ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಲು ಪೂಜಾರಿ ಸಲಹೆ

ಅನಧಿಕೃತ ಪಪೂ ಕಾಲೇಜುಗಳ ಬಗ್ಗೆ ಎಚ್ಚರವಿರಲಿ

Team Udayavani, Jun 19, 2019, 4:17 PM IST

19-June-31

ಮುದ್ದೇಬಿಹಾಳ: ಅಭ್ಯುದಯ ಪಿಯು ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಪಿಯು ಡಿಡಿ ಜೆ.ಎಸ್‌. ಪೂಜಾರಿ ಮಾತನಾಡಿದರು.

ಮುದ್ದೇಬಿಹಾಳ: ಜಿಲ್ಲೆಯಲ್ಲಿ ನಾಲ್ಕು ಸ್ತರದ ಪದವಿ ಪೂರ್ವ ಕಾಲೇಜುಗಳು ಇದ್ದು ಇವುಗಳಲ್ಲಿ ಅನುದಾನ ರಹಿತ ಕಾಲೇಜುಗಳ ಹೆಸರಲ್ಲಿ ಅನಧಿಕೃತ ಪಪೂ ಕಾಲೇಜುಗಳು ಅಲ್ಲಲ್ಲಿ ತಲೆ ಎತ್ತುತ್ತಿದ್ದು ಇಂಥ ಕಾಲೇಜುಗಳ ಬಗ್ಗೆ ಪಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಪಪೂ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜೆ.ಎಸ್‌. ಪೂಜಾರಿ ಸಾರ್ವಜನಿಕರಿಗೆ ಕಿವಿಮಾತು ಹೇಳಿದ್ದಾರೆ.

ಇಲ್ಲಿನ ಅಹಿಲ್ಯಾದೇವಿ ಹೋಳ್ಕರ್‌ ಸಂಸ್ಥೆಯಡಿ ನಡೆಯುತ್ತಿರುವ ಅಭ್ಯುದಯ ಸೈನ್ಸ್‌ ಪಿಯು ಕಾಲೇಜಿನಲ್ಲಿ ಪಿಯು ಫಲಿತಾಂಶ ಸುಧಾರಣೆ ಹಿನ್ನೆಲೆ ನಡೆದ ಮುದ್ದೇಬಿಹಾಳ ತಾಲೂಕು ಪಿಯು ಕಾಲೇಜುಗಳ ಪ್ರಾಂಶುಪಾಲರು, ಉಪ ಪ್ರಾಂಶುಪಾಲರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಅನುಮತಿ ಪಡೆಯದೆ ಸರ್ಕಾರದ ಅನುಮತಿ ನಿರೀಕ್ಷೆಯಲ್ಲಿ ಎಂದು ಬೋರ್ಡ್‌ ಹಾಕುವುದು, ಪ್ರವೇಶ ಪಡೆಯುವುದು, ಬ್ರಿಜ್‌ ಕೋರ್ಸ್‌ ನಡೆಸುತ್ತೇವೆ, ವಿದ್ಯಾರ್ಥಿಗಳಿಗೆ ಗೈಡ್‌ ಮಾಡುತ್ತೇವೆ ಎಂದು ಹೇಳುವಂಥ ಕಾಲೇಜುಗಳಿಗೆ ಮಕ್ಕಳನ್ನು ಸೇರಿಸಬಾರದು. ಅಕ್ಕಪಕ್ಕದ ಕಾಲೇಜಿನವರು ಇಂಥ ಕಾಲೇಜುಗಳ ಬಗ್ಗೆ ಇಲಾಖೆಗೆ ಮಾಹಿತಿ ಕೊಡಬೇಕು ಎಂದು ಹೇಳಿದರು.

