ಕೈಗೆ ಸಿಗದ ಅಧಿಕಾರಿಗಳು; ಗ್ರಾಮಸ್ಥರ ಅಲೆದಾಟ

ನೆಟ್ ಕೆಫೆ ಗಳಲ್ಲಿ ಗ್ರಾಪಂ ಕೆಲಸ; ಗ್ರಾಮಸ್ಥರಿಂದ ಹಣ ವಸೂಲಿ • ತಾಲೂಕು ಕೇಂದ್ರಗಳಲ್ಲಿ ಅಧಿಕಾರಿಗಳಿಗಾಗಿ ಹುಡುಕಾಟ

Team Udayavani, May 10, 2019, 11:16 AM IST

10-May-8

ಮಾನ್ವಿ: ತಾಲೂಕು ಪಂಚಾಯಿತಿ ಕಾರ್ಯಾಲಯ.

ಮಾನ್ವಿ: ತಾಲೂಕಿನಾದ್ಯಂತ 38 ಗ್ರಾಮ ಪಂಚಾಯಿತಿಗಳಿದ್ದು, ಪಿಡಿಒ ಸೇರಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ಕೈಗೆ ಸಿಗುತ್ತಿಲ್ಲ. ಹೀಗಾಗಿ ಗ್ರಾಮಸ್ಥರು ಅಧಿಕಾರಿಗಳನ್ನು ಹುಡುಕಿಕೊಂಡು ತಾಲೂಕು ಕೇಂದ್ರ ಮಾನ್ವಿ ಪಟ್ಟಣದಲ್ಲಿ ಬೀದಿ ಬೀದಿ ಅಲೆದಾಡುವಂತಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಒಬ್ಬ ಪಿಡಿಒ, ಕಾರ್ಯದರ್ಶಿ, ಗ್ರಾಪಂ ಅಭಿಯಂತರ (ಇಂಜಿನಿಯರ್‌), ಕರ ವಸೂಲಿಗಾರರು, ಕಂಪ್ಯೂಟರ್‌ ಆಪರೇಟರ್‌, ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಾಟರ್‌ಮ್ಯಾನ್‌ಗಳು ಇರುತ್ತಾರೆ. ಆದರೆ ಇವರಲ್ಲಿ ಯಾರೊಬ್ಬರೂ ಗ್ರಾಪಂ ಕಾರ್ಯಾಲಯಕ್ಕೆ ಬರುವುದಿಲ್ಲ. ಇನ್ನು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಇಲಾಖೆಯಿಂದ ನೀಡಿದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಒಮ್ಮೊಮ್ಮೆ ನಾಟ್ರಿಚೇಬಲ್, ಸ್ವಿಚ್ಚಾಫ್‌ ಇರುತ್ತವೆ. ಬೇರೆ ದಾರಿ ಇಲ್ಲದೆ ಗ್ರಾಮೀಣ ಜನರು ಅಧಿಕಾರಿಗಳನ್ನು ಹುಡುಕಿಕೊಂಡು ತಾಲೂಕು ಪಂಚಾಯಿತಿ ಕಚೇರಿಗೆ ಬಂದು ಕಾಯುತ್ತಾರೆ. ಇಲ್ಲವೇ ಅವರು ಇರಬಹುದಾದ ಸ್ಥಳಗಳ ಮಾಹಿತಿ ಪಡೆದು ಹುಡುಕುತ್ತ ಅಲೆಯುತ್ತಾರೆ.

