ಜಿಲ್ಲೆಯಲ್ಲಿ 424 ಸೀಟುಗಳಿಗೆ ಕೇವಲ 118 ಅರ್ಜಿ !

ಆರ್‌ಟಿಇ ತಿದ್ದುಪಡಿ

Team Udayavani, May 19, 2019, 10:05 AM IST

Udayavani Kannada Newspaper

ಮಹಾನಗರ: ಸರಕಾರವು ಆರ್‌ಟಿಇನಲ್ಲಿ ತಿದ್ದುಪಡಿ ತಂದು ಅನುದಾನಿತ ಶಾಲೆಗಳಿಗೆ ಆದ್ಯತೆ ನೀಡಿದ ಪರಿಣಾಮ ದ.ಕ. ಜಿಲ್ಲೆಗೆ ಮೀಸಲಾದ 424 ಆರ್‌ಟಿಇ ಮೀಸಲು ಸೀಟುಗಳಿಗೆ 118 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ.

ಆರ್ಥಿಕವಾಗಿ ಹಿಂದುಳಿದ ಕುಟುಂ ಬದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಆದಾದ ಬಳಿಕ ರಾಜ್ಯದ ವಿವಿಧ ಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದರು. ಆದರೆ ಈ ಬಾರಿ ಆರ್‌ಟಿಇ ಸೀಟುಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಮಾತ್ರ ಆರ್‌ಟಿಇ ಸೀಟುಗಳನ್ನು ಮೀಸಲಿಡಲಾಯಿತು. ಇದರ ಪರಿಣಾಮ ಆರ್‌ ಟಿಇ ಸೀಟು ಗಳಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಕಡಿಮೆಯಾಗಿದೆ.

96 ಶಾಲೆಗಳಲ್ಲಿ ಮಾತ್ರ ಅವಕಾಶ
ಈ ಬಾರಿ ಮೊದಲಿಗೆ ಮಂಗಳೂರು ಉತ್ತರ ವಲಯದಲ್ಲಿ 102, ಮಂಗಳೂರು ದಕ್ಷಿಣದಲ್ಲಿ 138, ಮೂಡುಬಿದಿರೆಯಲ್ಲಿ 16, ಬಂಟ್ವಾಳದಲ್ಲಿ 77, ಬೆಳ್ತಂಗಡಿಯಲ್ಲಿ 24, ಪುತ್ತೂರಿನಲ್ಲಿ 41, ಸುಳ್ಯ ವಲಯದಲ್ಲಿ 26 ಸೀಟುಗಳನ್ನು ಮೀಸಲಿಡಲಾಗಿತ್ತು. ಆರ್‌ಟಿಇ ಪರಿಷ್ಕೃತ ನಿಯಮಾವಳಿ ಪ್ರಕಾರ ದ.ಕ. ಜಿಲ್ಲೆಯ ಅನುದಾನಿತ 86 ಮತ್ತು ಅನುದಾನ ರಹಿತ 10 ಸಹಿತ 96 ಶಾಲೆಗಳಲ್ಲಿ ಕೇವಲ 424 ಸೀಟುಗಳನ್ನು ಮಾತ್ರ ಮೀಸಲಿಡಲಾಗಿದೆ. ಮಂಗಳೂರು ಉತ್ತರದ 3 ಮತ್ತು ದಕ್ಷಿಣದ 7 ಖಾಸಗಿ ಶಾಲೆಗಳನ್ನು ಹೊರತುಪಡಿಸಿದರೆ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಶೈಕ್ಷಣಿಕ ವಲಯಗಳ ಖಾಸಗಿ ಶಾಲೆಗಳಲ್ಲಿ ಈ ಬಾರಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವೇ ನೀಡಿಲ್ಲ.

2018-19ನೇ ಸಾಲಿನಲ್ಲಿ ಅನುದಾನಿತ ಮತ್ತು ಖಾಸಗಿಯನ್ನೊಳಗೊಂಡು 2,727 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ಅವಕಾಶ ಒದಗಿಸಲಾಗಿತ್ತು. ಆದರೆ ಪ್ರಸಕ್ತ ಸಾಲಿನ (2019-20)ಮಿತಿಯನ್ನು 424ಕ್ಕೆ ಸೀಮಿತಗೊಳಿಸಲಾಗಿದೆ.

ಸುಳ್ಯದಲ್ಲಿ ಶೂನ್ಯ ಅರ್ಜಿ
ಪ್ರಸಕ್ತ ಸಾಲಿನಲ್ಲಿ ದ.ಕ. ಜಿಲ್ಲೆಯ 7 ಶಿಕ್ಷಣ ವಲಯಗಳ ಪೈಕಿ ಸುಳ್ಯದಲ್ಲಿ ಒಂದೇ ಒಂದು ಅರ್ಜಿ ಸಲ್ಲಿಕೆಯಾಗಿಲ್ಲ ಎಂಬುದು ಗಮನಾರ್ಹ. ಉಳಿದಂತೆ ಬಂಟ್ವಾಳ ವಲಯದಲ್ಲಿ 20, ಬೆಳ್ತಂಗಡಿಯಲ್ಲಿ 2, ಮಂಗಳೂರು ಉತ್ತರದಲ್ಲಿ 62, ಮಂಗಳೂರು ದಕ್ಷಿಣದಲ್ಲಿ 28, ಮೂಡುಬಿದಿರೆಯಲ್ಲಿ 3, ಪುತ್ತೂರು ವಲಯದಲ್ಲಿ 3 ಅರ್ಜಿಗಳು ಸಲ್ಲಿಕೆಯಾಗಿವೆ. ಆ ಮೂಲಕ ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅತಿ ಹೆಚ್ಚು ಆರ್‌ಟಿಇ ಅರ್ಜಿಗಳು ಸಲ್ಲಿಕೆಯಾಗಿವೆ.

ಅರ್ಜಿ ಸಂಖ್ಯೆ ಕುಸಿತ

ಆರ್‌ಟಿಇ ಕಾಯ್ದೆಯಲ್ಲಿ ತಿದ್ದುಪಡಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಅರ್ಜಿ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ. ಆರ್‌ಟಿಇ ಅರ್ಜಿ ಸಲ್ಲಿಕೆಗೆ ಎಪ್ರಿಲ್ 20 ಕೊನೆಯ ದಿನವಾಗಿತ್ತು. ನಿರೀಕ್ಷಿತ ಅರ್ಜಿಗಳು ಬಾರದ ಕಾರಣ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿತ್ತು. ಅದರಂತೆ ಎಪ್ರಿಲ್ 25ರವರೆಗೆ 118 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆೆ.
ವಿಶ್ವನಾಥ್‌,

ನೋಡಲ್ ಅಧಿಕಾರಿ, ಆರ್‌ಟಿಇ ಕಾಯ್ದೆ-ದ.ಕ.ಜಿಲ್ಲೆ
ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.