ವಿದ್ಯುತ್‌ ವಿತರಣಾ ಕೇಂದ್ರ ನನೆಗುದಿಗೆ

•ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರೈತರು•ಗ್ರಾಮಾಭಿವೃದ್ಧಿ ಗಗನ ಕುಸುಮ

Team Udayavani, Aug 22, 2019, 11:29 AM IST

22-Agust-10

ಮರಿಯಮ್ಮನಹಳ್ಳಿ: ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗೆ ಮೀಸಲಿಟ್ಟ ಜಮೀನು

•ಎಂ. ಸೋಮೇಶ ಉಪ್ಪಾರ
ಮರಿಯಮ್ಮನಹಳ್ಳಿ: ಕಡಿಮೆ ವೋಲೆrೕಜ್‌ ವಿದ್ಯುತ್‌, ಪದೇ ಪದೇ ದಿನವಿಡೀ ವಿದ್ಯುತ್‌ ಕಡಿತ, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌ ಆಧಾರಿತ ಯಾವುದೇ ಕೆಲಸಗಳು ಸಂಪೂರ್ಣಗೊಳ್ಳುವುದೇ ಇಲ್ಲ|

ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಅಲ್ಲಲ್ಲಿ ಚಿಕ್ಕ ಪ್ರಮಾಣದ ವಿದ್ಯುತ್‌ ವಿತರಣಾ ಕೇಂದ್ರಗಳ ಅಗತ್ಯವಿದೆ. ಇಂಥ ಅಗತ್ಯದ ಬೇಡಿಕೆಯೊಂದು ಚಿಲಕಹಟ್ಟಿ ಭಾಗದಲ್ಲಿ ಸುಮಾರು ದಶಕಗಳಿಂದಲೂ ಹಾಗೇ ನನೆಗುದಿಗೆ ಬಿದ್ದಿದೆ.

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗಾಗಿ ಈ ಭಾಗದ ರೈತರು ಬಹಳ ವರ್ಷಗಳಿಂದ ಬೇಡಿಕೆ ಇಡುತ್ತಲೇ ಇದ್ದಾರೆ. ಆದರೆ ಈ ಬೇಡಿಕೆ ಈಡೇರಿಸುವ ಕಾರ್ಯಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂಬುದು ಈ ಭಾಗದ ರೈತರ ಆರೋಪ.

ಹಾರುವನಹಳ್ಳಿ ಗ್ರಾಮ ಸರ್ವೇ ನಂ. 128, 129ರಲ್ಲಿ 1.55,0.45 ಎಕರೆ ಒಟ್ಟು ವಿಸ್ತೀರ್ಣ 2 ಎಕರೆ ಜಮೀನನ್ನು ಖರೀದಿಸಲು ಕೆಪಿಟಿಸಿಎಲ್ ಮುಂದಾಗಿದೆ. ಚಿಲಕನಹಟ್ಟಿ ಭಾಗದ ರೈತರ ಹಲವು ದಶಕಗಳ ಹಿಂದಿನ ಬೇಡಿಕೆಯೊಂದು ಈಡೇರಿಕೆಗೆ ಈಗ ಒಂದಿಷ್ಟು ರೆಕ್ಕೆಪುಕ್ಕಗಳು ಬಂದಿವೆ.

