ಕೆರೆ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣ: ಅಧಿಕಾರಿಗಳ ಭರವಸೆ
Team Udayavani, Aug 31, 2019, 4:28 PM IST
ಮಾನ್ವಿ: ಶಾಶ್ವತ ಕುಡಿಯುವ ನೀರು ಕೆರೆ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ವೀಕ್ಷಿಸಿದರು.
ಮಾನ್ವಿ: ಪಟ್ಟಣದ ರಬ್ಬಣಕಲ್ ಬಳಿ ನಡೆಯುತ್ತಿರುವ ಶಾಶ್ವತ ಕುಡಿಯುವ ನೀರು ಕೆರೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ತಾಕೀತು ಮಾಡಿದರದು.
ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ನಿಗದಿತ ವೇಳೆಗೆ ಪೂರ್ಣಗೊಳ್ಳಬೇಕಿದ್ದ ಕೆರೆ ಕಾಮಗಾರಿ ವಿಳಂಬವಾಗಿದೆ ಏಕೆ ಎಂದು ಇಇ ಯುನುಸ್ ಬಾಷ, ಎಇಇ ಎಸ್.ಎಂ. ಪಾಟೀಲ ಹಾಗೂ ಜೆಇ ಆರ್ ಜಿ. ಪಂಚಮುಖೀ ಅವರನ್ನು ತರಾಟೆಗೆ ತೆಗೆದುಕೊಂಡರು.
ಸರ್ಕಾರ ಸಾರ್ವಜನಿಕರಿಗೆ ಕುಡಿಯುವ ನೀರಿನ ಅನುಕೂಲವಾಗುವ ದೃಷ್ಠಿಯಿಂದ ಕೆರೆ ನಿರ್ಮಾಣಕ್ಕಾಗಿ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡಿದೆ. ಆದರೆ ನೀವು ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಜನರಿಗೆ ನೀರಿನ ತೊಂದರೆ ಮಾಡುತ್ತಿದ್ದೀರಿ. ಇದೆ ರೀತಿ ಮುಂದುವರಿದರೆ ನಿಮ್ಮ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಬೇಕಾಗುತ್ತದೆ ಎಚ್ಚರಿಕೆ ನೀಡಿದರು.
ಮಣ್ಣಿನ ಕೊರತೆಯಿಂದಾಗಿ ಕಳೆದ ಎರಡು ತಿಂಗಳುಗಳಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ನಾಳೆಯಿಂದ ಕಾಮಗಾರಿ ಪ್ರಾರಂಭಿಸಲಾಗುವುದು. ಮುಂದಿನ ಎರಡು ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಕೆಡಬ್ಲ್ಯೂಎಸ್ ಅಧಿಕಾರಿಗಳು ಎನ್.ಎಸ್.ಬೋಸರಾಜು ಅವರಿಗೆ ಸಮಜಾಯಿಸಿ ನೀಡಿದರು. ಮಾಜಿ ಶಾಸಕ ಜಿ. ಹಂಪಯ್ಯ ನಾಯಕ, ಕೆ. ಗುಡದಿನ್ನಿ ಶರಣಯ್ಯ ನಾಯಕ, ರಾಜಾ ವಸಂತ ನಾಯಕ, ಎ. ಬಾಲಸ್ವಾಮಿ ಕೊಡ್ಲಿ, ಬೀರಪ್ಪ ಕಡದಿನ್ನಿ, ಚನ್ನಬಸವ ಕಪಗಲ್, ಪಿ.ಕೆ. ಅಮರೇಶಪ್ಪ, ಜಿಲಾನಿ ಖುರೇಶಿ, ಖಾಲಿದ್ ಖಾದ್ರಿ ಗುರು, ಡಿ.ರಾಮಕೃಷ್ಣ, ಹುಸೇನ್ ಬೇಗ್, ಜಯಪ್ರಕಾಶ, ಮಹಾಂತೇಶಸ್ವಾಮಿ ರೌಡೂರು, ಸಾಬೀರ್ ಪಾಷ, ನಾಗೇಶ ಕಬ್ಬೇರ, ಪ್ರವೀಣ ಕುಮಾರ, ನಾರಾಯಣ ಸ್ವಾಮಿ ಕೋನಾಪುರಪೇಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