ಸ್ಮಾರ್ಟ್‌ ಕಾಮಗಾರಿ ಸಿಟಿಯ ಅಲ್ಲಲ್ಲೇ ಬಾಕಿ

ಯೋಜನೆ ಘೋಷಣೆಯಾಗಿ ವರ್ಷಗಳೇ ಸಂದವು

Team Udayavani, May 18, 2019, 10:50 AM IST

18-May-5

ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡ ಕ್ಲಾಕ್‌ ಟವರ್‌ ಕಾಮಗಾರಿ.

ಮಹಾನಗರ: ಕೇಂದ್ರ, ರಾಜ್ಯ ಸರಕಾರದ ಸಹಭಾಗಿತ್ವದ ‘ಸ್ಮಾರ್ಟ್‌ ಸಿಟಿ ಮಂಗಳೂರು’ ಯೋಜನೆ ಘೋಷಣೆಯಾಗಿ ವರ್ಷಗಳೇ ಸಂದರೂ ಕಾಮಗಾರಿ ಮಾತ್ರ ಇನ್ನೂ ಆಮೆ ನಡಿಗೆಯಲ್ಲಿದೆ. ಕೆಲವು ಕಾಮಗಾರಿ ಆರಂಭವಾಗಿದ್ದರೂ ಅದು ಅಲ್ಲಲ್ಲೇ ಬಾಕಿಯಾಗಿದೆ!

ಒಳಚರಂಡಿ ಯೋಜನೆ, ಬಸ್‌ ಶೆಲ್ಟರ್‌ ಕಾಮಗಾರಿಯನ್ನು ಹೊರತು ಪಡಿಸಿ, ಸದ್ಯ ಯಾವುದೇ ಕಾಮಗಾ ರಿಯು ಸ್ಮಾರ್ಟ್‌ ಸಿಟಿ ಯೋಜನೆಯಡಿ ನಡೆಯುತ್ತಿಲ್ಲ.

ಈಗಾಗಲೇ ಆರಂಭವಾಗಿರುವ ಒಂದೆರಡು ಕಾಮಗಾರಿ ಅರ್ಧದಲ್ಲಿ ಬಾಕಿಯಾಗಿದ್ದರೆ, ಇನ್ನುಳಿದ ಬಹುತೇಕ ಕಾಮಗಾರಿಗಳು ಟೆಂಡರ್‌, ಒಪ್ಪಿಗೆಯ ಹಂತದಲ್ಲಿಯೇ ನಿಂತುಬಿಟ್ಟಿವೆ. ಹೀಗಾಗಿ, ಭಾರೀ ಹೇಳಿಕೆ, ಪ್ರಚಾರದಲ್ಲಿ ಘೋಷಣೆಯಾದ ಸ್ಮಾರ್ಟ್‌ಸಿಟಿ ಯೋಜನೆ ಎಲ್ಲಿದೆ? ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

ಸದ್ಯ ಬಸ್‌ ಶೆಲ್ಟರ್‌ ಕೆಲಸ ಅಲ್ಲಲ್ಲಿ ನಡೆಯುತ್ತಿದ್ದರೂ ಅದಕ್ಕೆ ಕೆಲವು ಕಡೆಗಳಲ್ಲಿ ಆಕ್ಷೇಪ ಮತ್ತೆ ಮುಂದುವರಿದಿದೆ. ಹೊಸ ಬಸ್‌ನಿಲ್ದಾಣ ಮಾಡುವ ಜಾಗ, ಅದರ ವಿನ್ಯಾಸದ ಬಗ್ಗೆ ಇನ್ನೂ ಚರ್ಚೆ, ಪ್ರಶ್ನೆ ಮುಗಿದಿಲ್ಲ. ಅದೇ ರೀತಿ, ಕ್ಲಾಕ್‌ಟವರ್‌ನಿಂದ ಎ.ಬಿ. ಶೆಟ್ಟಿ ವೃತ್ತದವರೆಗೆ ಸ್ಮಾರ್ಟ್‌ರೋಡ್‌ ನಿರ್ಮಾಣಕ್ಕೆ ಒಮ್ಮೆ ಸ್ವಲ್ಪ ಕಾಮಗಾರಿ ಆರಂಭಿಸಿದರೂ ಅನಂತರ ‘ಡಿಸೈನ್‌ನಲ್ಲಿ ವ್ಯತ್ಯಾಸ’ ಎಂಬ ನೆಪದಿಂದ ಅದು ಕೂಡ ಸ್ಥಗಿತವಾಗಿದೆ.