ನಿಯಮ ಉಲ್ಲಂಘನೆ: ಗ್ರಾಮ ಪಂಚಾಯಿತಿಯಲ್ಲಿ ನಿಯಮಗಳಿಗೆ ಬೆಲೆಯೇ ಇಲ್ಲ. ಬೆಳಗ್ಗೆ 10ರಿಂದ ಮಧ್ಯಾಹ್ನ 4:30ರವರೆಗೆ ಅಧಿಕಾರಿಗಳು ಕಚೇರಿಯಲ್ಲಿರಬೇಕು. ಇಲ್ಲವೇ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಬೇಕು. ತಿಂಗಳಿಗೊಮ್ಮೆ ಅಧ್ಯಕ್ಷರ ನೇತೃತ್ವದಲ್ಲಿ ಸದಸ್ಯರ ಸಭೆ ಕರೆಯಬೇಕು. ಗ್ರಾಪಂಗೆ ಸಂಬಂಧಿಸಿದಂತೆ ಬ್ಯಾಂಕ್‌ ಖಾತೆಗಳ ವ್ಯವಹಾರದ ದಾಖಲೆಗಳನ್ನು ನಿರ್ವಹಿಸಬೇಕು. ಚೆಕ್‌ ರಿಜಿಸ್ಟರ್‌ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಶ್ರಯ ಮನೆ ಹಂಚಿಕೆಗೆ ಗ್ರಾಮಸಭೆ ನಡೆಸಬೇಕು. ಆದರೆ ಅಧಿಕಾರಿಗಳು ಇಂತಹ ಯಾವುದೇ ಸಭೆ ಮಾಡುತ್ತಿಲ್ಲ. ಅಧಿಕಾರಿಗಳು ಕಚೇರಿಯಲ್ಲಿ ಸಿಗುವುದೇ ಅಪರೂಪವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಪಿಡಿಒಗಳ ಕೊರತೆ: ತಾಲೂಕಿನ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಹುದ್ದೆ ಖಾಲಿ ಇವೆ. 38 ಗ್ರಾಮ ಪಂಚಾಯಿತಿಗಳ ಪೈಕಿ ಕೇವಲ 18ರಿಂದ 20ಜನ ಪಿಡಿಒಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಬ್ಬ ಪಿಡಿಒಗೆ ಎರೆಡೆರಡು ಗ್ರಾಮ ಪಂಚಾಯಿತಿಗಳ ಜವಾಬ್ದಾರಿ ನೀಡಲಾಗಿದೆ. ಕೆಲ ಗ್ರಾಪಂಗಳಿಗೆ ಅಲ್ಲಿನ ಕಾರ್ಯದರ್ಶಿಗಳೇ ಪಿಡಿಒಗಳಾಗಿದ್ದಾರೆ. ಇನ್ನು ಕೆಲವೆಡೆ ಅನಧಿಕೃತವಾಗಿ ಕರ ವಸೂಲಿಗಾರರನ್ನು ಹಾಗೂ ಕಂಪ್ಯೂಟರ್‌ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇವರು ಆಡಿದ್ದೇ ಆಟ ಎನ್ನುವಂತಾಗಿದೆ. ಕಂಪ್ಯೂಟರ್‌ ಆಪರೇಟರ್‌ಗಳಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಹಣ ವಸೂಲಿ: ಕಚೇರಿಗೆ ಬಾರದ ಗ್ರಾಪಂ ಅಧಿಕಾರಿಗಳು ಮತ್ತು ಕಂಪ್ಯೂಟರ್‌ ಆಪರೇಟರ್‌ಗಳು ಪಟ್ಟಣದಲ್ಲಿ ಖಾಸಗಿ ಕಂಪ್ಯೂಟರ್‌ ಅಂಗಡಿಗಳಲ್ಲಿ ಹಾಗೂ ನೆಟ್ಕೆಫೆಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಜಾಬ್‌ಕಾರ್ಡ್‌ ಮಾಡಲು, ಆಧಾರ್‌ ಮತ್ತು ಬ್ಯಾಂಕ್‌ ಖಾತೆ ಜೋಡಣೆ, ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳ ಎನ್‌ಎಂಆರ್‌ ತೆಗೆಯುವುದು ಸೇರಿದಂತೆ ಗ್ರಾಪಂನ ಕೆಲಸಗಳೆಲ್ಲವೂ ಖಾಸಗಿ ನೆಟ್ಕೆಫೆಗಳಲ್ಲಿಯೇ ಮಾಡುತ್ತಾರೆ. ಇದಕ್ಕೆ ಕೂಲಿ ಕಾರ್ಮಿಕರು, ಗ್ರಾಮಸ್ಥರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ತಾಲೂಕು ಪಂಚಾಯಿತಿಗೆ ಅನೇಕ ದೂರು ಬರುತ್ತಿದ್ದರೂ ಗ್ರಾಪಂಗಳಲ್ಲಿ ಅಧಿಕಾರಿಗಳು ಚೆನ್ನಾಗಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ದಿನ ಪಿಡಿಒಗಳಿಂದ ಮಾಹಿತಿ ಪಡೆಯುತ್ತಿದ್ದೇನೆ ಎನ್ನುತ್ತಾರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಕಾಂತ ಶಿವಪುರೆ.

ತಾಲೂಕಿನಲ್ಲಿ ಪಿಡಿಒಗಳ ಕೊರತೆ ಇರುವುದು ಒಂದೆಡೆಯಾದರೆ, ಇರುವಂತ ಅಧಿಕಾರಿಗಳಾದರೂ ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಕಚೇರಿಗೆ ತೆರಳುವುದಿಲ್ಲ. ಜನರಿಗೆ ಸಮಯಕ್ಕೆ ಸಿಗುವುದಿಲ್ಲ ಎನ್ನುವುದು ಸತ್ಯ. ಇನ್ನಾದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಬರುವ ದೂರುಗಳನ್ನು ಪರಿಗಣಿಸಿ ಮೇಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕಿದೆ. ಗ್ರಾಮೀಣ ಜನತೆ ಅಧಿಕಾರಿಗಳನ್ನು ಹುಡುಕೊಂಡು ತಾಲೂಕು ಕೇಂದ್ರಕ್ಕೆ ಅಲೆದಾಡುವುದನ್ನು ತಪ್ಪಿಸಬೇಕಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರಿಗಳು ಚೆನ್ನಾಗಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ದಿನ ಪಿಡಿಒಗಳೊಂದಿಗೆ ಸಂಪರ್ಕದಲಿದ್ದು, ಸಲಹೆ, ಸೂಚನೆಗಳನ್ನು ನೀಡುತ್ತಿದ್ದೇನೆ. ಪಿಡಿಒ ಮತ್ತು ಕಂಪ್ಯೂಟರ್‌ ಆಪರೇಟರ್‌ಗಳ ಬಗ್ಗೆ ಯಾವುದೇ ನಿರ್ದಿಷ್ಟ ದೂರುಗಳು ಬಂದಿಲ್ಲ. ಒಂದು ವೇಳೆ ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕ ಕೆಲಸ ನೀಡಲಾಗುತ್ತದೆ.
••ಶಶಿಕಾಂತ ಶಿವಪುರೆ,
ತಾಪಂ ಇಒ, ಮಾನ್ವಿ

ರವಿ ಶರ್ಮಾ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.