ಕಲಾ ಸಂಘಟನೆಗಳಿಗೆ ನೆರವು ಒದಗಿಸಿ

ರಂಗಶಿಕ್ಷಣ ಚಟುವಟಿಕೆ ನಿರಂತರವಾಗಿರಲಿ•ಪ್ರೇಕ್ಷಕರ ಮನಗೆದ್ದ ಮಕ್ಕಳ ನಾಟಕ ಪ್ರದರ್ಶನ

Team Udayavani, Jun 3, 2019, 5:06 PM IST

3-June-31

ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ರಂಗಚೌಕಿ ಕಲಾಟ್ರಸ್ಟ್‌ ವತಿಯಿಂದ ಒಂದು ತಿಂಗಳ ಕಾಲ ಜರುಗಿದ ಅಜ್ಜಿಮನೆ ಬೇಸಿಗೆ ಶಿಬಿರದ ನಾಟಕೋತ್ಸವವನ್ನು ಜಾನಪದ ಅಕಾಡೆಮಿ ಸದಸ್ಯೆ ಮಾತಾ ಮಂಜಮ್ಮ ಜೋಗತಿ ಉದ್ಘಾಟಿಸಿದರು.

ಮರಿಯಮ್ಮನಹಳ್ಳಿ: ಮಕ್ಕಳ ಶಿಬಿರಗಳನ್ನು ಆಯೋಜಿಸುವ ಕಲಾ ಸಂಘಟನೆಗಳಿಗೆ ನಾಟಕ ಅಕಾಡೆಮಿ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಜಾನಪದ ಅಕಾಡೆಮಿ ಸದಸ್ಯೆ ಮಾತಾ ಮಂಜಮ್ಮ ಜೋಗತಿ ಆಗ್ರಹಿಸಿದರು.

ಪಟ್ಟಣದ ದುರ್ಗಾದಾಸ ಬಯಲು ರಂಗಮಂದಿರದಲ್ಲಿ ರಂಗಚೌಕಿ ಕಲಾ ಟ್ರಸ್ಟ್‌ ವತಿಯಿಂದ ಒಂದು ತಿಂಗಳ ಕಾಲ ಜರುಗಿದ ಅಜ್ಜಿಮನೆ ಬೇಸಿಗೆ ಶಿಬಿರದ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಂಗ ಶಿಬಿರಗಳು ನಡೆಸಲು ಲಕ್ಷಾಂತರ ರೂಪಾಯಿಗಳ ಅಗತ್ಯವಿದೆ. ಗ್ರಾಮೀಣ ಭಾಗಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗೂ ಈ ಶಿಬಿರಗಳ ಮಹತ್ವವಿದೆ. ಇದು ಸರ್ಕಾರದ ಜವಾಬ್ದಾರಿಯಾಗಬೇಕು. ಇಂತಹ ಶಿಬಿರಗಳಿಗೆ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದರು.

ರಂಗಕರ್ಮಿ, ನಿವೃತ್ತ ಶಿಕ್ಷಕ ಮ.ಬ.ಸೋಮಣ್ಣ ಮಾತನಾಡಿ, ಮರಿಯಮ್ಮನಹಳ್ಳಿಯಂತಹ ಪಟ್ಟಣದಲ್ಲಿ ಈ ಬೇಸಿಗೆಯಲ್ಲಿ ಮೂರು ಮಕ್ಕಳ ಶಿಬಿರಗಳು ನಡೆದಿವೆ ಎಂಬುದೇ ಅಚ್ಚರಿಯ ಸಂಗತಿ. ಮಕ್ಕಳಿಗೆ ಸೂಕ್ತ ರಂಗಶಿಕ್ಷಣ ನೀಡುವ ಚಟುವಟಿಕೆಗಳು ನಿರಂತರ ನಡೆಯುತ್ತಲೇ ಇರುತ್ತವೆ ಎಂದರು.

ವೃತ್ತಿ ರಂಗ ಕಲಾವಿದೆ ಡಾ.ನಾಗರತ್ನಮ್ಮ ಮಾತನಾಡಿದರು. ರಂಗಚೌಕಿ ಕಲಾಟ್ರಸ್ಟ್‌ ಅಧ್ಯಕ್ಷೆ ಪುಷ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ನಿರ್ದೇಶಕ ಬಿ.ಸರದಾರ, ರಂಗಪ್ರೇಮಿ ಟಿ.ಎಂ.ನಾಗಭೂಷಣ ಇದ್ದರು.

ನಂತರ ಶಿಬಿರದ ಮಕ್ಕಳಿಂದ ಭೂತಕೋಲ ಕುಣಿತ, ಯಕ್ಷಗಾನ ಕುಣಿತ, ಕೋಲಾಟ, ರಂಗಗೀತೆ ಕಾರ್ಯಕ್ರಮಗಳು ಜರುಗಿದವು.

ಶಿಬಿರದ ಮಕ್ಕಳು ಅಭಿನಯಿಸಿದ ಎಸ್‌.ರಾಮನಾಥ ರಚನೆಯ ಮಹಾಭೋಜನ ನಾಟಕ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ನಾವು ಉಣ್ಣುವ ಮೊದಲ ತುತ್ತು ಕಾಗೆಗಳಿಗೆ ಮೀಸಲು ಯಾಕೆ ಇಡಬೇಕು ಎಂಬ ಸಂಗತಿಯನ್ನುಳ್ಳ ಕತೆಯಾಗಿದ್ದು, ಆಹಾರ ಪಡೆಯುವುದು ಎಲ್ಲರ ಹಕ್ಕು ಎಂಬ ಆಶಯವನ್ನು ಸಮರ್ಪಕವಾಗಿ ಮಂಡಿಸಿತು. ಮಕ್ಕಳ ಸ್ಪಷ್ಟ ಸಂಭಾಷಣೆ, ಸನ್ನಿವೇಷಕ್ಕೆ ತಕ್ಕ ಭಾವಾಭಿನಯ ಪ್ರೇಕ್ಷಕರ ಮನ ಗೆದ್ದಿತು. ಬಾರಿಗಿಡದ ಸರದಾರ ನಾಟಕ ನಿರ್ದೇಶನ ಮಾಡಿದ್ದರು. ಈ.ರಾಘವೇಂದ್ರ ಬೆಳಕಿನ ನಿರ್ವಹಣೆ ಮಾಡಿದರು. ಪುಷ್ಪ ರಂಗಸಜ್ಜಿಕೆ, ದಾದಾಪೀರ್‌ ಪ್ರಸಾದನ ನಿರ್ವಹಿಸಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.