ಅನುದಾನ ರಹಿತ ಕಾಲೇಜುಗಳು ಅನೇಕ ಬಾರಿ ನಿಯಮ ಮೀರುತ್ತವೆ. ಇಂಥ ಕಾಲೇಜುಗಳಲ್ಲಿ ಅನುಮತಿ ಪಡೆಯುವಾಗ ಇರುವ ಹುರುಪು ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆದಾಗ ಇರುವುದಿಲ್ಲ. ಇಂಥ ಕಾಲೇಜುಗಳು ಸರ್ಕಾರದ ಷರತ್ತು ಕಡ್ಡಾಯವಾಗಿ ಪಾಲಿಸಬೇಕು. ದಿಢೀರ್‌ನೆ ಕಾಲೇಜು ಬಂದ್‌ ಮಾಡುವಂತಿಲ್ಲ. ಸರ್ಕಾರದ ಅನುಮತಿ ಇದ್ದರೆ ಮಾತ್ರ ಕಾಲೇಜು ಪ್ರಾರಂಭಿಸಬೇಕು. ಅನುಮತಿ ಇರುವ ವಿಷಯಗಳನ್ನೇ ಬೋಧಿಸಬೇಕು. ಅನುಮತಿ ಪಡೆದ ಸ್ಥಳದಲ್ಲಿ ಕಾಲೇಜು ನಡೆಸದೆ ಬೇರೆ ಕಡೆ ನಡೆಸುವುದು, ಅನುಮತಿ ಪಡೆದ ಹೆಸರು ಬಿಟ್ಟು ಬೇರೆ ಹೆಸರಲ್ಲಿ ಕಾಲೇಜು ನಡೆಸುವುದು ಕಾನೂನು ಬಾಹಿರ. ಇಂಥ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ತೊಂದರೆ ಆದಲ್ಲಿ ಸಂಸ್ಥೆಯವರೇ ಹೊಣೆಯಾಗಬೇಕಾಗುತ್ತದೆ. ಇಂಥ ಕಾಲೇಜುಗಳ ಮೇಲೆ ಶಿಸ್ತು ಕ್ರಮ, ಕ್ರಿಮಿನಲ್ ಕೇಸ್‌ ಬುಕ್‌ ಮಾಡಲು ಅವಕಾಶ ಇದೆ ಎಂದರು.

ಸರ್ಕಾರಿ ಪಪೂ ಕಾಲೇಜಿನಲ್ಲಿ ಸೌಲಭ್ಯ ಕೊರತೆ ಇದೆ. ಇದು ಏಕಾಏಕಿ ಒಂದೇ ಬಾರಿ ಸರಿಹೋಗುವುದಲ್ಲ. ಬಹುತೇಕ ಕಾಲೇಜುಗಳಲ್ಲಿ ಮೂಲಸೌಕರ್ಯ ಬಹಳಷ್ಟು ಸುಧಾರಿಸಿದೆ. ವಿವಿಧ ಅನುದಾನ ಬಳಸಿಕೊಳ್ಳಲು ಅವಕಾಶ ಇದೆ. ಐದಾರು ವರ್ಷಗಳಲ್ಲಿ ಬಹಳ ಪ್ರಗತಿ ಸಾಧಿಸಲಾಗಿದೆ ಎಂದರು.

2020ರ ಪಿಯು ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯದ 10 ಸ್ಥಾನಗಳಲ್ಲಿ ಒಂದು ಸ್ಥಾನ ಪಡೆದುಕೊಳ್ಳುವ ರೀತಿ ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಇದಕ್ಕಾಗಿ ಇಲಾಖೆ ಸಿದ್ಧಪಡಿಸಿರುವ ಫಲಿತಾಂಶ ಸುಧಾರಣೆಯ ಅಂಶಗಳ ಮಾಹಿತಿ ಸದುಪಯೋಗ ಪಡೆದುಕೊಳ್ಳಬೇಕು. ಈಗಿನಿಂದಲೇ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಸಭೆಯಲ್ಲಿದ್ದ ಎಲ್ಲರಿಗೂ ಪರೀಕ್ಷಾ ಸುಧಾರಣೆ ಕುರಿತು ಸಿದ್ದಪಡಿಸಿರುವ ಬುಕ್‌ಲೆಟ್ ವಿತರಿಸಿ ಅವುಗಳಲ್ಲಿನ ಅಂಶಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚಿಸಲಾಯಿತು. ನಿವೃತ್ತ ಉಪ ನಿರ್ದೇಶಕ ಶಂಕರ ಅಮಾತೆ, ಅಭ್ಯುದಯ ಕಾಲೇಜು ನಿರ್ದೇಶಕ ರವಿ ಜಗಲಿ, ಪ್ರಾಂಶುಪಾಲರಾದ ಎಸ್‌.ಎಸ್‌. ಅಂಗಡಿ, ಕೆ.ಎ. ಉಪ್ಪಾರ, ಎಸ್‌.ಎನ್‌. ಬಿರಾದಾರ, ಎಸ್‌.ಎಸ್‌. ಹೊಸಮನಿ ಮತ್ತಿತರರು ವೇದಿಕೆಯಲ್ಲಿದ್ದರು.

ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು. ಸಾವಿತ್ರಿ ಸಂಗಡಿಗರು ಪ್ರಾರ್ಥಿಸಿದರು. ಅಭ್ಯುದಯ ಕಾಲೇಜು ಆಡಳಿತಾಧಿಕಾರಿ ಎಸ್‌.ಎಚ್. ಹಾಲ್ಯಾಳ ಸ್ವಾಗತಿಸಿದರು. ಪಿಯು ಡಿಡಿ ಕಚೇರಿ ಅಧಿಧೀಕ್ಷಕ ಬಿ.ಟಿ. ಗೊಂಗಡಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಎಸ್‌.ಕೆ. ಹರನಾಳ ನಿರೂಪಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.