ಘಟಕವಿದ್ದರೂ ಜನರಿಗಿಲ್ಲ ಶುದ್ಧ ನೀರು ಕುಡಿವ ಭಾಗ್ಯ

ಮಾಸ್ತಿ ಗ್ರಾಮದಲ್ಲಿ ನೀರು ಪೂರೈಕೆ ಇಲ್ಲದೆ ನನೆಗುದಿಗೆ ಬಿದ್ದಿರುವ ಎರಡು ಘಟಕ , ಶೀಘ್ರ ಆರಂಭಕ್ಕೆ ಗ್ರಾಪಂ ಸದಸ್ಯರ ಮನವಿ

Team Udayavani, Jun 13, 2019, 4:39 PM IST

13-June-35

ಮಾಸ್ತಿ ಗ್ರಾಮದ ದಿನ್ನಹಳ್ಳಿ ರಸ್ತೆಯ ಎ.ಕೆ.ಕಾಲೋನಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೀಗ ಹಾಕಲಾಗಿದೆ.

ಎಂ.ಮೂರ್ತಿ
ಮಾಸ್ತಿ:
ಸರ್ಕಾರ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ಎರಡೂವರೆ ವರ್ಷಗಳ ಹಿಂದೆ ಗ್ರಾಮದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಆದರೆ, ಈವರೆಗೂ ಅದಕ್ಕೆ ನೀರು ಪೂರೈಕೆ ಮಾಡದ ಕಾರಣ ಗ್ರಾಮಸ್ಥರಿಗೆ ಶುದ್ಧ ನೀರು ಕುಡಿಯುವ ಭಾಗ್ಯ ಸಿಕ್ಕಿಲ್ಲ.

ಒಂದೂವರೆ ಸಾವಿರ ಅಡಿಗಳಲ್ಲಿ ಸಿಗುವ ಫ್ಲೋರೈಡ್‌ಯುಕ್ತ ನೀರು ಸೇವಿಸಿ ಜನ ಹಲವು ರೋಗಗಳಿಗೆ ತುತ್ತಾಗಿದ್ದಾರೆ. ಇದನ್ನು ನಿವಾರಿಸಬೇಕು ಎಂದು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಕೆಲವು ಗ್ರಾಮಗಳಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಿ, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ, ಮಾಸ್ತಿ ಗ್ರಾಮದ ಇಂದಿರಾನಗರ ಹಾಗೂ ದಿನ್ನಹಳ್ಳಿ ರಸ್ತೆಯ ಎ.ಕೆ.ಕಾಲೋನಿಯಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಇದುವರೆಗೂ ಚಾಲನೆ ಸಿಕ್ಕಿಲ್ಲ.

ಕೆ.ಎಸ್‌.ಮಂಜುನಾಥ್‌ಗೌಡ ಶಾಸಕರಾಗಿದ್ದ ಅವಧಿಯಲ್ಲಿ ಲಕ್ಷಾಂತರ ರೂ. ವೆಚ್ಚ ಮಾಡಿ ಎರಡು ಘಟಕ ಸ್ಥಾಪಿಸಲಾಗಿತ್ತು. ಈಗ ಕೇವಲ ನೆಪಕ್ಕೆ ಮಾತ್ರ ಎಂಬಂದಾಗಿದೆ. ಮಿನರಲ್ ವಾಟರ್‌ ಸೇವಿಸುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಜನ ಸಾಮಾನ್ಯರ ಪರಿಸ್ಥಿತಿ ಅರ್ಥ ಮಾಡಿಕೊಳ್ಳುತ್ತಿಲ್ಲ. ಮಾಸ್ತಿ ಗ್ರಾಮಸ್ಥರು ಬೇರೆ ಗ್ರಾಮಗಳಿಗೆ ತೆರಳಿ ಶುದ್ಧ ಕುಡಿಯುವ ನೀರು ತರಬೇಕಾಗಿದೆ. ಇಲ್ಲ, 35 ರೂ. ನೀಡಿ 20 ಲೀಟರ್‌ನ ಮಿನರಲ್ ವಾಟರ್‌ ಖರೀದಿಸಿ ಕುಡಿಯುವಂತಹ ಪರಿಸ್ಥಿತಿ ಬಂದೊದಗಿದೆ.

ಬೇಸಿಗೆ ಪ್ರಾರಂಭವಾಗುವ ಮೊದಲೇ ಈ ಭಾಗಗಳಲ್ಲಿ ನೀರಿನ ಸಮಸ್ಯೆ ಇದೆ. ಜನತೆ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಬಂದೊದಗಿದೆ. ಶೀಘ್ರದಲ್ಲೇ ಮಾಸ್ತಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ನೀಡಲು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಬಗ್ಗೆ ಕಳೆದ 3 ತಿಂಗಳ ಹಿಂದೆ ಉದಯವಾಣಿಯಲ್ಲಿ ಸುದ್ದಿ ಪ್ರಕಟವಾದ ಬಳಿಕ ಎ.ಕೆ.ಕಾಲೋನಿಯಲ್ಲಿರುವ ಶುದ್ಧ ನೀರಿನ ಘಟಕಕ್ಕೆ 15 ದಿನ ಶುದ್ಧ ನೀರು ಪೂರೈಕೆ ಮಾಡಿ, ನಂತರ ಸ್ಥಗಿತಗೊಳಿಸಲಾಗಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.