ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬೊಮ್ಮಾಯಿ ಸರ್ಕಾರದಲ್ಲಿ ಗಡಿ ಜಿಲ್ಲೆಗೆ ಪ್ರಾತಿನಿಧ್ಯದ ಲೆಕ್ಕಾಚಾರ| ­18ರಲ್ಲಿ 13 ಶಾಸಕರು ಬಿಜೆಪಿ

Team Udayavani, Jul 30, 2021, 6:53 PM IST

fgdrty

ವರದಿ: ಕೇಶವ ಆದಿ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಸಿಂಹಪಾಲು ಪಡೆದಿದ್ದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಈಗ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಪ್ರಾತಿನಿಧ್ಯದ ಲೆಕ್ಕಾಚಾರ ಆರಂಭವಾಗಿದೆ.

ಬಿಜೆಪಿ ಸರಕಾರದ ನಾಯಕತ್ವ ಬದಲಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಪದವಿ ಅಲಂಕರಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ನಾಲ್ವರು ಸಚಿವರ ಕತೆ ಏನು? ಹೊಸ ಸರಕಾರದಲ್ಲಿ ಯಾರೆಲ್ಲ ಸ್ಥಾನ ಪಡೆಯುತ್ತಾರೆ? ಜಿಲ್ಲೆಗೆ ಗರಿಷ್ಠ ಸ್ಥಾನ ಮತ್ತು ಉಪಮುಖ್ಯಮಂತ್ರಿ ಪಟ್ಟ ಸಿಗಬಹುದೇ? ಎಂಬೆಲ್ಲ ಲೆಕ್ಕಾಚಾರ, ಚರ್ಚೆ ಆರಂಭವಾಗಿದೆ.

ಸಚಿವ ಸ್ಥಾನಕ್ಕಾಗಿ ಬಹಳ ಜೋರಾದ ಪ್ರಯತ್ನಗಳೂ ಸಹ ನಡೆದಿವೆ. ಆದರೆ ಯಡಿಯೂರಪ್ಪ ಸಂಪುಟದಲ್ಲಿದ್ದ ಎಲ್ಲರಿಗೂ ಸ್ಥಾನ ದೊರೆಯುವುದು ಅನುಮಾನ. ಹೊಸ ಮುಖಗಳಿಗೆ ಅವಕಾಶ ಸಿಗುವ ಸಾಧ್ಯತೆ ಎಂಬುದು ಪಕ್ಷದ ಮೂಲಗಳ ಹೇಳಿಕೆ.

ಬೆಳಗಾವಿ ಜಿಲ್ಲೆಯ ಒಟ್ಟು 18 ಶಾಸಕರ ಪೈಕಿ 13 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಯಡಿಯೂರಪ್ಪ ಸರಕಾರದಲ್ಲಿ ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಶಶಿಕಲಾ ಜೊಲ್ಲೆ ಹಾಗೂ ಉಮೇಶ ಕತ್ತಿ ಸಚಿವರಾಗಿದ್ದರು. ಈಗ ಬೊಮ್ಮಾಯಿ ಸರಕಾರದಲ್ಲಿ ಈ ಐವರಲ್ಲದೆ ಶಾಸಕರಾದ ಆನಂದ ಮಾಮನಿ, ದುರ್ಯೋಧನ ಐಹೊಳೆ, ಪಿ ರಾಜೀವ, ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಮಹೇಶ ಕುಮಟಳ್ಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಆರಂಭಿಸಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್‌ ಸರಕಾರದ ಪತನಕ್ಕೆ ಕಾರಣರಾದ ಜಿಲ್ಲೆಯ ರಮೇಶ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ ಯಡಿಯೂರಪ್ಪ ಸರಕಾರದಲ್ಲಿ ನಿರೀಕ್ಷೆಯಂತೆ ಸಚಿವ ಸ್ಥಾನ ಪಡೆದಿದ್ದರು. ರಮೇಶ ಜಾರಕಿಹೊಳಿ ತಮ್ಮ ಬೇಡಿಕೆಯಂತೆ ನೀರಾವರಿ ಖಾತೆ ಸಹ ಪಡೆದಿದ್ದರು. ಲಕ್ಷ್ಮಣ ಸವದಿ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ತಮ್ಮ ಪ್ರಭಾವ ಬಳಸಿ ಸಚಿವರಾಗಿದ್ದಲ್ಲದೆ ಉಪಮುಖ್ಯಮಂತ್ರಿ ಹುದ್ದೆ ಪಡೆದು ಎಲ್ಲರನ್ನು ಅಚ್ಚರಿಗೊಳಿಸಿದ್ದರು. ಇದಾದ ಬಳಿಕ ಸತತ ಪ್ರಯತ್ನದಿಂದ ಉಮೇಶ ಕತ್ತಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರು. ಇನ್ನೊಂದು ಕಡೆ ಮಹಿಳಾ ಕೋಟಾದಲ್ಲಿ ಶಶಿಕಲಾ ಜೊಲ್ಲೆ ಸಚಿವರಾಗಿದ್ದರು. ಈಗ ಇವರೆಲ್ಲರ ಸ್ಥಾನ ಏನು ಎಂಬ ಕುತೂಹಲ ಮೂಡಿದೆ.

ಯಡಿಯೂರಪ್ಪ ಸರಕಾರದಲ್ಲಿ ಬೆಂಗಳೂರು ನಂತರ ಬೆಳಗಾವಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಪ್ರಕರಣವೊಂದರಲ್ಲಿ ಸಿಲುಕಿದ್ದ ರಮೇಶ ಚಾರಕಿಹೊಳಿ ಅವರು ವಿರೋಧ ಪಕ್ಷದವರ ಒತ್ತಡ ಮತ್ತು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿ ರಮೇಶ ಜಾರಕಿಹೊಳಿ ಸಚಿವ ಸ್ಥಾನ ಪಡೆಯುವರೇ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.