ಅಡ್ಡಾದಿಡ್ಡಿ ಬೈಕ್‌ ನಿಲುಗಡೆಗಿಲ್ಲ ಬ್ರೇಕ್‌

ಜನನಿಬಿಡ ರಸ್ತೆಗಳಲ್ಲಿ ತಳ್ಳು ಬಂಡಿಯಲ್ಲಿ ಹಣ್ಣು-ತರಕಾರಿ ವ್ಯಾಪಾರ • ಟ್ರಾಫಿಕ್‌ ಜಾಮ್‌ ಕಿರಿಕಿರಿ

Team Udayavani, Jul 25, 2019, 4:28 PM IST

25-JUly-38

ಮಾನ್ವಿ: ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದಿನ ರಸ್ತೆಯಲ್ಲಿ ಬೈಕ್‌ಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗಿತ್ತು.

ಮಾನ್ವಿ: ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬೈಕ್‌ಗಳೇ ಕಾಣುತ್ತಿದ್ದು, ಪ್ರಮುಖ ವೃತ್ತ, ರಸ್ತೆಗಳಲ್ಲಿ ಅಡ್ಡಾದಿಡ್ಡಿ ಬೈಕ್‌ ನಿಲ್ಲಿಸುವುದರಿಂದ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ.

ಪಟ್ಟಣದ ಬಸ್‌ ನಿಲ್ದಾಣ, ಬಸವ ವೃತ್ತ, ವಾಲ್ಮೀಕಿ ವೃತ್ತ, ಆಕ್ಸಿಸ್‌ ಬ್ಯಾಂಕ್‌ ಎದುರಿಗೆ, ಪ್ರವಾಸಿ ಮಂದಿರ ಹತ್ತಿರ, ತಹಶೀಲ್ದಾರ್‌ ಕಚೇರಿ, ಕೋರ್ಟ್‌ ಹತ್ತಿರ, ಎಸ್‌ಬಿಎಚ್ ಬ್ಯಾಂಕ್‌ ಮತ್ತು ಪುರಸಭೆ ಎದುರಿಗೆ ಹೀಗೆ ಅತಿ ಹೆಚ್ಚು ಜನದಟ್ಟಣೆ ಪ್ರದೇಶಗಳಲ್ಲಿ ಬೈಕ್‌ಗಳನ್ನು ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಈ ರಸ್ತೆಗಳಲ್ಲ ಪಾದಚಾರಿಗಳು, ಬಸ್‌, ಕಾರು, ಲಾರಿಗಳ ಓಡಾಟಕ್ಕೆ ತೀವ್ರ ತೊಂದರೆ ಆಗುತ್ತಿದೆ. ಪೊಲೀಸರು ಸಂಚಾರ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಸುಗಮ ಸಂಚಾರಕ್ಕೆ ಅಡ್ಡಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಬಸವ ವೃತ್ತದವರೆಗಿನ ರಸ್ತೆ ಎರಡೂ ಬದಿ ಬೈಕ್‌ಗಳನ್ನು ನಿಲ್ಲಿಸಲಾಗುತ್ತಿದೆ. ಈ ರಸ್ತೆಯಲ್ಲೇ ತಳ್ಳು ಗಾಡಿಗಳಲ್ಲಿ ವ್ಯಾಪಾರಸ್ಥರು ತರಕಾರಿ, ಹಣ್ಣು ಮಾರುತ್ತಾರೆ. ಇದರಿಂದಾಗಿ ಎರಡು ಬದಿಯ ಅರ್ಧದಷ್ಟು ರಸ್ತೆ, ಬೈಕ್‌, ತಳ್ಳುಗಾಡಿಗಳಿಂದ ಮುಚ್ಚಿಹೋಗಿರುತ್ತದೆ. ಬಸ್‌, ಲಾರಿಗಳು ಬಂದರೆ ಟ್ರಾಫಿಕ್‌ ಜಾಮ್‌ ಆಗುತ್ತದೆ. ಬಸ್‌ ನಿಲ್ದಾಣದಿಂದ ಬಸವ ವೃತ್ತ ದಾಟಲು ಚಾಲಕರು ಹರಸಾಹಸ ಪಡಬೇಕಾಗುತ್ತದೆ.

