ಬೆಟಗೇರಿಯಲ್ಲಿ ಗಾಂಧೀಜಿ ಚಿತಾಭಸ್ಮ ಸ್ಮಾರಕ

ಗಾಂಧೀಜಿ ಗದಗ-ಬೆಟಗೇರಿಗೆ ಭೇಟಿ ನೀಡಿ 100 ವರ್ಷ | ಬಾಪೂಜಿ ದೇಗುಲ ದುಸ್ಥಿತಿ ಕಂಡು ಮಮ್ಮಲ ಮರಗಿದ್ದ ಡಿಸಿ

Team Udayavani, Oct 2, 2021, 9:15 PM IST

fgtytry

ವರದಿ: ವೀರೇಂದ್ರ ನಾಗಲದಿನ್ನಿ

ಗದಗ: ರಾಷ್ಟ್ರಪಿತ ಮಹಾತ್ಮ ಗಾಂಧಿ ಜನ್ಮದಿನಾಚರಣೆಗೆ ದೇಶ ಸಿದ್ಧಗೊಳ್ಳುತ್ತಿರುವ ಬೆನ್ನಲ್ಲೇ ಗಾಂಧೀಜಿ ಅವರು ಗದಗ-ಬೆಟಗೇರಿಗೆ ಭೇಟಿ ನೀಡಿ 100 ವರ್ಷಗಳು ಸಂದ ಹಿನ್ನೆಲೆಯಲ್ಲಿ ಬೆಟಗೇರಿಯಲ್ಲಿರುವ ಬಾಪೂಜಿ ಅವರ ಚಿತಾಭಸ್ಮದ ಸ್ಥಳದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರ ವಿಶೇಷ ಕಾಳಜಿಯಿಂದ ನೂತನ ಅತ್ಯಾಕರ್ಷಕ ಸ್ಮಾರಕವೂ ಸಿದ್ಧಗೊಂಡಿದೆ. 1948ರಲ್ಲಿ ಗಾಂಧೀಜಿ  ಹತ್ಯೆ ಬಳಿಕ ರೈಲಿನಲ್ಲಿ ದೇಶಾದ್ಯಂತ ಸಾರ್ವಜನಿಕರಿಗೆ ಚಿತಾಭಸ್ಮದ ದರ್ಶನ ಭಾಗ್ಯ ಕರುಣಿಸಲಾಗಿತ್ತು. ಆಗ ನಗರದ ಸ್ವಾತಂತ್ರ್ಯ ಹೋರಾಟಗಾರರಾದ ಹನುಮಂತಸಾ ಬಾಕಳೆ, ಮಳೆಕರ್‌, ಜೂಜುಗಾರ ಇನ್ನಿತರರು ಧಾರವಾಡದ ಅಂದಿನ ಜಿಲ್ಲಾಧಿಕಾರಗಳ ನೆರವಿನಿಂದ ರಾಷ್ಟ್ರಪಿತನ ಚಿತಾಭಸ್ಮ ತಂದು ಬೆಟಗೇರಿಯ ವಿದ್ಯಾರಣ್ಯದಲ್ಲಿ ಸ್ಥಾಪಿಸಿದ್ದರು.

ಮಹಾತ್ಮನ ಸ್ಮಾರಕದ ಮೂಲಕ ಯುವ ಪೀಳಿಗೆಗೆ ಸ್ವಾತಂತ್ರ್ಯ ಚಳವಳಿಯ ಮಹತ್ವ, ಅಹಿಂಸಾವಾದ ಹಾಗೂ ಗಾಂಧಿ ತತ್ವಗಳನ್ನು ಸಾರಬೇಕು. ಗಾಂಧೀಜಿ ಚಿಂತನೆಗಳು ಜನಸಾಮಾನ್ಯರಿಗೆ ಪ್ರೇರಣೆಯಾಗಬೇಕು ಎಂಬುದು ಅಂದಿನ ಸ್ವಾತಂತ್ರ್ಯ ಸೇನಾನಿಗಳ ಕನಸಾಗಿತ್ತು. ಆದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸ್ಥಳೀಯರ ನಿರಾಸಕ್ತಿಯಿಂದಾಗಿ ಕೆಲ ವರ್ಷಗಳಿಂದ ನಿರ್ಲಕ್ಷ್ಯದಿಂದಾಗಿ ಗಾಂಧಿ ಗುಡಿ ಹಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಮೇಲ್ಛಾವಣಿಯಿಲ್ಲದೇ ಗಾಂಧಿ ತಾತನ ಚಿತಾಭಸ್ಮ ಬಿಸಿಲು, ಮಳೆಗೆ ಮೈಯೊಡ್ಡಿತ್ತು. ಗಾಂಧೀಜಿ ಸ್ಮಾರಕದ ಪಕ್ಕದಲ್ಲೇ ಚರಂಡಿ ನೀರು ಹರಿದುಹೋಗುತ್ತಿದ್ದು, ಅದರ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿತ್ತು. ಮತ್ತೂಬ್ಬರು ಹೇಳದ ಹೊರತಾಗಿ ಸ್ಮಾರಕವನ್ನು ಗುರುತಿಸುವುದು ಅಸಾಧ್ಯವಾಗಿತ್ತು.

ನೂತನ ಸ್ಮಾರಕ ಪ್ರೇರಣಾದಾಯಕ: ಗಾಂಧಿ ಸ್ಮಾರಕ ದುಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಇತ್ತೀಚೆಗೆ ಗಾಂಧಿ ಗುಡಿಗೆ ಭೇಟಿ ನೀಡಿದ್ದರು. ಬಾಪೂಜಿ ದೇಗುಲದ ದುಸ್ಥಿತಿಯನ್ನು ಕಂಡು ಮಮ್ಮಲ ಮರಗಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ನಗರಸಭೆ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸ್ಮಾರಕ ಪುನರ್‌ ನಿರ್ಮಾಣಕ್ಕೆ ಆದೇಶಿಸಿದರು. ಅದರ ಫಲವಾಗಿ ಕೇವಲ ಒಂದೇ ವಾರದಲ್ಲಿ ರಾಷ್ಟ್ರಪಿತನ ಅತ್ಯಾಕರ್ಷಕ ಸ್ಮಾರಕ ತಲೆ ಎತ್ತಿದೆ. ಇದು ಯುವಜನರು ಮತ್ತು ಸಂದರ್ಶಿತರಿಗೆ ಪ್ರೇರಣಾದಾಯಕವಾಗಿದೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.