ಇತ್ತೀಚೆಗೆ ಬಳ್ಳಾರಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಹೊಸಪೇಟೆಯ ಶಿರಸ್ತೇದಾರರು, ಉಪನೋಂದಣಾಧಿಕಾರಿಗಳು ಹೊಸಪೇಟೆ, ಕೆಪಿಟಿಸಿಎಲ್ನ ಕಾರ್ಯನಿರ್ವಾಹಕ ಅಭಿಯಂತರರು, ಜಿಪಂನ ಉಪಕಾರ್ಯದರ್ಶಿಗಳು ಪಾಲ್ಗೊಂಡಿದ್ದರು. ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಭೂಮಿ ಖರೀದಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿ ಭೂಮಿ ಬೆಲೆ ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಎಕರೆಯೊಂದಕ್ಕೆ 8.80 ಲಕ್ಷ ರೂ. ನಿಗದಿ ಮಾಡಲಾಗಿದ್ದು ನಿಯಮಾನುಸಾರ ಭೂಮಾಲೀಕತ್ವ ಪಡೆದ ಕೆಪಿಟಿಸಿಎಲ್ ಬಳ್ಳಾರಿ ಇವರು ಚಿಲಕನಹಟ್ಟಿ ಗ್ರಾಪಂಗೆ ಪಾವತಿಸಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ರೈತರಿಗೆ ಹೆಚ್ಚು ಅನುಕೂಲ: ಚಿಲಕನಹಟ್ಟಿ ಗ್ರಾಮದಲ್ಲಿ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆ ಮಾಡುವುದರಿಂದ ರೈತರಿಗೆ ಅಗತ್ಯವಾದ ವಿದ್ಯುತ್‌ ನ ಸಮಸ್ಯೆ ಬಗೆಹರಿಯಲಿದೆ. ಕಡಿಮೆ ವೋಲೆrೕಜ್‌ನಿಂದ ಗ್ರಾಮೀಣ ಭಾಗದ ಜನರು ಹೈರಾಣಾಗುವುದ ತಪ್ಪುತ್ತದೆ. ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕಾ ಚಟುವಟಿಕೆಗೂ ಸಮರ್ಪಕ ವಿದ್ಯುತ್‌ ದೊರೆಯಲಿದೆ. ರೈತರು ಹೊಲದಲ್ಲಿನ ಪಂಪ್‌ಸೆಟ್‌ಗಳ ಮೂಲಕ ಸುಗಮವಾಗಿ ನೀರು ಹರಿಸಲು ಸಾಧ್ಯವಾಗುತ್ತದೆ. ಚಿಲಕನಹಟ್ಟಿ ಗ್ರಾಪಂ ವ್ಯಾಪ್ತಿಯ ಹಾರುವನಹಳ್ಳಿ, ತಾಳೆಬಸಾಪುರ ತಾಂಡಾ, ತಿಮ್ಮಲಾಪುರ, ಪೋತಲಕಟ್ಟೆ, ಜಿ. ನಾಗಲಾಪುರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೂ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಲು ಸಾಧ್ಯವಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದಷ್ಟು ಬೇಗ 66/11 ಕೆ.ವಿ. ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆಯಾಗಲಿ ಎಂದು ಈ ಭಾಗದ ರೈತರು ಕಾತರದಿಂದ ಕಾದು ನೋಡುತ್ತಿದ್ದಾರೆ. ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಲಿ ಎಂದು ಜನ ಆಶಿಸುತ್ತಿದ್ದಾರೆ.

ಚಿಲಕನಹಟ್ಟಿ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 66/11 ಕೆ.ವಿ.ವಿದ್ಯುತ್‌ ವಿತರಣಾ ಕೇಂದ್ರಕ್ಕೆ ಭೂಮಿ ಖರೀದಿಗೆ ಸಂಬಂಧಿಸಿದಂತೆ ಬೆಲೆ ನಿಗದಿಪಡಿಸಲಾಗಿದ್ದು ನಂತರದ ದಿನಗಳಲ್ಲಿ ಯೋಜನೆ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು ಎರಡು ವರ್ಷಗಳ ಒಳಗೆ ಯೋಜನೆ ಪೂರ್ಣಗೊಳ್ಳಲಿದೆ.
ಕಾರ್ಯನಿರ್ವಾಹಕ ಅಭಿಯಂತರರು
 ಕೆಪಿಟಿಸಿಎಲ್

ನಮ್ಮ ಭಾಗಕ್ಕೆ ಅಗತ್ಯವಿದ್ದ ವಿದ್ಯುತ್‌ ವಿತರಣಾ ಉಪಕೇಂದ್ರ ಸ್ಥಾಪನೆ ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ. ನಮ್ಮ ಊರಿನ ನಮ್ಮೂರು ನಮ್ಮ ತೋಟ ಯೋಜನೆಗಾಗಿ ತೆಗೆದಿರಿಸಿದ್ದ ಸುಮಾರು 6 ಎಕರೆ ಜಮೀನಿನಲ್ಲಿ 2 ಎಕರೆ ಜಮೀನು ಇದಕ್ಕಾಗಿ ಕೊಡಲು ನಿರ್ಧರಿಸಲಾಗಿದೆ. ಈ ವಿದ್ಯುತ್‌ ವಿತರಣ ಕೇಂದ್ರ ಆರಂಭವಾದರೆ ನಮ್ಮ ಭಾಗದ ವಿದ್ಯುತ್‌ ವಿತರಣೆಯಲ್ಲಿನ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ.
ಬಿ.ಎಸ್‌. ರಾಜಪ್ಪ,
ತಾಪಂ ಸದಸ್ಯರು ಹೊಸಪೇಟೆ, ಮಾಜಿ ಅಧ್ಯಕ್ಷರು ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.