ನೌಕರರಿಗೆ ಎನ್ಪಿಎಸ್ ಮಾರಕ
ಎನ್ಪಿಎಸ್ ವಿರುದ್ಧ ನೌಕರರ ಸಂಘದಿಂದ ಹೋರಾಟ: ಮೈಬೂಬ್ಬಾಷಾ ಮೂಲಿಮನಿ
Team Udayavani, Sep 6, 2019, 3:03 PM IST
ಮಾನ್ವಿ: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನಡೆದ ವಿಚಾರ ಸಂಕಿರಣವನ್ನು ಜಿಲ್ಲಾಧ್ಯಕ್ಷ ಮೈಬೂಬ್ ಪಾಷಾ ಮೂಲಿಮನಿ ಉದ್ಘಾಟಿಸಿದರು.
ಮಾನ್ವಿ: ನೂತನ ಪಿಂಚಣಿ ಕಾಯ್ದೆ ಸರ್ಕಾರಿ ನೌಕರರ ಭವಿಷ್ಯಕ್ಕೆ ಮಾರಕವಾಗಿದೆ. ಈ ಕಾಯ್ದೆ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಸಂಘ ಮುಂದಿನ ದಿನ ನಿರ್ಣಾಯಕ ಹೋರಾಟ ನಡೆಸಲಿದೆ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮೈಬೂಬ್ಪಾಷಾ ಮೂಲಿಮನಿ ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿಚಾರ ಸಂಕಿರಣ ಮತ್ತು ನಿರ್ದೇಶಕರ ಸಭೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಎನ್ಪಿಎಸ್ನೌಕರರು ಯಾವುದೇ ಕಾರಣಕ್ಕೂ ತಾವು ಬೇರೆ ಎಂದು ಭಾವಿಸಬಾರದು. ನಿಮ್ಮ ಪರವಾಗಿ ನಾವಿದ್ದೇವೆ. ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಅವಧಿಯಲ್ಲಿ ಎನ್ಪಿಎಸ್ ರದ್ದು ಪಡಿಸುವ ಕುರಿತು ಒಂದು ತಂಡವನ್ನು ರಚಿಸಿ ವರದಿ ನೀಡಲು ಹೇಳಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಿ ನೌಕರರು ಎಲ್ಲರೂ ಒಟ್ಟುಗೂಡಿ ಎನ್ಪಿಎಸ್ ವಿರುದ್ದ ಹೋರಾಟ ನಡೆಸಿ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದರು.
ನಮ್ಮ ರಾಜ್ಯ ಸರ್ಕಾರಿ ನೌಕರ ಸಂಘಕ್ಕೆ ಸುದೀರ್ಘ ಇತಿಹಾಸವಿದೆ. 2020ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 100 ವರ್ಷಗಳು ಪೂರೈಸಲಿದೆ. ಈಗಾಗಲೇ ರಾಜಕೀಯವಾಗಿ ಸಂಘವನ್ನು ಹೊಡೆಯಲು ಅನೇಕ ಬಾರಿ ಪ್ರಯತ್ನಿಸಲಾಗಿದೆ. ಆದರೂ ಕೂಡ 2019ರ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದು ಹೆಮ್ಮೆಯ ಸಂಗತಿ ಎಂದರು.
ನಂತರ ನೌಕರರ ಸಂಘದ ಕಲಬುರಗಿ ವಿಭಾಗದ ನಿಕಟಪೂರ್ವ ಮಾಜಿ ಅಧ್ಯಕ್ಷ ಎ.ಬಾಲಸ್ವಾಮಿ ಕೊಡ್ಲಿ ಮಾತನಾಡಿ, ಸಂಘಕ್ಕೆ ನಾಯಕತ್ವ ಬಹಳ ಮುಖ್ಯವಾಗಿದೆ. ಹೋರಾಟವು ಸಂಘವನ್ನು ಬಲಪಡಿಸುತ್ತದೆ. ನೌಕರರ ಮೇಲೆ ಹಲ್ಲೆಗಳು ನಡೆದಾಗ, 7ನೇ ವೇತನ ಜಾರಿಗೆ ಸಂಬಂಧಿಸಿದಂತೆ ಅನೇಕ ಹೋರಾಟಗಳನ್ನು ಮಾಡಿ ಸರ್ಕಾರದ ಗಮನ ಸೆಳೆಯಲಾಗಿದೆ ಎಂದರು. ಸಂಘಟನೆ ತಾಲೂಕು ಅಧ್ಯಕ್ಷ ಶ್ರೀಶೈಲಗೌಡ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ ಕುರ್ಡಿ, ಮಾಜಿ ಅಧ್ಯಕ್ಷ ಶಂಕರ ಕುರ್ಡಿ, ಹರೀಫ್ ಮೀಯಾ, ಪಕೀರಪ್ಪ ಓಲೇಕಾರ್, ಡಾ| ಚಂದ್ರಶೇಖರಸ್ವಾಮಿ, ರಾಜ್ಯ ಕಾರ್ಯದರ್ಶಿ ಪಿಡಿಒ ಪ್ರಸಾದ, ಪ್ರಧಾನ ಕಾರ್ಯದರ್ಶಿ ಮೋಹನಕುಮಾರ ಸ್ವಾಗತಿಸಿದರು, ಶಿಕ್ಷಕ ಹಂಪಣ್ಣ ಚಂಡೂರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್