ಅಷ್ಟಾಂಗ ಯೋಗದಿಂದ ಆರೋಗ್ಯ ವೃದ್ಧಿ
ಮೈತುಂಬಾ ಕೆಲಸ-ಹೊಟ್ಟೆ ತುಂಬಾ ಊಟ-ಕಣ್ತುಂಬ ನಿದ್ರೆ ಆರೋಗ್ಯಕರ ಜೀವನ ಶೈಲಿ: ಡಾ| ಇತ್ಲಿ
Team Udayavani, Jun 17, 2019, 11:26 AM IST
ಮಸ್ಕಿ: ವೀರಶೈವ ವಿದ್ಯಾವರ್ಧಕ ಸಂಘದ ಶಾಲಾ ಆವರಣದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು.
ಮಸ್ಕಿ: ಜೀವಾತ್ಮ ಮತ್ತು ಪರಮಾತ್ಮನಲ್ಲಿ ಏಕೀಕರಣಗೊಳ್ಳುವುದಕ್ಕೆ ಯೋಗ ಎನ್ನುತ್ತಾರೆ. ಆರೋಗ್ಯಕರ ಜೀವನಕ್ಕಾಗಿ ಋಷಿಮುನಿಗಳು ಅಷ್ಟಾಂಗ ಯೋಗ ಪದ್ಧತಿ ಕಲಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಮನುಷ್ಯ ಆರೋಗ್ಯಕರ ಜೀವನ ಸಾಗಿಸಬಹುದು ಎಂದು ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ರವಿವಾರ ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಪ್ರಾಥಮಿಕ, ಪ್ರೌಢಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಷ್ಟಾಂಗ ಯೋಗದಲ್ಲಿ ತೊಡಗಿದರೆ ಶಾರೀರಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯಕರ ಮತ್ತು ನೆಮ್ಮದಿಯ ಜೀವನ ನಡೆಸಬಹುದು. ಆಸ್ಪತ್ರೆಗೆ ಹೋಗುವ ಪ್ರಮೇಯವೇ ಬರುವುದಿಲ್ಲ ಎಂದರು.
ಡಾ| ಶಿವಶರಣಪ್ಪ ಇತ್ಲಿ ಮಾತನಾಡಿ, ಮನುಷ್ಯ ಆರೋಗ್ಯವಾಗಿರಬೇಕಾದರೆ ಮೈತುಂಬ ಕೆಲಸವಿರಬೇಕು. ಹೊಟ್ಟೆ ತುಂಬ ಊಟ ಮಾಡಬೇಕು ಮತ್ತು ಕಣ್ತುಂಬ ನಿದ್ದೆ ಮಾಡಿದರೆ ಸಾಕು ಆರೋಗ್ಯವಾಗಿರುತ್ತಾನೆ ಎಂದರು.
ಆಯುರ್ವೇದ ವೈದ್ಯ ಪ್ರವೀಣ ಸಾನಬಾಳ ಮಾತನಾಡಿ, ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಯೋಗ ವಿದ್ಯೆ ಇದು ಪ್ರಪಂಚದ ಎಲ್ಲ ಕಡೆ ಪ್ರಾಮುಖ್ಯತೆ ಪಡೆದಿದೆ. ಆರೋಗ್ಯದ ಗುಟ್ಟನ್ನು ನಮ್ಮ ಋಷಿಮುನಿಗಳು ಯೋಗದಲ್ಲಿ ಕಂಡುಕೊಂಡಿದ್ದು ಅವುಗಳ ಬಳಕೆ ಕುರಿತು ತಿಳಿ ಹೇಳಿದ್ದಾರೆ ಎಂದರು.
ಡಾ| ಬಿ.ಎಚ್.ದಿವಟರ, ಯೋಗಾಚಾರ್ಯ ಆನಂದ ಪತ್ತಾರ, ಮಹಾಂತೇಶ ಬ್ಯಾಳಿ ಮಾತನಾಡಿದರು.
ಪ್ರಕಾಶ ಧಾರಿವಾಲ, ಪತಂಜಲಿ ಸಮಿತಿ ಅಧ್ಯಕ್ಷ ಸುಕುಮುನಿಯಪ್ಪ ನಾಯಕ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ದೇಶಮುಖ, ಕಸ್ತೂರಿ ಇತ್ಲಿ, ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ ಕಂಬಾರ, ವರ್ತಕ ಶಶಿಕಾಂತ ಬ್ಯಾಳಿ, ಡಾ| ಮಲ್ಲಿಕಾರ್ಜುನ ಇತ್ಲಿ, ಡಾ| ಶಿವಪ್ರಸಾದ ಪತ್ತಾರ, ಡಾ| ಮಲ್ಲಿಕಾರ್ಜುನ ಶೆಟ್ಟಿ, ಶಿವರಾಜ ಯಂಬಲದ ಇದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳಿಗೆ ಸಸಿ ವಿತರಿಸಲಾಯಿತು. ಸುಮಾರು 200 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