ಗೋದಾಮಿನಲ್ಲಿ ಅಂಬೇಡ್ಕರ್‌ ಹಾಸ್ಟೆಲ್ ವಿದ್ಯಾರ್ಥಿಗಳ ವಾಸ!

ವಾರ್ಡನ್‌-ತಾಲೂಕು ಅಧಿಕಾರಿ ವಿರುದ್ಧ ಆರೋಪ

Team Udayavani, Apr 27, 2019, 12:19 PM IST

27-April-13

ಮಾನ್ವಿ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿಗಳ ವಸತಿ ನಿಲಯ ಪಟ್ಟಣದ ಹೊರವಲಯದ ಗೋದಾಮಿನಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲದಂತಾಗಿದೆ. ವಾರ್ಡನ್‌ ಸೇರಿದಂತೆ ಯಾವುದೇ ಅಧಿಕಾರಿಗಳು ಈ ಕಡೆ ಬಾರದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಬಸ್‌ ನಿಲ್ದಾಣದಿಂದ ಗೋದಾಮು ಸುಮಾರು 2 ಕಿಮೀ ದೂರದಲ್ಲಿದೆ. ಇಲ್ಲಿ 100 ವಿದ್ಯಾರ್ಥಿಗಳಿದ್ದಾರೆ. ಅಲ್ಲಿಂದ ಪಟ್ಟಣದ ಪದವಿ ಕಾಲೇಜುಗಳಿಗೆ ಬರಬೇಕಾದರೆ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇನ್ನೂ ಸರ್ಕಾರಿ ಪದವಿ ಕಾಲೇಜು ಈ ವಸತಿ ನಿಲಯದಿಂದ 5 ಕಿಮೀ ದೂರದಲ್ಲಿದೆ. ನಿತ್ಯ ಕಾಲೇಜು ತಲುಪಲು ವಿದ್ಯಾರ್ಥಿಗಳು ವಾಹನ ಕಾಯುವುದರಕ್ಕೆ ಸಮಯ ವ್ಯರ್ಥ ಮಾಡುತ್ತಿದ್ದಾರೆ.

ಇನ್ನೂ ಗೋದಾಮಿನಲ್ಲಿ ಮೂಲಸೌಲಭ್ಯವೇ ಇಲ್ಲವಾಗಿದೆ. ಗಾಳಿ, ಬೆಳಕು, ಸ್ನಾನದ ಗೃಹಗಳು, ಶೌಚಾಲಯಗಳು ಸರಿಯಾದ ನಿರ್ವಹಣೆ ಇಲ್ಲದೆ ದುರ್ವಾಸನೆ ಬೀರುತ್ತಿವೆ. ಸ್ನಾನದ ಗೃಹ, ಶೌಚಾಲಯ, ಕೋಣೆಗಳನ್ನು ಸ್ವಚ್ಛ ಮಾಡಿಸುವುದೇ ಇಲ್ಲ. ವಿದ್ಯಾರ್ಥಿಗಳು ಕಸ ಗುಡಿಸಿಕೊಳ್ಳಬೇಕು. ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ವಾರ್ಡನ್‌ ಇತ್ತ ಕಡೆ ಬರುವುದೇ ಇಲ್ಲ. ತಾಲೂಕು ಕಚೇರಿಗೆ ಹೋದರೆ ಮೇಲಧಿಕಾರಿಗಳೇ ಇಲ್ಲ. ಮೊಬೈಲ್ ಯಾವಾಗಲೂ ಸ್ವಿಚ್ಡ್ ಆಫ್‌, ನಾಟ್ರಿಚೇಬಲ್ ಆಗಿರುತ್ತದೆ. ಒಟ್ಟಿನಲ್ಲಿ ಅನಿವಾರ್ಯ ಕಾರಣದಿಂದಾಗಿ ವಸತಿ ನಿಲಯದಲ್ಲಿ ಇರುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಹಾಸ್ಟೆಲ್ಗೆ ಬರುವ ಅನುದಾನ ಮಾತ್ರ ಎತ್ತುವಳಿ ಆಗುತ್ತಲೆ ಇದೆ. ಕಿರಾಣಿ, ತರಕಾರಿ, ಶುದ್ಧ ಕುಡಿಯುವ ನೀರು, ಕಟ್ಟಿಗೆ ಸೇರಿದಂತೆ ವಿವಿಧ ಕಾರಣಗಳಿಗೆ ಹಣ ಪಾವತಿಯಾಗುತ್ತಿದೆ. ಆದರೆ ಆಹಾರ ಪದಾರ್ಥಗಳ ಸರಬರಾಜು ಮಾಡಲು ಯಾರಿಗೆ ಟೆಂಡರ್‌ ನೀಡಲಾಗಿದೆ ಎನ್ನುವ ಮಾಹಿತಿ ಇಲ್ಲ. ಇನ್ನಾವುದೇ ಅಂಗಡಿಯಿಂದ ಪದಾರ್ಥಗಳನ್ನು ತರಲಾಗುತ್ತಿದೆ. ಬೋಗಸ್‌ ದಾಖಲೆ ಸೃಷ್ಟಿಸಿ ಹಣ ಎತ್ತುವಳಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿದೆ.