ಪಾರ್ಕಿಂಗ್‌ ವ್ಯವಸ್ಥೆ ಇಲ್ಲ: ಬಸವ ವೃತ್ತದಿಂದ ಪುರಸಭೆವರೆಗಿನ ರಸ್ತೆ ಜನ, ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಬಸ್‌ ನಿಲ್ದಾಣ, ಕೋರ್ಟ್‌, ತಹಶೀಲ್ದಾರ್‌ ಕಚೇರಿ, ಮಾರ್ಕೆಟ್, ಬ್ಯಾಂಕ್‌ಗಳು ಈ ರಸ್ತೆಯಲ್ಲೇ ಇವೆ. ಎಲ್ಲೂ ಬೈಕ್‌ ನಿಲುಗಡೆಗೆ ಪ್ರತ್ಯೇಕ ಸ್ಥಳಾವಕಾಶವಿಲ್ಲ. ಹೀಗಾಗಿ ಸಾರ್ವಜನಿಕರು ತಮಗೆ ಕೆಲಸವಿರುವ ಅಂಗಡಿಗಳ ಮುಂದೆ ಬೈಕ್‌ ನಿಲ್ಲಿಸಿ ಹೋಗುತ್ತಾರೆ. ಆದರೆ ತರಕಾರಿ ವ್ಯಾಪಾರಕ್ಕೆ ಪ್ರತ್ಯೇಕ ಮಾರುಕಟ್ಟೆ ಇದ್ದರೂ ವ್ಯಾಪಾರಸ್ಥರು ಮಾತ್ರ ಬಸ್‌ ನಿಲ್ದಾಣದ ಮುಂದಿನ ರಸ್ತೆಯಲ್ಲಿ ತಳ್ಳುಗಾಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುತ್ತಾರೆ. ಈ ರಸ್ತೆಯ ಫುಟ್ಪಾತ್‌ ಮೇಲೂ ಹಣ್ಣಿನ ಅಂಗಡಿ ಹಚ್ಚಲಾಗಿದ್ದು, ಪಾದಚಾರಿಗಳ ಓಡಾಟಕ್ಕೂ ಜಾಗೆ ಇಲ್ಲದಾಗಿದೆ.

ಬಸ್‌ ನಿಲ್ದಾಣದಲ್ಲೂ ಅಡ್ಡಾದಿಡ್ಡಿ ನಿಲುಗಡೆ: ಇನ್ನು ಬಸ್‌ ನಿಲ್ದಾಣದಲ್ಲಂತೂ ಬೈಕ್‌ಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದ್ದು, ಬಸ್‌ ನಿಲುಗಡೆಗೆ ತೊಂದರೆ ಆಗುತ್ತಿದೆ. ಜಿಲ್ಲೆಯಲ್ಲೇ ಮಾನ್ವಿ ಬಸ್‌ ನಿಲ್ದಾಣ ಅತ್ಯಂತ ಚಿಕ್ಕದಾಗಿದೆ. ನಿಲ್ದಾಣದ ಎರಡೂ ಬದಿಯಲ್ಲಿ ಬೈಕ್‌ಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಬಸ್‌ಗಳ ಓಡಾಟಕ್ಕೆ ತೊಂದರೆ ಆಗುತ್ತಿದೆ. ನಿಲ್ದಾಣದ ಸಿಬ್ಬಂದಿ ಬೈಕ್‌ ಸವಾರರಿಗೆ ಹೇಳಿ ಹೇಳಿ ಬೇಸತ್ತಿದ್ದಾರೆ. ಜನ ಕೂಡ ಎಲ್ಲಿ ಬೈಕ್‌ ನಿಲ್ಲಿಸಬೇಕು, ಪಾರ್ಕಿಂಗ್‌ ವ್ಯವಸ್ಥೆ ಮಾಡಿ ಎಂದು ಸಿಬ್ಬಂದಿಯೊಂದಿಗೆ ವಾದಕ್ಕಿಳಿಯುವುದು ಸಾಮಾನ್ಯವಾಗಿದೆ. ಪುರಸಭೆ ಮತ್ತು ಪೊಲೀಸ್‌ ಇಲಾಖೆ ಪಟ್ಟಣದಲ್ಲ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಜತೆಗೆ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.