ಜಾನಪದ ಕಲಾವಿದರ ಅಭಿವೃದ್ಧಿಗೆ ಮೀಸಲಾತಿ ರೂಪಿಸಿ


Team Udayavani, Jul 10, 2019, 4:18 PM IST

1–July-38

ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ವೇಷಗಾರ ದಿ.ಮೋತಿ ಸುಂಕಪ್ಪ ಜನ್ಮಶತಾಬ್ಧಿ ಹಾಗೂ ತಾಲೂಕು ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಮರಿಯಮ್ಮನಹಳ್ಳಿ: ಜಾನಪದ ಕಲಾವಿದರ ಅಭಿವೃದ್ಧಿಗೆ ವಿಶೇಷ ಮೀಸಲಾತಿ ರೂಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಬಿ.ಟಾಕಪ್ಪ ಹೇಳಿದರು.

ಪಟ್ಟಣದ ದುರ್ಗದಾಸ್‌ ಕಲಾಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯಿಂದ ನಡೆದ ವೇಷಗಾರ ದಿ.ಮೋತಿ ಸುಂಕಪ್ಪ ಅವರ ಜನ್ಮಶತಾಬ್ಧಿ ಹಾಗೂ ತಾಲೂಕು ಜಾನಪದ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉ.ಕ ಹಾಗೂ ಹೈ.ಕ ಪ್ರದೇಶದಲ್ಲಿ ಜಾನಪದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, ಅಂತಹ ಕಲಾವಿದರ ಬದುಕು ಇನ್ನೂ ಸುಧಾರಿಸಿಲ್ಲ. ರಸ್ತೆ ಬದಿ, ಮರದ ಬುಡದಲ್ಲಿ, ಶಾಲಾವರಣಗಳಲ್ಲಿ ಅವರ ನಿತ್ಯದ ಜೀವನ ನಡೆಯುತ್ತಿದ್ದು, ಅವರಿಗೆ ಶಾಶ್ವತ ನೆಲೆ ಬೇಕಾಗಿದೆ. ಬದಲಾದ ಜನ ಜೀವನ ವ್ಯವಸ್ಥೆಯಲ್ಲಿ ಅಲೆಮಾರಿ ಪರಂಪರೆ ಹೋಗಲಾಡಿಸಬೇಕಿದೆ. ಅಂತಹ ಕಲಾವಿದರನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾದರೆ ಮಾಸಾಶನ, ಗಣತಿ ಹಾಗೂ ಮೀಸಲಾತಿಯನ್ನು ಸರ್ಕಾರ ನೀಡಬೇಕು. ಜತೆಗೆ ಸ್ಥಳೀಯ ಆಡಳಿತಗಳ ಸಹಕಾರ ಅಗತ್ಯ ಎಂದರು.

ಮೊದಲು ಜಾನಪದ ಅಕಾಡೆಮಿಯಿಂದ ವರ್ಷಕ್ಕೆ ಒಂದು ಸಾವಿರ ಜಾನಪದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಲಾಗುತ್ತಿತ್ತು. ಆದರೆ ಈಗ ನಮ್ಮ ಶ್ರಮ ಹಾಗೂ ಕಲಾವಿದರ ಹೋರಾಟದಿಂದ ಐದು ಸಾವಿರ ಕಲಾವಿದರನ್ನು ತಲುಪಿದೆ. ಇಷ್ಟೆಲ್ಲಾ ಅಕಾಡೆಮಿಯಿಂದ ಅವಕಾಶ ಮಾಡಿದ್ದರೂ ಪ್ರಸಕ್ತ ವರ್ಷ ಕೇವಲ 3600 ಮಾಸಾಶನದ ಅರ್ಜಿಗಳು ಸಲ್ಲಿಕೆಯಾಗಿವೆ. ಅಲ್ಲದೇ ಜಾನಪದ ಕಲಾವಿದರು ಸಹ ಸಮಾಜದಲ್ಲಿ ಜೀವಿಸುತ್ತಿದ್ದು, ಸಮಾಜದ ಜತೆ ಜತೆಗೆ ಬಾಳಬೇಕು ಎಂದು ಸಲಹೆ ನೀಡಿದರು.

ಇದಕ್ಕೂ ಮುನ್ನ ಮಕ್ಕಳ ಕೋಲಾಟ, ಕೀಲುಕುದುರೆ ಗೊಂಬೆ ಕುಣಿತ, ಗೋಗುತಿ ನೃತ್ಯ, ಹಲಗೆ ವಾದನ, ಸಿಂಧೋಳ ಕುಣಿತ, ಹಗಲು ವೇಷ, ಗೊಂದಲಿಗರ ಮೇಳ, ತಾಸವಾದನ, ಗೊರವರ ಕುಣಿತ, ವೀರಗಾಸೆ ನೃತ್ಯ, ಪೋಟಿ ವೇಷ ಹಾಗೂ ಮಕ್ಕಳ ಭೂತ ಕೋಲು ಜಾನಪದ ಕಲೆಗಳು ಕಲಾಮೇಳದಲ್ಲಿ ಪಾಲ್ಗೊಂಡು ನೋಡುಗರನ್ನು ಆಕರ್ಷಿಸಿದವು. ಜಿಪಂ ಸದಸ್ಯೆ ರೇಖಾ ಪೂಜಾರ ಪ್ರಕಾಶ್‌ ಕಾರ್ಯಕ್ರಮ ಉದ್ಘಾಟಿಸಿದರು. ಪಪಂ ಅಧ್ಯಕ್ಷ ವಿಷ್ಣುನಾಯ್ಕ, ಜಾನಪದ ಅಕಾಡೆಮಿ ರಿಜಿಸ್ಟರ್‌ ಸಿದ್ರಾಮ ಸಿಂಧೆ, ಲಲಿತ ಕಲಾರಂಗದ ಅಧ್ಯಕ್ಷ ಹುರುಕೊಳ್ಳಿ ಮಂಜುನಾಥ, ಹಿರಿಯ ಕಲಾವಿದೆ ಡಾ.ಕೆ.ನಾಗರತ್ನಮ್ಮ, ಜಾನಪದ ಚಿಂತಕ ಇಸ್ಮಾಯಿಲ್ ಯಲಿಗಾರ, ಜಾನಪದ ವಿವಿ ಸಹಾಯಕ ಪ್ರಾಧ್ಯಾಪಕ ಮಲ್ಲಿಕಾರ್ಜುನ ಬಿ.ಮಾನ್ಪಡೆ, ಮೋತಿ ರಾಮಣ್ಣ ಇದ್ದರು. ಬಾಣದ ಶ್ರೀಧರ ನಿರೂಪಿಸಿದರು. ಮಂಜಮ್ಮ ಜೋಗ್ತಿ ವಂದಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.