ನೂತನ ಕ್ಲಾಕ್‌ ಟವರ್‌ ಕಾಮಗಾರಿ ನಡೆಯುತ್ತಿದ್ದರೂ ಅದು ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸ್ಮಾರ್ಟ್‌ ರೋಡ್‌ ಯೋಜನೆಯ ವಿನ್ಯಾಸ ಬದಲಾಗುವ ಕಾರಣದಿಂದ ಕ್ಲಾಕ್‌ ಟವರ್‌ ಕಾಮಗಾರಿ ತಡವಾಗಿದೆ ಎಂಬುದು ಸದ್ಯದ ಮಾಹಿತಿ.

ಇನ್ನು, ಎ.ಬಿ. ಶೆಟ್ಟಿ ವೃತ್ತ-ಹ್ಯಾಮಿಲ್ಟರ್‌ ಸರ್ಕಲ್-ರಾವ್‌ ಆ್ಯಂಡ್‌ ರಾವ್‌ ಸರ್ಕಲ್-ಕ್ಲಾಕ್‌ ಟವರ್‌ ನಡುವೆ ಸ್ಮಾರ್ಟ್‌ ರೋಡ್‌ ರಸ್ತೆ ಯೋಜನೆಯು ಕೂಡ ಕಾಗದ ಹಂತದಲ್ಲಿಯೇ ಇದೆ.

ಕಮಾಂಡ್‌ ಕಂಟ್ರೋಲ್ ಸೆಂಟರ್‌, ಸರಕಾರಿ ಕಚೇರಿಗಳಿಗೆ ಸೋಲಾರ್‌ ಅಳವಡಿಕೆ, ಸರಕಾರಿ ಶಾಲೆಗಳಿಗೆ ಸ್ಮಾರ್ಟ್‌ ಭಾಗ್ಯ, ಮಲ್ಟಿ ಲೆವೆಲ್ ಕಾರ್‌ ಪಾರ್ಕಿಂಗ್‌, ಪಡೀಲ್ನಲ್ಲಿ ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಮಹತ್ವದ ಯೋಜನೆಗಳು ಇನ್ನೂ ಕೂಡ ಆರಂಭವಾಗಿಲ್ಲ. ಜತೆಗೆ, ಸಚಿವ ಯು.ಟಿ. ಖಾದರ್‌ ಅವರ ಸೂಚನೆ ಮೇರೆಗೆ ಉದ್ದೇಶಿಸಲಾಗಿರುವ ಜಪ್ಪಿನಮೊಗರು – ಮೋರ್ಗನ್‌ಗೇಟ್ ಹೊಸ ರಸ್ತೆ, ಮಂಗಳಾ ಸ್ಟೇಡಿಯಂ ಅಭಿವೃದ್ಧಿ ಸಹಿತ ಹಲವು ಯೋಜನೆಗಳು ಸದ್ಯ ಮಾತುಕತೆಯಲ್ಲಿಯೇ ಇದೆ.

ಆದರೆ ಕಾಮಗಾರಿ ಯಾವುದೇ ಕಾರಣಕ್ಕೂ ನಿಧಾನವಾಗಿಲ್ಲ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳು ವಾದಿಸುತ್ತಿದ್ದಾರೆ. ಈಗಾಗಲೇ ಸ್ಮಾರ್ಟ್‌ಸಿಟಿ ಸಮಿತಿ ಸಭೆಯಲ್ಲಿ ಒಪ್ಪಿಗೆ ದೊರೆತು ಮಂಜೂರಾತಿ ಪಡೆದ ಒಳಚರಂಡಿ, ಬಸ್‌ ಶೆಲ್ಟರ್‌ ಕೆಲಸಗಳು ಈಗಾಗಲೇ ನಡೆಯುತ್ತಿವೆ. ಆದರೆ ಈ ಎರಡೂ ಯೋಜನೆ ಅನುಷ್ಠಾನ ಹಂತದಲ್ಲಿ ಸಾರ್ವಜನಿಕರಿಂದ ಬರುವ ಎಲ್ಲ ರೀತಿಯ ಸಲಹೆ- ಸೂಚನೆಗಳನ್ನು ಪರಿಶೀಲಿಸಿ ಅದಕ್ಕೆ ಪೂರಕವಾಗಿಯೇ ಕೆಲಸ ಮಾಡಲಾಗುತ್ತಿದೆ. ಇತರ ಯೋಜನೆಗಳ ರೀತಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯ ಕಾಮಗಾರಿ ನಡೆಸುವಂತಿಲ್ಲ; ಯಾಕೆಂದರೆ, ಈ ಯೋಜನೆ ಶಾಶ್ವತ ಯೋಜನೆಯಾಗಿ ಮಂಗಳೂರಿನ ಹೆಗ್ಗುರುತಾಗಿ ನಿಲ್ಲಬೇಕಿದೆ. ಅದಕ್ಕಾಗಿ ಎಲ್ಲ ರೀತಿಯ ಅಭಿಪ್ರಾಯ, ತಜ್ಞರ ಸಲಹೆಗಳನ್ನು ಪಡೆದು ಕೆಲಸ ಮಾಡುತ್ತಿರುವಾಗ ಸ್ವಲ್ಪ ತಡವಾಗಿರಬಹುದು ಎನ್ನುವುದು ಸ್ಮಾರ್ಟ್‌ ಸಿಟಿ ಕಂಪೆನಿಯ ವಾದ.