ಸಮಾಜ ಕಲ್ಯಾಣ ಇಲಾಖೆಯ ಪದವಿ ಕಾಲೇಜು ವಿದ್ಯಾರ್ಥಿಗಳ ವಸತಿ ನಿಲಯದ ಅವ್ಯವಸ್ಥೆಗೆ ವಿದ್ಯಾರ್ಥಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಅವ್ಯವಸ್ಥೆ ಬಗ್ಗೆ ಮಾಹಿತಿ ಇದ್ದರೂ, ಅಲ್ಲದೆ ಅನೇಕರು ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ್‌ಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನಾದರೂ ಮೇಲಧಿಕಾರಿಗಳು ಈ ಕಡೆ ಗಮನ ಹರಿಸಿ ವಿದ್ಯಾರ್ಥಿಗಳ ಪರದಾಟ ತಪ್ಪಿಸಬೇಕಿದೆ.

ವಸತಿ ನಿಲಯದ ಅವ್ಯವಸ್ಥೆ ಬೇಸರ ತರಿಸಿದೆ. ವಾರ್ಡನ್‌ ವಿದ್ಯಾರ್ಥಿಗಳ ಸಮಸ್ಯೆ ಕೇಳುವುದಿಲ್ಲ. ಸಮಸ್ಯೆ ಬಗೆಹರಿಸಬೇಕಾದ ಮೇಲಧಿಕಾರಿಗಳೇ ಸಿಗುವುದಿಲ್ಲ. ಇಲ್ಲಿ ಅಡುಗೆದಾರರದ್ದೆ ದರ್ಬಾರ್‌. ಸ್ನಾನದ ಗೃಹಗಳು, ಶೌಚಾಲಯಗಳು ದುರ್ವಾಸನೆ ಬೀರುತ್ತಿದ್ದು, ಶೌಚಕ್ಕೆ ಬಯಲಿಗೆ ಹೋಗುತ್ತಿದ್ದೇವೆ. ಈ ಎಲ್ಲ ಸಮಸ್ಯೆಗಳ ಕುರಿತು ಅನೇಕ ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೂ ಹಿರಿಯ ಅಧಿಕಾರಿಗಳು ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ.
•ನೊಂದ ವಿದ್ಯಾರ್ಥಿಗಳ ಆರೋಪ

ಡಾ.ಬಿ.ಆರ್‌.ಅಂಬೇಡ್ಕರ್‌ ಪದವಿ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ನೂತನ ಕಟ್ಟಡ ಸಿದ್ಧವಾಗಿದೆ. ಮುಂದಿನ ಸೆಮಿಸ್ಟರ್‌ನಿಂದ ವಿದ್ಯಾರ್ಥಿಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು. ವಾರ್ಡನ್‌ಗೆ ಮೂರ್‍ನಾಲ್ಕು ಹಾಸ್ಟೆಲ್ ಜವಾಬ್ದಾರಿ ನೀಡಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿರಬಹುದು. ತಾಲೂಕಾಧಿಕಾರಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸುತ್ತೇನೆ.
•ಪ್ರಶಾಂತ,
ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ, ರಾಯಚೂರು.

ರವಿ ಶರ್ಮಾ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.