಚಾರ ವ್ಯವಸ್ಥೆಯನ್ನು ನೋಡಲಾಗುತ್ತದೆ. ಬಳಿಕವಷ್ಟೇ ನೂತನ ವೃತ್ತ ನಿರ್ಮಾಣ ಕೆಲಸ ಪ್ರಾರಂಭವಾಗಲಿದೆ. ಈ ವೃತ್ತ ಯಾವ ರೀತಿ ನಿರ್ಮಾಣವಾಗಲಿದೆ ಎಂಬುದರ ಬಗ್ಗೆ ಸದ್ಯದಲ್ಲಿಯೇ ಪಾಲಿಕೆ ಮಟ್ಟದಲ್ಲಿ ತೀರ್ಮಾನವಾಗಲಿದೆ.

ಇದೇ ಮೊದಲಲ್ಲ
ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂಬ ನಿಟ್ಟಿನಲ್ಲಿ ನಗರದಲ್ಲಿ ವೃತ್ತಗಳನ್ನು ತೆರವುಗೊಳಿಸಿ ಮತ್ತು ವೃತ್ತಗಳನ್ನು ಕಿರಿದು ಮಾಡಿದ್ದು ಇದೇ ಮೊದಲಲ್ಲ. ನಂತೂರು ವೃತ್ತದ ಸಂಚಾರ ದಟ್ಟಣೆ ಕಡಿಮೆಗೊಳಿಸುವ ಇರಾದೆಯಿಂದ ವೃತ್ತದ ಗಾತ್ರವನ್ನು ಈ ಹಿಂದಿಗಿಂತ ಶೇ.50ರಷ್ಟು ಕಡಿಮೆ ಮಾಡಲಾಗಿದೆ.

ಸುಮಾರು 11 ಮೀಟರ್‌ ನಷ್ಟು ಸುತ್ತಳತೆಯಿದ್ದ ನಂತೂರು ವೃತ್ತವನ್ನು 5.5 ಮೀಟರ್‌ಗೆ ಕಿರಿದು ಮಾಡಲಾಗಿದೆ. ಈ ಹಿಂದೆ ಇದ್ದಂತಹ ಬಂಟ್ಸ್‌ಹಾಸ್ಟೆಲ್, ಸೈಂಟ್ ಆ್ಯಗ್ನೆಸ್‌ ಕಾಲೇಜು ವೃತ್ತ, ಬೆಂದೂರು, ಕಂಕನಾಡಿ, ಕದ್ರಿ ಶಿವಬಾಗ್‌ ವೃತ್ತಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಇದರಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ.

ಕೆಲವು ದಿನಗಳಲ್ಲೇ ಮಾರ್ಕಿಂಗ್‌ ಕೆಲಸ ವಾಹನ ಸಂಚಾರಕ್ಕೆ ಅನುಕೂಲ ಮಾಡುವ ದೃಷ್ಟಿಯಿಂದಾಗಿ ಲೇಡಿಹಿಲ್ ವೃತ್ತವನ್ನು ಸದ್ಯ ಕೆಡವಲಾಗಿದೆ. ಅಲ್ಲೇ ಸುಮಾರು ಮೂರು ಅಡಿ ಮುಂದೆ ರಸ್ತೆ ಮಧ್ಯ ಭಾಗದಲ್ಲಿ ನೂತನ ವೃತ್ತ ನಿರ್ಮಾಣವಾಗಲಿದೆ. ಇನ್ನು ಕೆಲವು ದಿನಗಳಲ್ಲಿ ನೂತನ ವೃತ್ತದ ಮಾರ್ಕಿಂಗ್‌ ಕಾರ್ಯ ನಡೆಯಲಿದೆ.
ಲಿಂಗೇಗೌಡ,

ಪಾಲಿಕೆ ಕಾರ್ಯಪಾಲಕ ಅಭಿಯಂತ‌ರ

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.