ಒಳಚರಂಡಿ ಪೈಪ್‌ಲೈನ್‌; ಆಕ್ಷೇಪ
ಒಳಚರಂಡಿ ಕಾಮಗಾರಿ ಸದ್ಯ ಹೊಗೆಬಜಾರ್‌, ಬಂದರ್‌ ವ್ಯಾಪ್ತಿಯಲ್ಲಿ ನಡೆಯುತ್ತಿದ್ದರೂ ಇದಕ್ಕೆ ಕೆಲವರಿಂದ ಆಕ್ಷೇಪವೂ ವ್ಯಕ್ತವಾಗಿದೆ. ಮುಖ್ಯ ಲೈನ್‌ ಹಾಕಿದ್ದರೂ ಹಳೆಯ ಲೈನ್‌ನ ಲಿಂಕ್‌ ಇನ್ನೂ ಕೂಡ ಹೊಸ ಲೈನ್‌ಗೆ ಯಾಕೆ ನೀಡಿಲ್ಲ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಈಗಾಗಲೇ ಈ ವ್ಯಾಪ್ತಿಯಲ್ಲಿ 12 ಇಂಚು ವ್ಯಾಸದ ಒಳಚರಂಡಿ ಪೈಪ್‌ಲೈನ್‌ ಇದ್ದಾಗಲೇ, ಸ್ಮಾರ್ಟ್‌ಸಿಟಿ ಯೋಜನೆಯಡಿ ಕೇವಲ 8 ಇಂಚು ವ್ಯಾಸದ ಒಳಚರಂಡಿ ಪೈಪ್‌ಲೈನ್‌ ಅಳವಡಿಸಿದ್ದಕ್ಕೆ ಸ್ಥಳೀಯರು ಆಕ್ಷೇಪವೆತ್ತಿದ್ದಾರೆ. ಆದರೆ, ಆ ಭಾಗದ ಸಾಮರ್ಥ್ಯವನ್ನು ಪರಿಗಣಿಸಿ, ನಿಯಮದ ಪ್ರಕಾರವೇ ಇಂತಹ ಪೈಪ್‌ಲೈನ್‌ ಅಳವಡಿಕೆ ನಡೆಸಲಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಮಳೆಗಾಲದ ಬಳಿಕ ಮಹತ್ವದ ಕಾಮಗಾರಿ
ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಳ್ಳುವ ಎಲ್ಲ ಕೆಲಸಗಳು ನಗರದ ಚೆಲುವಿಗೆ ಮಹತ್ವದ ಅಂಶವಾಗಿರುವುದರಿಂದ ಕಾಮಗಾರಿ ಆದ ಬಳಿಕ ಎಲ್ಲಿಯೂ ಲೋಪವಾಗದಂತೆ ಎಚ್ಚರಿಕೆ ವಹಿಸಲು ಪ್ರತೀ ಹಂತದಲ್ಲಿಯು ಸಾರ್ವಜನಿಕರ ಅಭಿಪ್ರಾಯಗಳಿಗೆ ಒತ್ತು ನೀಡಲಾಗಿದೆ. ಆಕ್ಷೇಪ, ಸಮಸ್ಯೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿರುವುದರಿಂದ ಸ್ವಲ್ಪ ನಿಧಾನವಾಗಿದೆ. ಸ್ಮಾರ್ಟ್‌ಸಿಟಿ ಸಮಿತಿಯು ಎಲ್ಲ ಕಾಮಗಾರಿಗಳನ್ನು ವಿಶೇಷ ನೆಲೆಯಲ್ಲಿ ತೆಗೆದುಕೊಂಡಿದೆ. ಮಳೆಗಾಲದ ಬಳಿಕ ಮಹತ್ವದ ಕಾಮಗಾರಿಗಳು ಆರಂಭವಾಗಲಿವೆ.
ನಾರಾಯಣಪ್ಪ,
ಸ್ಮಾರ್ಟ್‌ಸಿಟಿ ಆಡಳಿತ ನಿರ್ದೇಶಕರು, ಮಂಗಳೂರು

ವಿಶೇಷ ವರದಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.