ಬಂತು ಮಳೆ: ಅನ್ನದಾತನಲ್ಲಿ ಹೆಚ್ಚಿದ ಹುಮ್ಮಸ್ಸು

ಬಿತ್ತನೆಗೆ ರೈತರ ಭರದ ಸಿದ್ಧತೆ ಸಂಪ್ರದಾಯದಂತೆ ಸೋಮವಾರ ರಜೆ ಮಾಡುವ ರೈತರು ಹೊಲದತ್ತ

Team Udayavani, Jun 27, 2019, 10:02 AM IST

27-June-3

ಮಾಯಕೊಂಡ: ಹೋಬಳಿ ಸುತ್ತಮುತ್ತ ಭರದ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ.

ಶಶಿಧರ್‌ ಶೇಷಗಿರಿ
ಮಾಯಕೊಂಡ:
ಭಾನುವಾರ ಸುರಿದ ಮಳೆಯಿಂದ ಹರ್ಷಗೊಂಡ ಮಾಯಕೊಂಡ, ಆನಗೊಡು ಹೋಬಳಿಯ ರೈತರುಗಳು ಸೋಮವಾರದ ಬಿತ್ತನೆಯ ರಜಾ ದಿನ ಮರೆತು ಟ್ರ್ಯಾಕ್ಟರ್‌ ಮೂಲಕ ಬಿತ್ತನೆಯ ಸಿದ್ಧತೆ ಆರಂಭಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಮಳೆಯಿಲ್ಲದೆ ಪರದಾಡುತ್ತಿದ್ದ ರೈತರು ಮಳೆ ಸರಿಯಾಗಿದ್ದರೆ ಈಗಾಗಲೇ ಮೆಕ್ಕೆಜೋಳ ಬಿತ್ತನೆ ಮಾಡಿ, ಸಾಲು ಮಾಡಲು ಎಡೆ ಕುಂಟೆ ಹೊಡೆಯಬೇಕಾಗಿತ್ತು. ಮಳೆ ಇಲ್ಲದೇ ಬಿತ್ತನೆ ಅವಧಿ ಎಲ್ಲಿ ಮುಗಿದು ಬಿಡುವುದೋ ಎಂದು ಆತಂಕದಲ್ಲಿ ಕೆಲ ರೈತರು ಆಗಸದತ್ತ ನೋಡುತ್ತಿದ್ದರೆ, ಕೆಲವರು ಒಣ ಭೂಮಿಯಲ್ಲೇ ಬಿತ್ತನೆ ಮಾಡಿ ಮಳೆ ದಾರಿ ಕಾಯುತ್ತಿದ್ದರು.

ಆತಂಕದಲ್ಲಿದ್ದ ರೈತರಿಗೆ ಭಾನುವಾರ ಸುಮಾರು ಒಂದು ಗಂಟೆ ಕಾಲ ಸುರಿದ ಮಳೆ ಸಂತಸ ಮೂಡಿಸಿದೆ. ವಾಡಿಕೆಯಂತೆ ಜೂನ್‌ ತಿಂಗಳಲ್ಲಿ 45. ಮಿ.ಮಿ ಮಳೆ ಆಗಬೇಕಿದೆ. ಭಾನುವಾರದ ಮಳೆ ಹಿಡಿದು ಈವರೆಗೆ 23.8 ಮಿ.ಮಿ ಮಳೆ ಸುರಿದಿದೆ.

ಹೋಬಳಿಯ ರೈತರು ಸಂಪ್ರದಾಯದಂತೆ ಸೋಮವಾರ ಜಮೀನುಗಳಲ್ಲಿ ಬಿತ್ತನೆ ಮಾಡುವುದಿಲ್ಲ. ಆದರೆ ಮಳೆಯ ಕಣ್ಣಮುಚ್ಚಾಲೆ ಮತ್ತು ಬಿತ್ತನೆಯ ಅವಧಿ ಮುಗಿಯುತ್ತದೆ ಎಂಬ ಆತಂಕದಲ್ಲಿ ಸೋಮವಾರವೂ ರೈತರು ಹೊಲದತ್ತ ಮುಖ ಮಾಡಿದರು. ಹೋಬಳಿಯಾದ್ಯಂತ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ.

ಜೋಡೆತ್ತುಗಳಿಗೆ ಬೇಡಿಕೆ ಹೆಚ್ಚಿರುವುದರಿಂದ ಮತ್ತು ಬಾಡಿಗೆ 1500 ರಿಂದ 2000 ಸಾವಿರ ರೂ.ವರೆಗಿದ್ದು, ದುಬಾರಿಯಾಗುತ್ತಿರುವುದರಿಂದ ಹೋಬಳಿಯ ದಿಂಡದಹಳ್ಳಿ, ಕೊಡಗನೂರು. ಹೆದ್ನೆ, ರಾಂಪುರ, ಹುಚ್ಚವ್ವನಹಳ್ಳಿ, ಒಂಟಿಹಾಳು, ಹಾಗೂ ಆನಗೊಡು ಹೋಬಳಿಯ ಬಾವಿಹಾಳು, ನೇರ್ಲಿಗೆ, ನರಗನಹಳ್ಳಿ, ಸಿದ್ದನೂರು, ಇತರೆ ಅನೇಕ ಗ್ರಾಮದ ರೈತರು ಹೆಚ್ಚಾಗಿ ಟ್ರ್ಯಾಕ್ಟರ್‌ ಮೊರೆ ಹೋಗಿದ್ದಾರೆ.

ಮೆಕ್ಕೆಜೋಳ ಬಿತ್ತನೆ ಮಾಡುವ ರೈತರು ಜೂ. 30ರ ಕೊನೆಯವರೆಗೂ ಬಿತ್ತನೆ ಮಾಡಬಹುದು. ತಡವಾದರೆ ಇಳುವರಿ ಕಡಿಮೆಯಾಗಿ ಹುಳು ಬಾಧೆ ಜಾಸ್ತಿಯಾಗಬಹುದು. ಬೀಜೋಪಚಾರ ಮಾಡಿ ಬಿತ್ತನೆ ಮಾಡಿ ಎನ್ನುತ್ತಾರೆ ಕೃಷಿ ಅಧಿಕಾರಿಗಳಾದ ಸುರೇಶ್‌ ಮತ್ತು ತೇಜವರ್ಧನ್‌.

ಸೋಮವಾರ ದಿವಸ ಜೋಡೆತ್ತುಗಳನ್ನು ಹೂಡುವದಿಲ್ಲ. ಆದರೆ ಈಗಾಗಲೇ ಬಿತ್ತನೆಯ ಅವಧಿ ಮುಗಿಯುತ್ತ ಬಂದಿದೆ. ಜೋಡೆತ್ತುಗಳಿಗೆ ಬೇಡಿಕೆ ಜಾಸ್ತಿ ಹಾಗೂ ದುಬಾರಿಯಾಗಿರುವುದರಿಂದ ಟ್ರ್ಯಾಕ್ಟರ್‌ ಅವಲಂಬಿಸಿದ್ದೇವೆ. ಇದರಿಂದ ಸಮಯ-ಹಣ ಉಳಿತಾಯವಾಗುತ್ತದೆ.
ಮೆಕ್ಕೇರ ಮಲ್ಲಿಕಾರ್ಜುನ, ರೈತ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.